Homeಮುಖಪುಟಮೌನವಾಗಿರಲ್ಲ, ಪ್ಯಾಲೆಸ್ತೀನಿಯರ ಪರ ಹೋರಾಡುತ್ತೇನೆ: ಅಮೆರಿಕ ಸಂಸದೆ ರಶೀದಾ

ಮೌನವಾಗಿರಲ್ಲ, ಪ್ಯಾಲೆಸ್ತೀನಿಯರ ಪರ ಹೋರಾಡುತ್ತೇನೆ: ಅಮೆರಿಕ ಸಂಸದೆ ರಶೀದಾ

- Advertisement -
- Advertisement -

”ನಾನು ಮೌನವಾಗಿರಲು ಸಾಧ್ಯವಿಲ್ಲ. ನನ್ನ ಮಾತುಗಳಿಂದ ವಿಮುಖವಾಗುವ ಪ್ರಶ್ನೆಯೇ ಇಲ್ಲ. ಪ್ಯಾಲೆಸ್ತೀನ್ ಜನರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಅಮೆರಿಕ ಕಾಂಗ್ರೆಸ್‌ನಲ್ಲಿ ಏಕೈಕ ಪ್ಯಾಲೆಸ್ತೀನಿ ಅಮೆರಿಕನ್ ಸದಸ್ಯೆಯಾಗಿರುವ ರಶೀದಾ ತೈಬ್ ಹೇಳಿದ್ದಾರೆ.

ತಮ್ಮವಿರುದ್ಧದ ವಾಗ್ದಂಡನೆ ನಿರ್ಣಯ ವಿರುದ್ಧ ಮಾತನಾಡಿದ ಅವರು, ”ಇಸ್ರೇಲ್- ಹಮಾಸ್ ಯುದ್ಧ ಬಗೆಗಿನ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಇದನ್ನು ಹೇಳಬೇಕು ಎನ್ನುವುದು ನನಗೇ ನಂಬಲಾಗುತ್ತಿಲ್ಲ ಆದರೆ ಪ್ಯಾಲೆಸ್ತೀನ್ ಜನರನ್ನು ಬಳಸಿ ಬಿಸಾಕಲು ಸಾಧ್ಯವಿಲ್ಲ” ಎಂದು ಗದ್ಗದಿತರಾದರು.

ಪ್ಯಾಲೆಸ್ತೀನ್‌ರ ಅಳಲು ಮತ್ತು ಇಸ್ರೇಲಿ ಮಕ್ಕಳ ಧ್ವನಿ ನಡುವೆ ನನಗೆ ಯಾವುದೇ ಭಿನ್ನತೆ ಇಲ್ಲ ಎಂದು ರಶೀದಾ ಸ್ಪಷ್ಟಪಡಿಸಿದರು.

ಆ ದಿನ ತಡರಾತ್ರಿ ಡೆಮಾಕ್ರಟಿಕ್ ಪಕ್ಷದ 22 ಮಂದಿ ತ್ರೈಬ್ ಅವರಿಗೆ ವಾಗ್ದಂಡನೆ ವಿಧಿಸುವ ನಿರ್ಣಯದ ಬಗ್ಗೆ ಬಹುತೇಕ ಎಲ್ಲ ರಿಪಬ್ಲಿಕನ್ನರ ಜತೆಯಾದರು. ಈ ಹಂತದಲ್ಲಿ ಡೆಮಾಕ್ರೆಟಿಕ್ ಪಕ್ಷದ ಅವರ ಆಪ್ತ ಬಳಗ, ಅಂದರೆ ಪ್ರಗತಿಪರ ಗುಂಪು ಅವರ ರಕ್ಷಣೆಗೆ ಮುಂದಾಯಿತು.

ಕಾಂಗ್ರೆಸ್ ಸದಸ್ಯರ ಉಚ್ಚಾಟನೆಗಿಂತ ಒಂದು ಹಂತ ಕಡಿಮೆ ಎನಿಸಿದ ವಾಗ್ದಂಡನೆ ನಿರ್ಣಯವನ್ನು ತ್ರೈಬ್ ವಿರುದ್ಧ ಜಾರ್ಜಿಯಾದ ರಿಪಬ್ಲಿಕನ್ ಸದಸ್ಯ ರಿಚ್ ಮೆಕ್ರಾಮಿಕ್ ಮಂಡಿಸಿದ್ದರು.

ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಗ್ಗೆ ತಪ್ಪಾಗಿ ವಿವರಣೆ ನೀಡಿದ್ದಾರೆ ಮತ್ತು ಇಸ್ರೇಲ್ ದೇಶದ ಧ್ವಂಸಕ್ಕೆ ಕರೆ ನೀಡಿದ್ದಾರೆ ಎಂದು ಆಪಾದಿಸಿ ಈ ನಿರ್ಣಯ ಮಂಡಿಸಿದ್ದರು. ಇದು ಆಂಗೀಕಾರವಾಗುವ ಮೂಲಕ ರಶೀದಾ 1789ರ ಬಳಿಕ ಈ ಜನಪ್ರತಿನಿಧಿ ಸಭೆಯಲ್ಲಿ ವಾಗ್ದಂಡನೆಗೆ ಗುರಿಯಾದ 26ನೇ ಸದಸ್ಯೆ ಎನಿಸಿಕೊಂಡರು.

ಈ ಹಿಂದೆ ಅವರು ಜೋ ಬಿಡೆನ್ “ನರಮೇಧ”ವನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಆನಂತರ ಗಾಜಾದಲ್ಲಿ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಮಧ್ಯೆ ತಕ್ಷಣದ ಕದನ ವಿರಾಮಕ್ಕೆ ಬೈಡನ್ ಕರೆ ನೀಡಿದರು.

ಇದನ್ನೂ ಓದಿ: ಗಾಝಾ ಮೇಲಿನ ದಾಳಿಗೆ US ಬೆಂಬಲ: ಅಮೆರಿಕದ ದೀಪಾವಳಿ ಪಾರ್ಟಿ ಆಹ್ವಾನ ತಿರಸ್ಕರಿಸಿದ ಕವಯಿತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...