Homeಮುಖಪುಟಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಪ್ರಧಾನಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?" ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

- Advertisement -
- Advertisement -

ಆರ್‌ಟಿ-ಪಿಸಿಆರ್ ವರದಿಯಿಲ್ಲದೆ ಪಶ್ಚಿಮ ಬಂಗಾಳಕ್ಕೆ ಬರುವ ಹೊರಗಿನವರಿಗೆ ಅನುಮತಿಸದಂತೆ ಚುನಾವಣಾ ಆಯೋಗಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಬಿಜೆಪಿಯ ರ್‍ಯಾಲಿಗಳಲ್ಲಿ ಹೊರಗಿನಿಂದ ಬಂದು ಹಾಜರಾಗುವವರು ಮತ್ತು ಕಾರ್ಯಕ್ರಮ ಸಂಘಟಿಸುವವರು ಕೊರೊನಾ ವೈರಸ್‌ ಸೋಂಕನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಚುನಾವಣೆಗಳನ್ನು ನಡೆಸುವ ಪ್ರಯತ್ನದಲ್ಲಿ, ಕೊರೊನಾ ಸೋಂಕನ್ನು ನಿರ್ಲಕ್ಷಿಸಿದೆ, ಇದರ ಪರಿಣಾಮವಾಗಿ ಈಗ ಪ್ರಕರಣಗಳು ಹೆಚ್ಚುತ್ತಿವೆ. ಕೋವಿಡ್ -19 ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯಿಲ್ಲದೆ ಯಾರನ್ನೂ ರಾಜ್ಯಕ್ಕೆ ಪ್ರವೇಶಿಸಲು ಅನುಮತಿಸಬಾರದು ಎಂದು ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ ”ಎಂದು ಉತ್ತರ 24 ಪರಗಣಗಳಲ್ಲಿ ನಡೆದ ಸಾರ್ವಜನಿಕ ಪ್ರಚಾರ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಗುರುವಾರ 6,769 ಹೊಸ ಪ್ರಕರಣಗಳು ಪತ್ತೆಯಾಗಿವೆ. 2020 ರ ಆರಂಭದಲ್ಲಿ ಇಷ್ಟು ಪ್ರಕರಣಗಳು ವರದಿಯಾಗಿದ್ದವು. ನಂತರದ ದಿನಗಳಲ್ಲಿ ಗುರುವಾರವೇ ರಾಜ್ಯದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಚುನಾವಣಾ ಕಾರ್ಯಕ್ರಮವನ್ನು ಆಯೋಜಿಸಲು, ವೇದಿಕೆ ಮತ್ತು ಪೆಂಡಾಲ್‌ಗಳನ್ನು ನಿರ್ಮಿಸಲು ಪ್ರಧಾನಿ ಮೋದಿ ರ್‍ಯಾಲಿ ಇದ್ದಾಗ ರಾಜ್ಯದ ಹೊರಗಿನಿಂದ ಸಾವಿರಾರು ಜನರು ಬರುತ್ತಿದ್ದಾರೆ. ಎಲ್ಲಾ ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳನ್ನು ಅವರಿಗಾಗಿ ಕಾಯ್ದಿರಿಸಲಾಗುತ್ತಿದೆ. ಅವರು ಕೊರೊನಾ ಸೋಂಕಿತರಾಗಿದ್ದಾರೆಯೇ ಇಲ್ಲವೇ ಎಂದು ಹೇಗೆ ತಿಳಿಯುವುದು? ಅವರು ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಗೂ ಒಳಗಾಗಿರುವುದಿಲ್ಲ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇತರ ರಾಜ್ಯಗಳ ಬಿಜೆಪಿ ಮುಖಂಡರೊಂದಿಗೆ ಹೊರಗಿನವರು ಜೊತೆಯಾಗಿರುವುದರಿಂದ ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗಿದೆ ಎಂದು ಟಿಎಂಸಿ ಮುಖ್ಯಸ್ಥರು ಕಳೆದ ಕೆಲವು ದಿನಗಳಿಂದ ಆರೋಪಿಸುತ್ತಿದ್ದಾರೆ.

“ನೆಗೆಟಿವ್ ವರದಿಯಿಲ್ಲದೆ ಬಂಗಾಳದಲ್ಲಿ ಹೊರಗಿನವರಿಗೆ ಅವಕಾಶ ನೀಡದಂತೆ ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ. ಪ್ರಧಾನಿ ಮೋದಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?” ಎಂದು ಪ್ರಶ್ನಿಸಿದ್ದಾರೆ.

“ಕೊರೊನಾ ಸೋಂಕನ್ನು ಬಂಗಾಳದಲ್ಲಿ ಹರಡಬೇಡಿ, ನರೇಂದ್ರ ಮೋದಿಯವರೇ, ನಾವು ನಿಮ್ಮನ್ನು ಪದೇ ಪದೇ ಒತ್ತಾಯಿಸುತ್ತಿದ್ದೇವೆ. ನೀವು ರಾಜಕೀಯವನ್ನು ಹೊರತುಪಡಿಸಿ ಬೇರೆ ಏನನ್ನೂ ಮಾಡಿಲ್ಲ” ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಕೊರೊನಾ ಉಲ್ಬಣ ಹಿನ್ನೆಲೆ ಉಳಿದ ಎಲ್ಲಾ ಹಂತದ ವಿಧಾನಸಭಾ ಚುನಾವಣೆಯನ್ನು ಒಂದೇ ಸಮಯದಲ್ಲಿ ನಡೆಸಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದರೆ ಅದು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...