Homeಮುಖಪುಟಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಪ್ರಧಾನಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?" ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

- Advertisement -
- Advertisement -

ಆರ್‌ಟಿ-ಪಿಸಿಆರ್ ವರದಿಯಿಲ್ಲದೆ ಪಶ್ಚಿಮ ಬಂಗಾಳಕ್ಕೆ ಬರುವ ಹೊರಗಿನವರಿಗೆ ಅನುಮತಿಸದಂತೆ ಚುನಾವಣಾ ಆಯೋಗಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಬಿಜೆಪಿಯ ರ್‍ಯಾಲಿಗಳಲ್ಲಿ ಹೊರಗಿನಿಂದ ಬಂದು ಹಾಜರಾಗುವವರು ಮತ್ತು ಕಾರ್ಯಕ್ರಮ ಸಂಘಟಿಸುವವರು ಕೊರೊನಾ ವೈರಸ್‌ ಸೋಂಕನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಚುನಾವಣೆಗಳನ್ನು ನಡೆಸುವ ಪ್ರಯತ್ನದಲ್ಲಿ, ಕೊರೊನಾ ಸೋಂಕನ್ನು ನಿರ್ಲಕ್ಷಿಸಿದೆ, ಇದರ ಪರಿಣಾಮವಾಗಿ ಈಗ ಪ್ರಕರಣಗಳು ಹೆಚ್ಚುತ್ತಿವೆ. ಕೋವಿಡ್ -19 ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯಿಲ್ಲದೆ ಯಾರನ್ನೂ ರಾಜ್ಯಕ್ಕೆ ಪ್ರವೇಶಿಸಲು ಅನುಮತಿಸಬಾರದು ಎಂದು ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ ”ಎಂದು ಉತ್ತರ 24 ಪರಗಣಗಳಲ್ಲಿ ನಡೆದ ಸಾರ್ವಜನಿಕ ಪ್ರಚಾರ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಗುರುವಾರ 6,769 ಹೊಸ ಪ್ರಕರಣಗಳು ಪತ್ತೆಯಾಗಿವೆ. 2020 ರ ಆರಂಭದಲ್ಲಿ ಇಷ್ಟು ಪ್ರಕರಣಗಳು ವರದಿಯಾಗಿದ್ದವು. ನಂತರದ ದಿನಗಳಲ್ಲಿ ಗುರುವಾರವೇ ರಾಜ್ಯದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಚುನಾವಣಾ ಕಾರ್ಯಕ್ರಮವನ್ನು ಆಯೋಜಿಸಲು, ವೇದಿಕೆ ಮತ್ತು ಪೆಂಡಾಲ್‌ಗಳನ್ನು ನಿರ್ಮಿಸಲು ಪ್ರಧಾನಿ ಮೋದಿ ರ್‍ಯಾಲಿ ಇದ್ದಾಗ ರಾಜ್ಯದ ಹೊರಗಿನಿಂದ ಸಾವಿರಾರು ಜನರು ಬರುತ್ತಿದ್ದಾರೆ. ಎಲ್ಲಾ ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳನ್ನು ಅವರಿಗಾಗಿ ಕಾಯ್ದಿರಿಸಲಾಗುತ್ತಿದೆ. ಅವರು ಕೊರೊನಾ ಸೋಂಕಿತರಾಗಿದ್ದಾರೆಯೇ ಇಲ್ಲವೇ ಎಂದು ಹೇಗೆ ತಿಳಿಯುವುದು? ಅವರು ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಗೂ ಒಳಗಾಗಿರುವುದಿಲ್ಲ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇತರ ರಾಜ್ಯಗಳ ಬಿಜೆಪಿ ಮುಖಂಡರೊಂದಿಗೆ ಹೊರಗಿನವರು ಜೊತೆಯಾಗಿರುವುದರಿಂದ ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗಿದೆ ಎಂದು ಟಿಎಂಸಿ ಮುಖ್ಯಸ್ಥರು ಕಳೆದ ಕೆಲವು ದಿನಗಳಿಂದ ಆರೋಪಿಸುತ್ತಿದ್ದಾರೆ.

“ನೆಗೆಟಿವ್ ವರದಿಯಿಲ್ಲದೆ ಬಂಗಾಳದಲ್ಲಿ ಹೊರಗಿನವರಿಗೆ ಅವಕಾಶ ನೀಡದಂತೆ ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ. ಪ್ರಧಾನಿ ಮೋದಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?” ಎಂದು ಪ್ರಶ್ನಿಸಿದ್ದಾರೆ.

“ಕೊರೊನಾ ಸೋಂಕನ್ನು ಬಂಗಾಳದಲ್ಲಿ ಹರಡಬೇಡಿ, ನರೇಂದ್ರ ಮೋದಿಯವರೇ, ನಾವು ನಿಮ್ಮನ್ನು ಪದೇ ಪದೇ ಒತ್ತಾಯಿಸುತ್ತಿದ್ದೇವೆ. ನೀವು ರಾಜಕೀಯವನ್ನು ಹೊರತುಪಡಿಸಿ ಬೇರೆ ಏನನ್ನೂ ಮಾಡಿಲ್ಲ” ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಕೊರೊನಾ ಉಲ್ಬಣ ಹಿನ್ನೆಲೆ ಉಳಿದ ಎಲ್ಲಾ ಹಂತದ ವಿಧಾನಸಭಾ ಚುನಾವಣೆಯನ್ನು ಒಂದೇ ಸಮಯದಲ್ಲಿ ನಡೆಸಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದರೆ ಅದು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...