Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...