Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...