Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...