Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...