Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...