Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....