Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...