Homeಕರ್ನಾಟಕ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

- Advertisement -
- Advertisement -

“ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ನಮ್ಮ ಮತ ಇಲ್ಲ, ಈ ಸಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರುವುದಿಲ್ಲ” ಎಂದು ನ್ಯಾಷನಲ್‌ ಹೆಲ್ತ್‌ ಮಿಷನ್‌ (ಎಂಎಚ್‌ಎಂ) ಒಳಗುತ್ತಿಗೆ ನೌಕರರು ಗುಡುಗಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಕಳೆದ ನಲವತ್ತು ದಿನಗಳಿಂದ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘದ ವತಿಯಿಂದ ನಡೆಯುತ್ತಿದ್ದ ಹೋರಾಟವನ್ನು ಕೈಬಿಟ್ಟ ನೌಕರರು, “ನಮ್ಮ ಹೋರಾಟ ಹಾಗೂ ಮನವಿ ಮನವಿಗೆ ಸಕಾರಾತ್ಮಕವಾಗಿ ಬಿಜೆಪಿ ಸರ್ಕಾರ ಸ್ಪಂದಿಸಲಿಲ್ಲ, ಎಸ್ಮಾ ಕಾಯ್ದೆಯನ್ನು ಜಾರಿಗೊಳಿಸುತ್ತೇನೆ ಎಂದಿತು, ಕಾನೂನಿನ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕಲು ಭ್ರಷ್ಟ ಸರ್ಕಾರ ಪ್ರಯತ್ನಿಸಿತು” ಎಂದು ಆರೋಪಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರು 26,937 ಜನರಿದ್ದೇವೆ. ನಮ್ಮ ಕುಟುಂಬಗಳು ಹಾಗೂ ನೆರೆಹೊರೆಯವರು ಬಿಜೆಪಿಗೆ ಮತವನ್ನು ಹಾಕುವುದಿಲ್ಲ. ಯಾವುದೇ ಕಾರಣಕ್ಕೂ ಮತವನ್ನು ಇವರಿಗೆ ಹಾಕುವುದಿಲ್ಲ” ಎಂದು ಪ್ರತಿಜ್ಞೆಯನ್ನು ಸ್ವೀಕರಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಖಾಯಮಾತಿ ಮಾಡುವುದಾಗಿ ಭರವಸೆಯನ್ನು ನೀಡಿ, ತಮ್ಮ ಪ್ರಣಾಳಿಕೆಯಲ್ಲಿ ಹಾಕಿಕೊಳ್ಳುವ ಪಕ್ಷಕ್ಕೆ ಮಾತ್ರ ನಮ್ಮ ಮತವನ್ನು ಹಾಕುತ್ತೇವೆ. ಪ್ರಜ್ಞಾವಂತರಾಗಿ ಮತ ಚಲಾವಣೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮನ್ನು ಉಳಿಸದ ಸರ್ಕಾರವನ್ನು, ಉಳಿಸದ ಪಕ್ಷವನ್ನು ನಾವು ಎಂದಿಗೂ ಬೆಂಬಲಿಸುವುದಿಲ್ಲ. ನಮ್ಮ ಮನೆ ಬಾಗಿಲಿಗೆ ಮತ ಕೇಳಲು ಬರುವ ಪ್ರತಿಯೊಬ್ಬ ಬಿಜೆಪಿ ಅಭ್ಯರ್ಥಿಗೂ ಪ್ರಶ್ನೆಗಳನ್ನು ಕೇಳೋಣ. ನಾವು ಹೋರಾಟಕ್ಕೆ ಕುಳಿತ್ತಿದ್ದಾಗ ಎಲ್ಲಿ ಹೋಗಿದ್ದೀರಿ ಎಂದು ಪ್ರಶ್ನಿಸುತ್ತೇವೆ” ಎಂದು ಶಪಥ ಮಾಡಿದ್ದಾರೆ. ಆರೋಗ್ಯ ಸಚಿವ ಡಾ.ಸುಧಾಕರ್‌ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

ರಾಮನಗರ ಜಿಲ್ಲೆಯ ಎನ್‌ಎಚ್‌ಎಂ ಉದ್ಯೋಗಿ ಪದ್ಮರೇಖಾ ಮಾತನಾಡಿ, “ಫೆಬ್ರುವರಿ 13ನೇ ತಾರೀನಿಂದ ಹೋರಾಟ ನಡೆಯಿತು. ಈ ಮುಷ್ಕರಕ್ಕೆ ನಿರೀಕ್ಷಿತ ಫಲ ದೊರೆತ್ತಿಲ್ಲ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ ಹೊರತು, ಹೋರಾಟವನ್ನಲ್ಲ” ಎಂದು ಎಚ್ಚರಿಸಿದ್ದಾರೆ.

“ರಾಜ್ಯದ ಮೂಲೆಮೂಲೆಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ಗೆ ಬಂದ ನೌಕರರು ಸರ್ಕಾರದ ಮನವೊಲಿಸುವ ಪ್ರಯತ್ನವನ್ನು ಮಾಡಿದರು. ನಮ್ಮ ಮನವಿಗೆ ಸ್ಪಂದಿಸುವುದಿರಲಿ, ಕನಿಷ್ಠ ಸಾಂತ್ವನವನ್ನೂ ನೀಡಲಿಲ್ಲ. ನಮಗೆ ನೀಡಿರುವ ನೋವಿಗೆ ಬಿಜೆಪಿ ಪಶ್ಚಾತ್ತಾಪಪಡಲಿದೆ” ಎಂದಿದ್ದಾರೆ.

“ಕನಿಷ್ಠ ಹೇಳಿಕೆಯನ್ನು ನೀಡದ ಆರೋಗ್ಯ ಸಚಿವರಿಗೆ, ಗಂಟೆಗೊಂದು ಗಳಿಗೆಗೊಂದು ಮಾತನಾಡಿದ ಮುಖ್ಯಮಂತ್ರಿಯವರಿಗೆ ಧಿಕ್ಕಾರ” ಎಂದು ಕೂಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...