Homeಕರ್ನಾಟಕ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

- Advertisement -
- Advertisement -

“ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ನಮ್ಮ ಮತ ಇಲ್ಲ, ಈ ಸಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರುವುದಿಲ್ಲ” ಎಂದು ನ್ಯಾಷನಲ್‌ ಹೆಲ್ತ್‌ ಮಿಷನ್‌ (ಎಂಎಚ್‌ಎಂ) ಒಳಗುತ್ತಿಗೆ ನೌಕರರು ಗುಡುಗಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಕಳೆದ ನಲವತ್ತು ದಿನಗಳಿಂದ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘದ ವತಿಯಿಂದ ನಡೆಯುತ್ತಿದ್ದ ಹೋರಾಟವನ್ನು ಕೈಬಿಟ್ಟ ನೌಕರರು, “ನಮ್ಮ ಹೋರಾಟ ಹಾಗೂ ಮನವಿ ಮನವಿಗೆ ಸಕಾರಾತ್ಮಕವಾಗಿ ಬಿಜೆಪಿ ಸರ್ಕಾರ ಸ್ಪಂದಿಸಲಿಲ್ಲ, ಎಸ್ಮಾ ಕಾಯ್ದೆಯನ್ನು ಜಾರಿಗೊಳಿಸುತ್ತೇನೆ ಎಂದಿತು, ಕಾನೂನಿನ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕಲು ಭ್ರಷ್ಟ ಸರ್ಕಾರ ಪ್ರಯತ್ನಿಸಿತು” ಎಂದು ಆರೋಪಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರು 26,937 ಜನರಿದ್ದೇವೆ. ನಮ್ಮ ಕುಟುಂಬಗಳು ಹಾಗೂ ನೆರೆಹೊರೆಯವರು ಬಿಜೆಪಿಗೆ ಮತವನ್ನು ಹಾಕುವುದಿಲ್ಲ. ಯಾವುದೇ ಕಾರಣಕ್ಕೂ ಮತವನ್ನು ಇವರಿಗೆ ಹಾಕುವುದಿಲ್ಲ” ಎಂದು ಪ್ರತಿಜ್ಞೆಯನ್ನು ಸ್ವೀಕರಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಖಾಯಮಾತಿ ಮಾಡುವುದಾಗಿ ಭರವಸೆಯನ್ನು ನೀಡಿ, ತಮ್ಮ ಪ್ರಣಾಳಿಕೆಯಲ್ಲಿ ಹಾಕಿಕೊಳ್ಳುವ ಪಕ್ಷಕ್ಕೆ ಮಾತ್ರ ನಮ್ಮ ಮತವನ್ನು ಹಾಕುತ್ತೇವೆ. ಪ್ರಜ್ಞಾವಂತರಾಗಿ ಮತ ಚಲಾವಣೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮನ್ನು ಉಳಿಸದ ಸರ್ಕಾರವನ್ನು, ಉಳಿಸದ ಪಕ್ಷವನ್ನು ನಾವು ಎಂದಿಗೂ ಬೆಂಬಲಿಸುವುದಿಲ್ಲ. ನಮ್ಮ ಮನೆ ಬಾಗಿಲಿಗೆ ಮತ ಕೇಳಲು ಬರುವ ಪ್ರತಿಯೊಬ್ಬ ಬಿಜೆಪಿ ಅಭ್ಯರ್ಥಿಗೂ ಪ್ರಶ್ನೆಗಳನ್ನು ಕೇಳೋಣ. ನಾವು ಹೋರಾಟಕ್ಕೆ ಕುಳಿತ್ತಿದ್ದಾಗ ಎಲ್ಲಿ ಹೋಗಿದ್ದೀರಿ ಎಂದು ಪ್ರಶ್ನಿಸುತ್ತೇವೆ” ಎಂದು ಶಪಥ ಮಾಡಿದ್ದಾರೆ. ಆರೋಗ್ಯ ಸಚಿವ ಡಾ.ಸುಧಾಕರ್‌ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

ರಾಮನಗರ ಜಿಲ್ಲೆಯ ಎನ್‌ಎಚ್‌ಎಂ ಉದ್ಯೋಗಿ ಪದ್ಮರೇಖಾ ಮಾತನಾಡಿ, “ಫೆಬ್ರುವರಿ 13ನೇ ತಾರೀನಿಂದ ಹೋರಾಟ ನಡೆಯಿತು. ಈ ಮುಷ್ಕರಕ್ಕೆ ನಿರೀಕ್ಷಿತ ಫಲ ದೊರೆತ್ತಿಲ್ಲ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ ಹೊರತು, ಹೋರಾಟವನ್ನಲ್ಲ” ಎಂದು ಎಚ್ಚರಿಸಿದ್ದಾರೆ.

“ರಾಜ್ಯದ ಮೂಲೆಮೂಲೆಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ಗೆ ಬಂದ ನೌಕರರು ಸರ್ಕಾರದ ಮನವೊಲಿಸುವ ಪ್ರಯತ್ನವನ್ನು ಮಾಡಿದರು. ನಮ್ಮ ಮನವಿಗೆ ಸ್ಪಂದಿಸುವುದಿರಲಿ, ಕನಿಷ್ಠ ಸಾಂತ್ವನವನ್ನೂ ನೀಡಲಿಲ್ಲ. ನಮಗೆ ನೀಡಿರುವ ನೋವಿಗೆ ಬಿಜೆಪಿ ಪಶ್ಚಾತ್ತಾಪಪಡಲಿದೆ” ಎಂದಿದ್ದಾರೆ.

“ಕನಿಷ್ಠ ಹೇಳಿಕೆಯನ್ನು ನೀಡದ ಆರೋಗ್ಯ ಸಚಿವರಿಗೆ, ಗಂಟೆಗೊಂದು ಗಳಿಗೆಗೊಂದು ಮಾತನಾಡಿದ ಮುಖ್ಯಮಂತ್ರಿಯವರಿಗೆ ಧಿಕ್ಕಾರ” ಎಂದು ಕೂಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...