Homeಕರ್ನಾಟಕ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

- Advertisement -
- Advertisement -

“ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ನಮ್ಮ ಮತ ಇಲ್ಲ, ಈ ಸಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರುವುದಿಲ್ಲ” ಎಂದು ನ್ಯಾಷನಲ್‌ ಹೆಲ್ತ್‌ ಮಿಷನ್‌ (ಎಂಎಚ್‌ಎಂ) ಒಳಗುತ್ತಿಗೆ ನೌಕರರು ಗುಡುಗಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಕಳೆದ ನಲವತ್ತು ದಿನಗಳಿಂದ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘದ ವತಿಯಿಂದ ನಡೆಯುತ್ತಿದ್ದ ಹೋರಾಟವನ್ನು ಕೈಬಿಟ್ಟ ನೌಕರರು, “ನಮ್ಮ ಹೋರಾಟ ಹಾಗೂ ಮನವಿ ಮನವಿಗೆ ಸಕಾರಾತ್ಮಕವಾಗಿ ಬಿಜೆಪಿ ಸರ್ಕಾರ ಸ್ಪಂದಿಸಲಿಲ್ಲ, ಎಸ್ಮಾ ಕಾಯ್ದೆಯನ್ನು ಜಾರಿಗೊಳಿಸುತ್ತೇನೆ ಎಂದಿತು, ಕಾನೂನಿನ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕಲು ಭ್ರಷ್ಟ ಸರ್ಕಾರ ಪ್ರಯತ್ನಿಸಿತು” ಎಂದು ಆರೋಪಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರು 26,937 ಜನರಿದ್ದೇವೆ. ನಮ್ಮ ಕುಟುಂಬಗಳು ಹಾಗೂ ನೆರೆಹೊರೆಯವರು ಬಿಜೆಪಿಗೆ ಮತವನ್ನು ಹಾಕುವುದಿಲ್ಲ. ಯಾವುದೇ ಕಾರಣಕ್ಕೂ ಮತವನ್ನು ಇವರಿಗೆ ಹಾಕುವುದಿಲ್ಲ” ಎಂದು ಪ್ರತಿಜ್ಞೆಯನ್ನು ಸ್ವೀಕರಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಖಾಯಮಾತಿ ಮಾಡುವುದಾಗಿ ಭರವಸೆಯನ್ನು ನೀಡಿ, ತಮ್ಮ ಪ್ರಣಾಳಿಕೆಯಲ್ಲಿ ಹಾಕಿಕೊಳ್ಳುವ ಪಕ್ಷಕ್ಕೆ ಮಾತ್ರ ನಮ್ಮ ಮತವನ್ನು ಹಾಕುತ್ತೇವೆ. ಪ್ರಜ್ಞಾವಂತರಾಗಿ ಮತ ಚಲಾವಣೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮನ್ನು ಉಳಿಸದ ಸರ್ಕಾರವನ್ನು, ಉಳಿಸದ ಪಕ್ಷವನ್ನು ನಾವು ಎಂದಿಗೂ ಬೆಂಬಲಿಸುವುದಿಲ್ಲ. ನಮ್ಮ ಮನೆ ಬಾಗಿಲಿಗೆ ಮತ ಕೇಳಲು ಬರುವ ಪ್ರತಿಯೊಬ್ಬ ಬಿಜೆಪಿ ಅಭ್ಯರ್ಥಿಗೂ ಪ್ರಶ್ನೆಗಳನ್ನು ಕೇಳೋಣ. ನಾವು ಹೋರಾಟಕ್ಕೆ ಕುಳಿತ್ತಿದ್ದಾಗ ಎಲ್ಲಿ ಹೋಗಿದ್ದೀರಿ ಎಂದು ಪ್ರಶ್ನಿಸುತ್ತೇವೆ” ಎಂದು ಶಪಥ ಮಾಡಿದ್ದಾರೆ. ಆರೋಗ್ಯ ಸಚಿವ ಡಾ.ಸುಧಾಕರ್‌ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

ರಾಮನಗರ ಜಿಲ್ಲೆಯ ಎನ್‌ಎಚ್‌ಎಂ ಉದ್ಯೋಗಿ ಪದ್ಮರೇಖಾ ಮಾತನಾಡಿ, “ಫೆಬ್ರುವರಿ 13ನೇ ತಾರೀನಿಂದ ಹೋರಾಟ ನಡೆಯಿತು. ಈ ಮುಷ್ಕರಕ್ಕೆ ನಿರೀಕ್ಷಿತ ಫಲ ದೊರೆತ್ತಿಲ್ಲ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ ಹೊರತು, ಹೋರಾಟವನ್ನಲ್ಲ” ಎಂದು ಎಚ್ಚರಿಸಿದ್ದಾರೆ.

“ರಾಜ್ಯದ ಮೂಲೆಮೂಲೆಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ಗೆ ಬಂದ ನೌಕರರು ಸರ್ಕಾರದ ಮನವೊಲಿಸುವ ಪ್ರಯತ್ನವನ್ನು ಮಾಡಿದರು. ನಮ್ಮ ಮನವಿಗೆ ಸ್ಪಂದಿಸುವುದಿರಲಿ, ಕನಿಷ್ಠ ಸಾಂತ್ವನವನ್ನೂ ನೀಡಲಿಲ್ಲ. ನಮಗೆ ನೀಡಿರುವ ನೋವಿಗೆ ಬಿಜೆಪಿ ಪಶ್ಚಾತ್ತಾಪಪಡಲಿದೆ” ಎಂದಿದ್ದಾರೆ.

“ಕನಿಷ್ಠ ಹೇಳಿಕೆಯನ್ನು ನೀಡದ ಆರೋಗ್ಯ ಸಚಿವರಿಗೆ, ಗಂಟೆಗೊಂದು ಗಳಿಗೆಗೊಂದು ಮಾತನಾಡಿದ ಮುಖ್ಯಮಂತ್ರಿಯವರಿಗೆ ಧಿಕ್ಕಾರ” ಎಂದು ಕೂಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...