Homeಕರ್ನಾಟಕ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

- Advertisement -
- Advertisement -

“ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ನಮ್ಮ ಮತ ಇಲ್ಲ, ಈ ಸಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರುವುದಿಲ್ಲ” ಎಂದು ನ್ಯಾಷನಲ್‌ ಹೆಲ್ತ್‌ ಮಿಷನ್‌ (ಎಂಎಚ್‌ಎಂ) ಒಳಗುತ್ತಿಗೆ ನೌಕರರು ಗುಡುಗಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ಕಳೆದ ನಲವತ್ತು ದಿನಗಳಿಂದ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘದ ವತಿಯಿಂದ ನಡೆಯುತ್ತಿದ್ದ ಹೋರಾಟವನ್ನು ಕೈಬಿಟ್ಟ ನೌಕರರು, “ನಮ್ಮ ಹೋರಾಟ ಹಾಗೂ ಮನವಿ ಮನವಿಗೆ ಸಕಾರಾತ್ಮಕವಾಗಿ ಬಿಜೆಪಿ ಸರ್ಕಾರ ಸ್ಪಂದಿಸಲಿಲ್ಲ, ಎಸ್ಮಾ ಕಾಯ್ದೆಯನ್ನು ಜಾರಿಗೊಳಿಸುತ್ತೇನೆ ಎಂದಿತು, ಕಾನೂನಿನ ಮೂಲಕ ನಮ್ಮ ಹೋರಾಟವನ್ನು ಹತ್ತಿಕ್ಕಲು ಭ್ರಷ್ಟ ಸರ್ಕಾರ ಪ್ರಯತ್ನಿಸಿತು” ಎಂದು ಆರೋಪಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರು 26,937 ಜನರಿದ್ದೇವೆ. ನಮ್ಮ ಕುಟುಂಬಗಳು ಹಾಗೂ ನೆರೆಹೊರೆಯವರು ಬಿಜೆಪಿಗೆ ಮತವನ್ನು ಹಾಕುವುದಿಲ್ಲ. ಯಾವುದೇ ಕಾರಣಕ್ಕೂ ಮತವನ್ನು ಇವರಿಗೆ ಹಾಕುವುದಿಲ್ಲ” ಎಂದು ಪ್ರತಿಜ್ಞೆಯನ್ನು ಸ್ವೀಕರಿಸಿದ್ದಾರೆ.

“ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಖಾಯಮಾತಿ ಮಾಡುವುದಾಗಿ ಭರವಸೆಯನ್ನು ನೀಡಿ, ತಮ್ಮ ಪ್ರಣಾಳಿಕೆಯಲ್ಲಿ ಹಾಕಿಕೊಳ್ಳುವ ಪಕ್ಷಕ್ಕೆ ಮಾತ್ರ ನಮ್ಮ ಮತವನ್ನು ಹಾಕುತ್ತೇವೆ. ಪ್ರಜ್ಞಾವಂತರಾಗಿ ಮತ ಚಲಾವಣೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮನ್ನು ಉಳಿಸದ ಸರ್ಕಾರವನ್ನು, ಉಳಿಸದ ಪಕ್ಷವನ್ನು ನಾವು ಎಂದಿಗೂ ಬೆಂಬಲಿಸುವುದಿಲ್ಲ. ನಮ್ಮ ಮನೆ ಬಾಗಿಲಿಗೆ ಮತ ಕೇಳಲು ಬರುವ ಪ್ರತಿಯೊಬ್ಬ ಬಿಜೆಪಿ ಅಭ್ಯರ್ಥಿಗೂ ಪ್ರಶ್ನೆಗಳನ್ನು ಕೇಳೋಣ. ನಾವು ಹೋರಾಟಕ್ಕೆ ಕುಳಿತ್ತಿದ್ದಾಗ ಎಲ್ಲಿ ಹೋಗಿದ್ದೀರಿ ಎಂದು ಪ್ರಶ್ನಿಸುತ್ತೇವೆ” ಎಂದು ಶಪಥ ಮಾಡಿದ್ದಾರೆ. ಆರೋಗ್ಯ ಸಚಿವ ಡಾ.ಸುಧಾಕರ್‌ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಫೆಸ್‌ 2023: ಗೊಂದಲದ ಗೂಡಾದ ಡೇ ಪಾಸ್‌; ಕ್ಯೂಆರ್‌ ಕೋಡ್ ಸ್ಕ್ಯಾನ್‌ ಆಗದೆ ಪರದಾಟ

ರಾಮನಗರ ಜಿಲ್ಲೆಯ ಎನ್‌ಎಚ್‌ಎಂ ಉದ್ಯೋಗಿ ಪದ್ಮರೇಖಾ ಮಾತನಾಡಿ, “ಫೆಬ್ರುವರಿ 13ನೇ ತಾರೀನಿಂದ ಹೋರಾಟ ನಡೆಯಿತು. ಈ ಮುಷ್ಕರಕ್ಕೆ ನಿರೀಕ್ಷಿತ ಫಲ ದೊರೆತ್ತಿಲ್ಲ. ಮುಷ್ಕರವನ್ನು ನಿಲ್ಲಿಸುತ್ತಿದ್ದೇವೆ ಹೊರತು, ಹೋರಾಟವನ್ನಲ್ಲ” ಎಂದು ಎಚ್ಚರಿಸಿದ್ದಾರೆ.

“ರಾಜ್ಯದ ಮೂಲೆಮೂಲೆಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ಗೆ ಬಂದ ನೌಕರರು ಸರ್ಕಾರದ ಮನವೊಲಿಸುವ ಪ್ರಯತ್ನವನ್ನು ಮಾಡಿದರು. ನಮ್ಮ ಮನವಿಗೆ ಸ್ಪಂದಿಸುವುದಿರಲಿ, ಕನಿಷ್ಠ ಸಾಂತ್ವನವನ್ನೂ ನೀಡಲಿಲ್ಲ. ನಮಗೆ ನೀಡಿರುವ ನೋವಿಗೆ ಬಿಜೆಪಿ ಪಶ್ಚಾತ್ತಾಪಪಡಲಿದೆ” ಎಂದಿದ್ದಾರೆ.

“ಕನಿಷ್ಠ ಹೇಳಿಕೆಯನ್ನು ನೀಡದ ಆರೋಗ್ಯ ಸಚಿವರಿಗೆ, ಗಂಟೆಗೊಂದು ಗಳಿಗೆಗೊಂದು ಮಾತನಾಡಿದ ಮುಖ್ಯಮಂತ್ರಿಯವರಿಗೆ ಧಿಕ್ಕಾರ” ಎಂದು ಕೂಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...