HomeUncategorizedಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ಉನ್ನತ ನ್ಯಾಯಾಲಯದ ಮುಂದೆ ಗೋಸ್ವಾಮಿ ಅವರ ಅರ್ಜಿಗಳನ್ನು ತುರ್ತಾಗಿ ಪಟ್ಟಿ ಮಾಡಲಾಗುತ್ತಿದೆ. ಇದೇ ರೀತಿ ಇತರರ ಅರ್ಜಿಗಳು ಏಕೆ ತುರ್ತಾಗಿ ಸುಪ್ರೀಂಕೋರ್ಟ್ ಪರಿಗಣಿಸುವುದಿಲ್ಲ. ಅವುಗಳು ಏಕೆ ಹಾಗೆ ಉಳಿದುಕೊಂಡಿವೆ

- Advertisement -
- Advertisement -

ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಮುಂಬೈ ಪೊಲೀಸರಿಂದ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ನಿನ್ನೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರಚೂಡ್, “ನಾನು ಅವರ ಚಾನೆಲ್ ಅನ್ನು ನೋಡುವುದೇ ಇಲ್ಲ” ಎಂದಿದ್ದಾರೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯಾ ಪತ್ರದಲ್ಲಿ ಅರ್ನಾಬ್ ಹೆಸರು ಉಲ್ಲೇಖಿಸಲಾಗಿತ್ತು. ಆದರೆ ಈ ಪ್ರಕರಣ ವರ್ಷಕ್ಕೂ ಮೊದಲೇ ಮುಚ್ಚಿಹೋಗಿತ್ತು. ಈಗ ಮತ್ತೆ ಅದಕ್ಕೆ ಮರುಜೀವ ನೀಡಿದ ಮುಂಬೈ ಪೊಲೀಸ್ ಅರ್ನಾಬ್‌ ಅವರನ್ನು ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಜಾಮೀನು ಪಡೆಯುವ ಸಲುವಾಗಿ ಅವರು ಬಾಂಬೆ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಅದು ಜಾಮೀನು ನಿರಾಕರಿಸಿತ್ತು. ಹಾಗಾಗಿ ಅರ್ನಾಬ್ ಸುಪ್ರೀಂ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್ ಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಇಂದಿರಾ ಬ್ಯಾನರ್ಜಿ ಅವರಿದ್ದ ವಿಭಾಗೀಯ ಪೀಠ ಅವರಿಗೆ ಜಾಮೀನು ಮಂಜೂರು ಮಾಡಿದೆ.

“ಅವರ ಸಿದ್ಧಾಂತ ಏನೇ ಇರಲಿ. ಆದರೆ ಸುಪ್ರೀಂಕೋರ್ಟ್ ಇಂತಹ ವಿಷಯದಲ್ಲಿ ಮಧ್ಯೆ ಪ್ರವೇಶಿಸದಿದ್ದರೆ ನಾವು ವಿನಾಶದ ಹಾದಿ ಹಿಡಿಯುತ್ತೇವೆ. ನಾನು ಆತನ ಚಾನೆಲ್ ನೋಡುವುದೇ ಇಲ್ಲ. ಆದರೆ ಹೈಕೋರ್ಟ್‌ಗಳು ವೈಯಕ್ತಿಕ ಸ್ವಾತಂತ್ರ್ಯದ ವಿಷಯದಲ್ಲಿ ಎಡವುತ್ತಿವೆ. ಈ ಬಗ್ಗೆ ಇಲ್ಲಿಂದ ಸಂದೇಶ ರವಾನೆಯಾಗಬೇಕು. ಹೈಕೋರ್ಟ್‌ಗಳು ತಮ್ಮ ಅಧಿಕಾರ ಬಳಸಿ ವೈಯಕ್ತಿಕ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

“ನವೆಂಬರ್ 7 ರಂದು ಅರ್ನಾಬ್ ಮಧ್ಯಂತರ ಜಾಮೀನು ನಿರಾಕರಿಸುವಲ್ಲಿ ಬಾಂಬೆ ಹೈಕೋರ್ಟ್ ತಪ್ಪೆಸಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಸಹ-ಆರೋಪಿಗಳನ್ನು 50,000 ರೂಪಾಯಿಗಳ ಬಾಂಡ್ ಮೇಲೆ ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ. ಜೊತೆಗೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಲಾಗಿದೆ’ ಎಂದು ನ್ಯಾಯಪೀಠ ತಿಳಿಸಿದೆ.

ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಪರಿಗಣಿಸಿದ ನಂತರ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಅಪರಾಧವನ್ನು ವಾಣಿಜ್ಯ ವಿವಾದದಲ್ಲಿ ಹೇಗೆ ಮಾಡಬಹುದು ಎಂದು ನೋಡುವುದು ಕಷ್ಟ ನ್ಯಾಯಪೀಠ ಹೇಳಿತು.

ಇದನ್ನೂ ಓದಿ: ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಇನ್ನು, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡುತ್ತಿರುವ ಕುರಿತು ಹಿರಿಯ ವಕೀಲ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ (ಎಸ್‌ಸಿಬಿಎ) ಅಧ್ಯಕ್ಷ ದುಶ್ಯಂತ್ ದಾವೆ ಅವರು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

“ಉನ್ನತ ನ್ಯಾಯಾಲಯದ ಮುಂದೆ ಗೋಸ್ವಾಮಿ ಅವರ ಅರ್ಜಿಗಳನ್ನು ತುರ್ತಾಗಿ ಪಟ್ಟಿ ಮಾಡಲಾಗುತ್ತಿದೆ. ಇದೇ ರೀತಿ ಇತರರ ಅರ್ಜಿಗಳು ಏಕೆ ತುರ್ತಾಗಿ ಸುಪ್ರೀಂಕೋರ್ಟ್ ಪರಿಗಣಿಸುವುದಿಲ್ಲ. ಅವುಗಳು ಏಕೆ ಹಾಗೆ ಉಳಿದುಕೊಂಡಿವೆ?” ಎಂದು ಪ್ರಶ್ನಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಕಟುವಾಗಿ ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....