Homeಕರ್ನಾಟಕನೋಟ್ ಬ್ಯಾನ್ ಮಾಡುವಂತೆ ಬಸವಣ್ಣನವರು ಹೇಳಿದ್ದರು: ಅರವಿಂದ ಜತ್ತಿ ಮಾತು ನಿಜವೇ?

ನೋಟ್ ಬ್ಯಾನ್ ಮಾಡುವಂತೆ ಬಸವಣ್ಣನವರು ಹೇಳಿದ್ದರು: ಅರವಿಂದ ಜತ್ತಿ ಮಾತು ನಿಜವೇ?

ಮೋದಿಯ ನೋಟ್ ಬ್ಯಾನ್: ಅರವಿಂದ ಜತ್ತಿಯವರ ರಾಜ್ಯಸಭಾ ಸದಸ್ಯತ್ವದ ಕನಸು ಹಾಗೂ ಹಲವು ಕತ್ತೆಗಳು ?!

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಸನ್ಮಾನ್ಯ ಶ್ರೀ ಅರವಿಂದ ಜತ್ತಿಯವರಿಗೆ ರಾಜ್ಯಸಭೆಯ ಕನಸುಗಳು ಬೀಳುವುದಕ್ಕೆ ಶುರುವಾಗಿ ಐದು ವರ್ಷಗಳು ಗತಿಸಿ ಹೋದವು. ತಮ್ಮ ಕನಸಿಗಾಗಿ ಅವರು ಪ್ರಧಾನಿ ಮೋದಿಯವರನ್ನು ಆಗಾಗ ಹೋಗಳುತ್ತಲೆ ಇರುತ್ತಾರೆ. ಮೋದಿಯವರು ಏನೇ ಮಾಡಿದರು ಅದು ಅವರಿಗೆ ದಿವ್ಯವಾಗಿ ಕಂಡುಬರುತ್ತದೆ. ಆ ಕುರಿತು ಮೆದುಳು ಬೆಳೆಯದ ಮಕ್ಕಳು ಕೂಗುವಂತೆ ಮೋದಿ ಮೋದಿ ಮೋದಿ ಎಂದು ಕೂಗುವ ಮೂಲಕ ತಮ್ಮ ಮನದ ಇಂಗಿತವನ್ನು ಮತ್ತೊಂದು ರೂಪದಲ್ಲಿ ಹೊರ ಹಾಕುತ್ತಾರೆ.

ಪ್ರಧಾನಿ ಮೋದಿಯವರನ್ನು ನಿತ್ಯ, ಕ್ಷಣ ಕ್ಷಣವೂ ಹೊಗಳಲಿ. ರಾಜ್ಯ ಸಭೆಯ ಸದಸ್ಯರೂ ಆಗಲಿ ಯಾರ ತಕರಾರು ಇಲ್ಲ. ಆದರೆ ಮೋದಿ ಹೊಗಳುವ ಭರದಲ್ಲಿ “ನೋಟು ಅಮಾನ್ಯೀಕರಣದ ಕುರಿತು ಬಸವಣ್ಣನವರು 12ನೇ ಶತಮಾನದಲ್ಲಿಯೇ ಉಲ್ಲೇಖಿಸಿದ್ದರು. ಈಗ ಅದು ನಿಜವಾಗಿದೆ. ಈ ವಿಷಯವನ್ನು ಪ್ರಧಾನಿ ಮೋದಿಯವರಿಗೆ ಈ ವಿಷಯ ತಿಳಿಸಿದಾಗ ಅವರು ನಿಬ್ಬೆರಗಾಗಿದ್ದರು” ಎಂದು ಪತ್ರಿಕೆಯೊಂದಕ್ಕೆ ಹೇಳೀಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. 

ಒಂದು ಕಡೆಯಲ್ಲಿ ಸಮಾನತವಾದಿ ಬಸವಣ್ಣ ಮತ್ತೊಂದು ಕಡೆಯಲ್ಲಿ ಮನುವಾದವನ್ನು ಎತ್ತಿ ಹಿಡಿಯುವ ಮೋದಿ ಎತ್ತಣಿಂದೆತ್ತ ಸಂಬಂಧವಯ್ಯ? ಎಂದು ನಾವು ಅನಿವಾರ್ಯವಾಗಿ ಪ್ರಶ್ನಿಸಲೆಬೇಕಾಗಿದೆ. ಉಳ್ಳವರು ಶಿವಾಲಯ ಮಾಡುವರು ನಾನೇನ ಮಾಡಲಿ ಬಡವನಯ್ಯಾ ! ಸ್ಥಾವರಕ್ಕೆ ಅಳಿವುಂಟು ಜಂಗಮಕ್ಕೆ ಅಳಿವಿಲ್ಲ’ ಎಂದ ಬಸವಣ್ಣನವರೆಲ್ಲಿ, ರಾಮ ಮಂದಿರ ಕಟ್ಟಲೇಬೇಕು ಎಂಬ ತುಡಿತ ಇರುವ ಮೋದಿಯವರೆಲ್ಲಿ ? ಧರ್ಮ ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡಿ ತನ್ನ ಬೇಳೆ ಬೇಯಿಸಿಕೊಳ್ಳಲು ಹೊರಟಿರುವವರು ಬಿ.ಜೆ.ಪಿಗರು. ಇದನ್ನು ಇಡೀ ರಾಷ್ಟ್ರದ ಜನತೆ ಬಲ್ಲುದು. ಸಕಲ ಜೀವಾತ್ಮರಿಗೆ ಲೇಸ ಬಯಸುವ ತತ್ವ ಬಸವಣ್ಣನವರದು. ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿದ್ದು ಬಸವಣ್ಣನವರಾದರೆ ಮೋದಿ ನೇತೃತ್ವದ ಸರಕಾರ ಮಹಿಳೆಗೆ ಮತ್ತೆ ಕಟ್ಟಳೆಗಳನ್ನು ವಿಧಿಸಿ ಮನುವಾದವನ್ನು ಮುನ್ನೆಲೆಗೆ ತರಲು ಹಾತೊರೆಯುತ್ತದೆ.

ಭಾರತದ ಸಂವಿಧಾನ ಬೇರೆ ಅಲ್ಲ, ಬಸವಾದಿ ಶರಣರು ಬರೆದ ವಚನಗಳು ಬೇರೆ ಅಲ್ಲವೇ ಅಲ್ಲ. ಎರಡೂ ಒಂದರೊಳಗೆ ಒಂದು ಹಾಸು ಹೊಕ್ಕಾಗಿ ಇರುವಂಥವು. ಹನ್ನೆರಡನೆಯ ಶತಮಾನದಲ್ಲಿ ವಚನಗಳನ್ನು ಬದುಕಿದ ಶರಣರು ಸುಖಿಯಾದ ಸಮಾಜವನ್ನು ಕಟ್ಟಲು ಸಾಧ್ಯವಾಗಿತ್ತು. ಡಾ. ಬಿ.ಆರ್. ಅಂಬೇಡ್ಕರರವರು ನಮಗಾಗಿ ಕಟ್ಟಿಕೊಟ್ಟ ಭಾರತೀಯ ಸಂವಿಧಾನ ವಿಶ್ವದ ಸಂವಿಧಾನದಲ್ಲಿಯೇ ಅತ್ಯುನ್ನತ ಮೌಲ್ಯಗಳನ್ನು ಒಳಗೊಂಡದ್ದು ಎಂಬ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಮೋದಿ ಸರಕಾರದ ಕೆಲವು ಮಂತ್ರಿಗಳೆ ಬೀದಿಯಲ್ಲಿ ನಿಂತು ಸಂವಿಧಾನವನ್ನು ತಿರಸ್ಕರಿಸುತ್ತೇವೆ ಎಂದು ಹೇಳುತ್ತಾರೆ. ಈ ಮಾತುಗಳ ಪ್ರಚೋದನೆ ಪಡೆದ ಕೆಲವು ಅಬ್ಬೆಪಾರಿ ಜನಗಳು ಸಂವಿಧಾನದ ಪ್ರತಿಯನ್ನು ದೆಹಲಿಯ ಸಂಸತ್ತಿನ ಮುಂದೆಯೇ ಸುಡುತ್ತಾರೆ. ಇದನ್ನು ಕಂಡೂ ಕಾಣದಂತೆ ಮೋದಿಯವರು ದೊಡ್ಡ ಕೌದಿಯನ್ನು ತಮ್ಮ ಕಣ್ಣ ಮೇಲೆ ಹಾಕಿಕೊಂಡು ಕುಳಿತ್ತಿದ್ದಾರಲ್ಲ ! ಇದೆಲ್ಲ ನಮ್ಮ ಅರವಿಂದ ಜತ್ತಿಯವರಿಗೆ ಕಾಣುವುದಿಲ್ಲವೆ ?

ನೋಟು ಅಮಾನ್ಯೀಕರಣವನ್ನು ದೇಶದ ಮಹತ್ವದ ಆರ್ಥಿಕ ಚಿಂತಕ ಮನಮೋಹನ ಸಿಂಗ್ “ವ್ಯವಸ್ಥಿತ ಸಂಘಟಿತ ಲೂಟಿ’’ ಎಂದು ಜರಿದರು. ಇವತ್ತಿಗೂ ಬಡವರು, ಮಧ್ಯಮ ವರ್ಗದ ಜನ ನೋಟು ಅಮಾನ್ಯೀಕರಣದ ಬಿಸಿಗೆ ಬೀದಿಗೆ ಬಿದ್ದಿದ್ದಾರೆ. ನೊಂದವರ ನೋವ ಅರಿಯುವುದೆ ಬಸವ ಪ್ರಣೀತ ಲಿಂಗಾಯತ ಧರ್ಮ. ಬಸವ ಸಮಿತಿಯ ಆಯಿಲ್ ಪೆಂಟ್ ಜತ್ತಿಯವರಿಗೆ ಇದು ಕಾಣಲಿಲ್ಲವೇಕೆ ? ತಮ್ಮ ಯಾವುದೋ ಒಂದು ವೈಯಕ್ತಿಕ ಬಯಕೆಗೆ ಲಿಂಗಾಯತ ಧರ್ಮದ ತತ್ವಗಳನ್ನು ಬಲಿಕೊಡುವುದು ಎಷ್ಟು ಸರಿ ?

ಶರಣರು ಎಲ್ಲಿಯೂ ನೋಟು ಅಮಾನ್ಯೀಕರಣದ ಕುರಿತು ಹೇಳಿಲ್ಲ. ಆದರೆ ಜತ್ತಿಯವರು ಮಾತ್ರ ಅದೆಲ್ಲಿಯ ವಚನ ಅಧ್ಯಯನ ಮಾಡಿದರೊ ಕಾಣೆ. ನೋಟು ಅಮಾನ್ಯೀಕರಣದ ಕುರಿತು ಶರಣರು ಹೇಳಿದ್ದಾರೆಂದು ಜತ್ತಿಯವರು ಹೇಳಿದ ಸಂಗತಿ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ನಾನು ಅಧ್ಯಯನ ಮಾಡಿದಂತೆ ವಚನದಲ್ಲಿ ತೆರಿಗೆಯನ್ನು ವಂಚಿಸಬಾರದು ಎಂದಿದೆ.

ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ
ವಿರಹಿತ ಹೋಗಬಾರದು
ಲಿಂಗ ಸಂಬಂಧಿಯಾದಡೆ
ಜಂಗಮ ಪ್ರೇಮಿ ನೀನಾಗು.
ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ
ಜಂಗಮದಲ್ಲಿ ನಿರುತ ಭರಿತ
ಕೂಡಲಸಂಗಮದೇವಾ

ಇದರಲ್ಲಿ ಎಲ್ಲಿಯೂ ನೋಟು ಅಮಾನ್ಯೀಕರಣದ ಕುರಿತು ಚಕಾರ ಶಬ್ಧವೂ ಇಲ್ಲ. ಜತ್ತಿಯವರ ದಿವ್ಯ ದೃಷ್ಟಿಯಲ್ಲಿ ಕಂಡಿದ್ದರೆ ಅದನ್ನವರು ನಮಗೆಲ್ಲ ತಿಳಿಸಿಕೊಡಬೇಕು. ಇಷ್ಟು ವರ್ಷಗಳ ಕಾಲ ಮಠಾಧೀಶರು ಬಸವಾದಿ ಶರಣರ ಡುಬ್ಬದ ಮೇಲೆ ಕುಳಿತು ತಮ್ಮ ಮೆರವಣಿಗೆ ಉರವಣಿಗೆ ನಡೆಸಿಕೊಂಡು ದೊಡ್ಡವರಾಗಿ ಮೆರೆದಿದ್ದಾರೆ. ಈಗ ಬಸವಣ್ಣನವರ ಹೆಸರಿನ ಮೇಲೆ ಸಮಿತಿ, ಪ್ರತಿಷ್ಠಾನ, ಕೇಂದ್ರಗಳ ಆರ್ಭಟ ನಡೆದಿದೆ. ಈ ಸೂಕ್ಷ್ಮವನ್ನು ಲಿಂಗಾಯತರು ಈಗ ಅರಿತಿದ್ದಾರೆ. ಹಿಂದೊಮ್ಮೆ ತಮ್ಮ ಬಸವ ಸಮಿತಿಯಿಂದ ಹೊರಡುವ ಪತ್ರಿಕೆಯ ಮುಖ ಪುಟದಲ್ಲಿ ಸರ್ವಜ್ಞನ ವಚನವನ್ನು ತಿರುಚಿ ತಮಗೆ ಅನುಕೂಲವಾಗುವಂತೆ ಬಸಳಸಿಕೊಂಡಿದ್ದರು.

ಬಸವ ಸಮಿತಿ (ಪೀಠ)ವೂ ಎದ್ದು
ಒಸೆದು ನಾಣ್ಯವು ಹುಟ್ಟಿ
ಬಸವನಾ ಮುದ್ರೆ ಮೆರೆದಾವು ಲೋಕವವಗೆ ವಶವಾಗದಿಹುದೆ ಸರ್ವಜ್ಞ !

ಇದನ್ನು ಓದಿ: ಬಸವಣ್ಣ ಮತ್ತು ಅಕ್ಷಯ ತೃತೀಯ

ಸರ್ವಜ್ಞ ಬಳಸಿದ ಪೀಠ ಎಂಬ ಪದ ಹೃದಯ ಪೀಠ ಎಂದು ಅರ್ಥೈಸಿಕೊಳ್ಳದಷ್ಟು ದಡ್ಡರೇನು ಜತ್ತಿಯವರಲ್ಲ, ಮುದ್ದಾಂ ಆಗಿಯೆ ಈ ತಪ್ಪುಗಳನ್ನು ಮಾಡುವ ಮೂಲಕ ದೊಡ್ಡವರಾಗಬೇಕೆಂದು ಬಯಸುತ್ತಾರೆ. ಕೆಂಭೂತ ನವಿಲಿನಂತೆ ಕುಣಿಯಬಹುದು ಆದರೆ ಅದು ನವಿಲಾಗಲು ಸಾಧ್ಯವಿಲ್ಲ. ಪ್ರಧಾನಿ ಮೋದಿಯರ ಗುಲಾಮರಾಗಿ ಯಾರೂ ಬೇಡ ಅನ್ನುವುದಿಲ್ಲ. ಆದರೆ ಲಿಂಗಾಯತ ಧರ್ಮದವರನ್ನು ಯಾರಿಗೂ ಒತ್ತೆ ಇಡಬೇಡಿ.

ವೇದವ ಮೀರಿದ ಮಹಾವೇದಿಗಳು ಲಿಂಗವಂತರು
ಶಾಸ್ತ್ರವ ಮೀರಿದ ಮಹಾಶಾಸ್ತ್ರಜ್ಞರು ಲಿಂಗವಂತರು
ಪುರಾಣವ ಮೀರಿದ ಮಹಾಪುರಾಣಿಕರು ಲಿಂಗವಂತರು
ಲಿಂಗವಂತ ನಡೆ, ನುಡಿ ಭಿನ್ನಕಾಣಿರೋ
ಎಂಬ ನಗೆ ಮಾರಿತಂದೆಗಳ ಮಾತು ಅರಿತು ಜತ್ತಿಯವರು ನಡೆಯಬೇಕಿದೆ. ಕುದುರೆಗೆ ಕುದುರೆ, ಕತ್ತೆಗೆ ಕತ್ತೆ ಎಂದೆನ್ನದೆ ಕತ್ತೆಗೆ ಕುದುರೆ ಅಂದರೆ ಜನ ಅದನ್ನು ಅರಿಯದಷ್ಟು ದಡ್ಡರಲ್ಲ. ಹಲವು ಕತ್ತೆಗಳ ನಡುವೆ ಕುದುರೆ ಜಾತಿ ಕಳೆದ ಹೋಗದಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....