Homeಮುಖಪುಟನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!!

- Advertisement -
- Advertisement -

| ಕೆ.ಪಿ ಸುರೇಶ್ |

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!! ಸಂಸತ್ತಿನ ಆರ್ಥಿಕ ಸ್ಥಾಯಿ ಸಮಿತಿಗೆ ನೀಡಿದ ವರದಿಯಲ್ಲಿ ಕೃಷಿ ಇಲಾಖೆ ಈ ತಪ್ಪೊಪ್ಪಿಗೆ ವರದಿ ನೀಡಿದೆ. ವ್ಯಂಗ್ಯವೆಂದರೆ ಪ್ರಧಾನ ಚೌಕೀದಾರರು “ಕಾಳ ಧನ ಹತ್ತಿಕ್ಕಲು ನೋಟು ಬಂದಿಯಂಥಾ ಕಹಿ ಗುಳಿಗೆ ಪ್ರಯೋಗಿಸಿದೆ” ಎಂದು ಬೊಗಳೆ ಭಾಷಣ ಮಾಡುತ್ತಿದ್ದ ದಿನವೇ ಈ ವರದಿ ಬಹಿರಂಗವಾಗಿದೆ. ಈ ವರದಿ ಇಂದಿನದ್ದಲ್ಲ!! ಕಳೆದ ವರ್ಷದ ನವಂಬರ್ 20ರದ್ದು!! ಮೂರು ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಮೋದಿ ಬೂಸಿ ಭಾಷಣ ಮಾಡುವಾಗ ಈ ವರದಿ ಬಂದಿದ್ದು ಗಮನಾರ್ಹ.

ರೈತರು ಮುಂಗಾರು ಬೆಳೆ ಮಾರಿ ಹಿಂಗಾರು ಬೆಳೆಗೆ ತಯಾರಿ ನಡೆಸುವ ಸಂಕ್ರಮಣ ಘಟ್ಟದಲ್ಲಿ ಬಿದ್ದ ಈ ಹೊಡೆತದಿಂದಾಗಿ ನಗದು ಅಭಾವ ಅನುಭವಿಸಿದ ರೈತರು ಅಪಾರ ಸಂಕಷ್ಟ ಅನುಭವಿಸಬೇಕಾಯಿತು. ದೇಶದ 27 ಕೋಟಿ ರೈತಾಪಿ ವರ್ಗ ಬಹುತೇಕ ನಗದು ಮೂಲಕವೇ ವ್ಯವಹರಿಸುತ್ತಿದ್ದು ಬೀಜ, ಗೊಬ್ಬರ ಕೊಳ್ಳುವುದರಿಂದ ಹಿಡಿದು ಬೇಸಾಯದ ಎಲ್ಲಾ ಕಾರ್ಯಗಳಲ್ಲೂ ತೊಂದರೆ ಅನುಭವಿಸಿದರು. ದೊಡ್ಡ ಜಮೀನುದಾರರೂ ಕೂಲಿ ಸಂಬಳ ಕೊಡಲು ನಗದು ಅಭಾವ ಅನುಭವಿಸಿದರು.

ರಾಷ್ಟ್ರೀಯ ಬೀಜ ನಿಗಮ 1.38 ಲಕ್ಷ ಕ್ವಿಂಟಾಲುಗಳಷ್ಟು ಬಿತ್ತನೆ ಗೋಧಿ ಬೀಜ ಮಾರಾಟ ಮಾಡಲಾರದೇ ಸೋತಿತು. ಹಳೇ ನೋಟು ಬಳಸಬಹುದು ಎಂದು ಸರ್ಕಾರ ಹೇಳಿದ ಮೇಲೂ ಮಾರಾಟ ಹೆಚ್ಚಲಿಲ್ಲ.

ಬೇಸಾಯ ಕುಂಟಿದ ಬಗ್ಗೆ ಕೃಷಿ ಇಲಾಖೆ ವರದಿಯಲ್ಲಿ ಹೇಳಿದೆ. ಆದರೆ ಇದರ ಸಾಮಾಜಿಕ ಪರಿಣಾಮದ ಬಗ್ಗೆ ಅದು ಹೇಳಿಲ್ಲ. ಅತ್ತ ಕಾರ್ಮಿಕ ಸಚಿವಾಲಯ ನೋಟು ಬಂದಿಯಿಂದ ಕಷ್ಟ-ನಷ್ಟ ಉಂಟಾಗಲಿಲ್ಲ ಎಂದು ಹೇಳಿ ಈ ಸಮಿತಿಯಿಂದ ಉಗಿಸಿಕೊಂಡಿದೆ.

ಇದನ್ನು ಓದಿ: ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ಕೃಷಿ ಕ್ಷೇತ್ರ ಸತತವಾಗಿ ಒಂದೆರಡು ದಶಕಗಳಿಂದ ಕುಂಟುತ್ತಿರುವುದು ಸರ್ಕಾರಕ್ಕೆ ಗೊತ್ತು. ಅಂಥಾ ಸಂದರ್ಭದಲ್ಲಿ ಈ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡಿದ ಮೋದಿ ಇಂದಿಗೂ ಈ ಪ್ರಮಾದವನ್ನು ಒಪ್ಪಿಕೊಳ್ಳುತ್ತಿಲ್ಲ. ಗಾಯದ ಮೇಲೆ ಉಪ್ಪು ಸವರಿದ ಹಾಗೆ ರೈತರ ಆದಾಯ ದ್ವಿಗುಣ ಎಂಬ ಬೂಸಿಯನ್ನು ದೇಶದ ಮೇಲೆ ಹೇರುತ್ತಾ ಮೊನ್ನೆ ಮೊನ್ನೆ ವರೆಗೂ ಓಡಾಡುತ್ತಿದ್ದ ಈ ಬೊಗಳೆ ಪ್ರಧಾನಿ ಲೋಕಸಭಾ ಚುನಾವಣೆಯಲ್ಲಿ ಈ ಯಾವ ವಿಷಯವನ್ನೂ ಪ್ರಸ್ತಾಪಿಸದೇ ಕೂತಿದ್ದಾರೆ.

ನಮ್ಮ ದುರಂತವೆಂದರೆ ಎದುರಾಳಿ ಪಕ್ಷಗಳೂ ನಿರುದ್ಯೋಗ, ರೈತ ಸಂಕಷ್ಟದಂಥಾ ವಿಷಯಗಳನ್ನು ಮುಂದೊತ್ತದೇ ಮೋದಿಯೊಬ್ಬರನ್ನೇ ಟಾರ್ಗೆಟ್ ಮಾಡುವ ರಾಜಕೀಯ ಮಾಡುತ್ತಿದ್ದಾರೆ. ಅಷ್ಟೇಕೆ ಮೋದಿ ಸೃಷ್ಟಿಸಿದ ಮರಣಾಂತಿಕ ಗಾಯಗಳಿಗೆ ಪರಿಹಾರ ಏನು ಎಂಬ ನಕಾಶೆಯೂ ಇವರಲ್ಲಿ ಇಲ್ಲ. ಮೇವಿಲ್ಲದ ಹಸುಗಳು ಕೂತಲ್ಲೇ ತೂಕಡಿಸಿ ಒದ್ದಾಡಿ ಸಾಯುತ್ತವೆ. ಪ್ರಾಣಿ ಸಹಜ ಅಸಹಾಯಕತೆ ಅದು. ಒಂದು ವರ್ಗದ ರೈತರು ಈ ಅಸಹಾಯಕತೆಯಲ್ಲಿದ್ದರೆ, ಇನ್ನೊಂದು ವರ್ಗ ಇರುವ ರಾಜಕೀಯ ಪಕ್ಷಗಳ ಮೇಲಾಟವನ್ನೇ ಸಂಭ್ರಮಿಸುತ್ತಾ ಕೂತಿರುವಂತಿದೆ.

ಜಿಂಕೆಯೊಂದು ಹುಲಿಗೆ ಬಲಿಯಾದರೆ ಹಿಂಡಿನ ಉಳಿದ ಜಿಂಕೆಗಳು ಹೋರಾಡಿದ್ದಿಲ್ಲ. ಒಮ್ಮೆ ನೋಡಿ ಮತ್ತೆ ಮೇಯತೊಡಗುತ್ತವೆ. ರೈತರೂ ಇಂಥಾ ಪಶು ಸಹಜ ಮಟ್ಟಕ್ಕೆ ಬಂದಿದ್ದಾರೆ. ಈ ರೂಪಾಂತರಕ್ಕೆ ಮೋದಿಯ ಕೊಡುಗೆ ದೊಡ್ಡದು!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...