Homeಮುಖಪುಟನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!!

- Advertisement -
- Advertisement -

| ಕೆ.ಪಿ ಸುರೇಶ್ |

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!! ಸಂಸತ್ತಿನ ಆರ್ಥಿಕ ಸ್ಥಾಯಿ ಸಮಿತಿಗೆ ನೀಡಿದ ವರದಿಯಲ್ಲಿ ಕೃಷಿ ಇಲಾಖೆ ಈ ತಪ್ಪೊಪ್ಪಿಗೆ ವರದಿ ನೀಡಿದೆ. ವ್ಯಂಗ್ಯವೆಂದರೆ ಪ್ರಧಾನ ಚೌಕೀದಾರರು “ಕಾಳ ಧನ ಹತ್ತಿಕ್ಕಲು ನೋಟು ಬಂದಿಯಂಥಾ ಕಹಿ ಗುಳಿಗೆ ಪ್ರಯೋಗಿಸಿದೆ” ಎಂದು ಬೊಗಳೆ ಭಾಷಣ ಮಾಡುತ್ತಿದ್ದ ದಿನವೇ ಈ ವರದಿ ಬಹಿರಂಗವಾಗಿದೆ. ಈ ವರದಿ ಇಂದಿನದ್ದಲ್ಲ!! ಕಳೆದ ವರ್ಷದ ನವಂಬರ್ 20ರದ್ದು!! ಮೂರು ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಮೋದಿ ಬೂಸಿ ಭಾಷಣ ಮಾಡುವಾಗ ಈ ವರದಿ ಬಂದಿದ್ದು ಗಮನಾರ್ಹ.

ರೈತರು ಮುಂಗಾರು ಬೆಳೆ ಮಾರಿ ಹಿಂಗಾರು ಬೆಳೆಗೆ ತಯಾರಿ ನಡೆಸುವ ಸಂಕ್ರಮಣ ಘಟ್ಟದಲ್ಲಿ ಬಿದ್ದ ಈ ಹೊಡೆತದಿಂದಾಗಿ ನಗದು ಅಭಾವ ಅನುಭವಿಸಿದ ರೈತರು ಅಪಾರ ಸಂಕಷ್ಟ ಅನುಭವಿಸಬೇಕಾಯಿತು. ದೇಶದ 27 ಕೋಟಿ ರೈತಾಪಿ ವರ್ಗ ಬಹುತೇಕ ನಗದು ಮೂಲಕವೇ ವ್ಯವಹರಿಸುತ್ತಿದ್ದು ಬೀಜ, ಗೊಬ್ಬರ ಕೊಳ್ಳುವುದರಿಂದ ಹಿಡಿದು ಬೇಸಾಯದ ಎಲ್ಲಾ ಕಾರ್ಯಗಳಲ್ಲೂ ತೊಂದರೆ ಅನುಭವಿಸಿದರು. ದೊಡ್ಡ ಜಮೀನುದಾರರೂ ಕೂಲಿ ಸಂಬಳ ಕೊಡಲು ನಗದು ಅಭಾವ ಅನುಭವಿಸಿದರು.

ರಾಷ್ಟ್ರೀಯ ಬೀಜ ನಿಗಮ 1.38 ಲಕ್ಷ ಕ್ವಿಂಟಾಲುಗಳಷ್ಟು ಬಿತ್ತನೆ ಗೋಧಿ ಬೀಜ ಮಾರಾಟ ಮಾಡಲಾರದೇ ಸೋತಿತು. ಹಳೇ ನೋಟು ಬಳಸಬಹುದು ಎಂದು ಸರ್ಕಾರ ಹೇಳಿದ ಮೇಲೂ ಮಾರಾಟ ಹೆಚ್ಚಲಿಲ್ಲ.

ಬೇಸಾಯ ಕುಂಟಿದ ಬಗ್ಗೆ ಕೃಷಿ ಇಲಾಖೆ ವರದಿಯಲ್ಲಿ ಹೇಳಿದೆ. ಆದರೆ ಇದರ ಸಾಮಾಜಿಕ ಪರಿಣಾಮದ ಬಗ್ಗೆ ಅದು ಹೇಳಿಲ್ಲ. ಅತ್ತ ಕಾರ್ಮಿಕ ಸಚಿವಾಲಯ ನೋಟು ಬಂದಿಯಿಂದ ಕಷ್ಟ-ನಷ್ಟ ಉಂಟಾಗಲಿಲ್ಲ ಎಂದು ಹೇಳಿ ಈ ಸಮಿತಿಯಿಂದ ಉಗಿಸಿಕೊಂಡಿದೆ.

ಇದನ್ನು ಓದಿ: ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ಕೃಷಿ ಕ್ಷೇತ್ರ ಸತತವಾಗಿ ಒಂದೆರಡು ದಶಕಗಳಿಂದ ಕುಂಟುತ್ತಿರುವುದು ಸರ್ಕಾರಕ್ಕೆ ಗೊತ್ತು. ಅಂಥಾ ಸಂದರ್ಭದಲ್ಲಿ ಈ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡಿದ ಮೋದಿ ಇಂದಿಗೂ ಈ ಪ್ರಮಾದವನ್ನು ಒಪ್ಪಿಕೊಳ್ಳುತ್ತಿಲ್ಲ. ಗಾಯದ ಮೇಲೆ ಉಪ್ಪು ಸವರಿದ ಹಾಗೆ ರೈತರ ಆದಾಯ ದ್ವಿಗುಣ ಎಂಬ ಬೂಸಿಯನ್ನು ದೇಶದ ಮೇಲೆ ಹೇರುತ್ತಾ ಮೊನ್ನೆ ಮೊನ್ನೆ ವರೆಗೂ ಓಡಾಡುತ್ತಿದ್ದ ಈ ಬೊಗಳೆ ಪ್ರಧಾನಿ ಲೋಕಸಭಾ ಚುನಾವಣೆಯಲ್ಲಿ ಈ ಯಾವ ವಿಷಯವನ್ನೂ ಪ್ರಸ್ತಾಪಿಸದೇ ಕೂತಿದ್ದಾರೆ.

ನಮ್ಮ ದುರಂತವೆಂದರೆ ಎದುರಾಳಿ ಪಕ್ಷಗಳೂ ನಿರುದ್ಯೋಗ, ರೈತ ಸಂಕಷ್ಟದಂಥಾ ವಿಷಯಗಳನ್ನು ಮುಂದೊತ್ತದೇ ಮೋದಿಯೊಬ್ಬರನ್ನೇ ಟಾರ್ಗೆಟ್ ಮಾಡುವ ರಾಜಕೀಯ ಮಾಡುತ್ತಿದ್ದಾರೆ. ಅಷ್ಟೇಕೆ ಮೋದಿ ಸೃಷ್ಟಿಸಿದ ಮರಣಾಂತಿಕ ಗಾಯಗಳಿಗೆ ಪರಿಹಾರ ಏನು ಎಂಬ ನಕಾಶೆಯೂ ಇವರಲ್ಲಿ ಇಲ್ಲ. ಮೇವಿಲ್ಲದ ಹಸುಗಳು ಕೂತಲ್ಲೇ ತೂಕಡಿಸಿ ಒದ್ದಾಡಿ ಸಾಯುತ್ತವೆ. ಪ್ರಾಣಿ ಸಹಜ ಅಸಹಾಯಕತೆ ಅದು. ಒಂದು ವರ್ಗದ ರೈತರು ಈ ಅಸಹಾಯಕತೆಯಲ್ಲಿದ್ದರೆ, ಇನ್ನೊಂದು ವರ್ಗ ಇರುವ ರಾಜಕೀಯ ಪಕ್ಷಗಳ ಮೇಲಾಟವನ್ನೇ ಸಂಭ್ರಮಿಸುತ್ತಾ ಕೂತಿರುವಂತಿದೆ.

ಜಿಂಕೆಯೊಂದು ಹುಲಿಗೆ ಬಲಿಯಾದರೆ ಹಿಂಡಿನ ಉಳಿದ ಜಿಂಕೆಗಳು ಹೋರಾಡಿದ್ದಿಲ್ಲ. ಒಮ್ಮೆ ನೋಡಿ ಮತ್ತೆ ಮೇಯತೊಡಗುತ್ತವೆ. ರೈತರೂ ಇಂಥಾ ಪಶು ಸಹಜ ಮಟ್ಟಕ್ಕೆ ಬಂದಿದ್ದಾರೆ. ಈ ರೂಪಾಂತರಕ್ಕೆ ಮೋದಿಯ ಕೊಡುಗೆ ದೊಡ್ಡದು!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...