Homeಮುಖಪುಟನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!!

- Advertisement -
- Advertisement -

| ಕೆ.ಪಿ ಸುರೇಶ್ |

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!! ಸಂಸತ್ತಿನ ಆರ್ಥಿಕ ಸ್ಥಾಯಿ ಸಮಿತಿಗೆ ನೀಡಿದ ವರದಿಯಲ್ಲಿ ಕೃಷಿ ಇಲಾಖೆ ಈ ತಪ್ಪೊಪ್ಪಿಗೆ ವರದಿ ನೀಡಿದೆ. ವ್ಯಂಗ್ಯವೆಂದರೆ ಪ್ರಧಾನ ಚೌಕೀದಾರರು “ಕಾಳ ಧನ ಹತ್ತಿಕ್ಕಲು ನೋಟು ಬಂದಿಯಂಥಾ ಕಹಿ ಗುಳಿಗೆ ಪ್ರಯೋಗಿಸಿದೆ” ಎಂದು ಬೊಗಳೆ ಭಾಷಣ ಮಾಡುತ್ತಿದ್ದ ದಿನವೇ ಈ ವರದಿ ಬಹಿರಂಗವಾಗಿದೆ. ಈ ವರದಿ ಇಂದಿನದ್ದಲ್ಲ!! ಕಳೆದ ವರ್ಷದ ನವಂಬರ್ 20ರದ್ದು!! ಮೂರು ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಮೋದಿ ಬೂಸಿ ಭಾಷಣ ಮಾಡುವಾಗ ಈ ವರದಿ ಬಂದಿದ್ದು ಗಮನಾರ್ಹ.

ರೈತರು ಮುಂಗಾರು ಬೆಳೆ ಮಾರಿ ಹಿಂಗಾರು ಬೆಳೆಗೆ ತಯಾರಿ ನಡೆಸುವ ಸಂಕ್ರಮಣ ಘಟ್ಟದಲ್ಲಿ ಬಿದ್ದ ಈ ಹೊಡೆತದಿಂದಾಗಿ ನಗದು ಅಭಾವ ಅನುಭವಿಸಿದ ರೈತರು ಅಪಾರ ಸಂಕಷ್ಟ ಅನುಭವಿಸಬೇಕಾಯಿತು. ದೇಶದ 27 ಕೋಟಿ ರೈತಾಪಿ ವರ್ಗ ಬಹುತೇಕ ನಗದು ಮೂಲಕವೇ ವ್ಯವಹರಿಸುತ್ತಿದ್ದು ಬೀಜ, ಗೊಬ್ಬರ ಕೊಳ್ಳುವುದರಿಂದ ಹಿಡಿದು ಬೇಸಾಯದ ಎಲ್ಲಾ ಕಾರ್ಯಗಳಲ್ಲೂ ತೊಂದರೆ ಅನುಭವಿಸಿದರು. ದೊಡ್ಡ ಜಮೀನುದಾರರೂ ಕೂಲಿ ಸಂಬಳ ಕೊಡಲು ನಗದು ಅಭಾವ ಅನುಭವಿಸಿದರು.

ರಾಷ್ಟ್ರೀಯ ಬೀಜ ನಿಗಮ 1.38 ಲಕ್ಷ ಕ್ವಿಂಟಾಲುಗಳಷ್ಟು ಬಿತ್ತನೆ ಗೋಧಿ ಬೀಜ ಮಾರಾಟ ಮಾಡಲಾರದೇ ಸೋತಿತು. ಹಳೇ ನೋಟು ಬಳಸಬಹುದು ಎಂದು ಸರ್ಕಾರ ಹೇಳಿದ ಮೇಲೂ ಮಾರಾಟ ಹೆಚ್ಚಲಿಲ್ಲ.

ಬೇಸಾಯ ಕುಂಟಿದ ಬಗ್ಗೆ ಕೃಷಿ ಇಲಾಖೆ ವರದಿಯಲ್ಲಿ ಹೇಳಿದೆ. ಆದರೆ ಇದರ ಸಾಮಾಜಿಕ ಪರಿಣಾಮದ ಬಗ್ಗೆ ಅದು ಹೇಳಿಲ್ಲ. ಅತ್ತ ಕಾರ್ಮಿಕ ಸಚಿವಾಲಯ ನೋಟು ಬಂದಿಯಿಂದ ಕಷ್ಟ-ನಷ್ಟ ಉಂಟಾಗಲಿಲ್ಲ ಎಂದು ಹೇಳಿ ಈ ಸಮಿತಿಯಿಂದ ಉಗಿಸಿಕೊಂಡಿದೆ.

ಇದನ್ನು ಓದಿ: ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ಕೃಷಿ ಕ್ಷೇತ್ರ ಸತತವಾಗಿ ಒಂದೆರಡು ದಶಕಗಳಿಂದ ಕುಂಟುತ್ತಿರುವುದು ಸರ್ಕಾರಕ್ಕೆ ಗೊತ್ತು. ಅಂಥಾ ಸಂದರ್ಭದಲ್ಲಿ ಈ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡಿದ ಮೋದಿ ಇಂದಿಗೂ ಈ ಪ್ರಮಾದವನ್ನು ಒಪ್ಪಿಕೊಳ್ಳುತ್ತಿಲ್ಲ. ಗಾಯದ ಮೇಲೆ ಉಪ್ಪು ಸವರಿದ ಹಾಗೆ ರೈತರ ಆದಾಯ ದ್ವಿಗುಣ ಎಂಬ ಬೂಸಿಯನ್ನು ದೇಶದ ಮೇಲೆ ಹೇರುತ್ತಾ ಮೊನ್ನೆ ಮೊನ್ನೆ ವರೆಗೂ ಓಡಾಡುತ್ತಿದ್ದ ಈ ಬೊಗಳೆ ಪ್ರಧಾನಿ ಲೋಕಸಭಾ ಚುನಾವಣೆಯಲ್ಲಿ ಈ ಯಾವ ವಿಷಯವನ್ನೂ ಪ್ರಸ್ತಾಪಿಸದೇ ಕೂತಿದ್ದಾರೆ.

ನಮ್ಮ ದುರಂತವೆಂದರೆ ಎದುರಾಳಿ ಪಕ್ಷಗಳೂ ನಿರುದ್ಯೋಗ, ರೈತ ಸಂಕಷ್ಟದಂಥಾ ವಿಷಯಗಳನ್ನು ಮುಂದೊತ್ತದೇ ಮೋದಿಯೊಬ್ಬರನ್ನೇ ಟಾರ್ಗೆಟ್ ಮಾಡುವ ರಾಜಕೀಯ ಮಾಡುತ್ತಿದ್ದಾರೆ. ಅಷ್ಟೇಕೆ ಮೋದಿ ಸೃಷ್ಟಿಸಿದ ಮರಣಾಂತಿಕ ಗಾಯಗಳಿಗೆ ಪರಿಹಾರ ಏನು ಎಂಬ ನಕಾಶೆಯೂ ಇವರಲ್ಲಿ ಇಲ್ಲ. ಮೇವಿಲ್ಲದ ಹಸುಗಳು ಕೂತಲ್ಲೇ ತೂಕಡಿಸಿ ಒದ್ದಾಡಿ ಸಾಯುತ್ತವೆ. ಪ್ರಾಣಿ ಸಹಜ ಅಸಹಾಯಕತೆ ಅದು. ಒಂದು ವರ್ಗದ ರೈತರು ಈ ಅಸಹಾಯಕತೆಯಲ್ಲಿದ್ದರೆ, ಇನ್ನೊಂದು ವರ್ಗ ಇರುವ ರಾಜಕೀಯ ಪಕ್ಷಗಳ ಮೇಲಾಟವನ್ನೇ ಸಂಭ್ರಮಿಸುತ್ತಾ ಕೂತಿರುವಂತಿದೆ.

ಜಿಂಕೆಯೊಂದು ಹುಲಿಗೆ ಬಲಿಯಾದರೆ ಹಿಂಡಿನ ಉಳಿದ ಜಿಂಕೆಗಳು ಹೋರಾಡಿದ್ದಿಲ್ಲ. ಒಮ್ಮೆ ನೋಡಿ ಮತ್ತೆ ಮೇಯತೊಡಗುತ್ತವೆ. ರೈತರೂ ಇಂಥಾ ಪಶು ಸಹಜ ಮಟ್ಟಕ್ಕೆ ಬಂದಿದ್ದಾರೆ. ಈ ರೂಪಾಂತರಕ್ಕೆ ಮೋದಿಯ ಕೊಡುಗೆ ದೊಡ್ಡದು!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...