Homeಮುಖಪುಟನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿಯಿಂದ ರೈತರ ಜೀವನ ಬರ್ಬಾದ್: ಒಪ್ಪಿಕೊಂಡ ಮೋದಿ ಸರ್ಕಾರ

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!!

- Advertisement -
- Advertisement -

| ಕೆ.ಪಿ ಸುರೇಶ್ |

ನೋಟು ಬಂದಿ ತರುವಾಯ ಲಕ್ಷಾಂತರ ರೈತರು ಸಂಕಷ್ಟ ಅನುಭವಿಸಿದ್ದಾರೆ ಎಂದು ಮೋದಿ ಸರ್ಕಾರದ ಕೃಷಿ ಇಲಾಖೆ ಒಪ್ಪಿಕೊಂಡಿದೆ!! ಸಂಸತ್ತಿನ ಆರ್ಥಿಕ ಸ್ಥಾಯಿ ಸಮಿತಿಗೆ ನೀಡಿದ ವರದಿಯಲ್ಲಿ ಕೃಷಿ ಇಲಾಖೆ ಈ ತಪ್ಪೊಪ್ಪಿಗೆ ವರದಿ ನೀಡಿದೆ. ವ್ಯಂಗ್ಯವೆಂದರೆ ಪ್ರಧಾನ ಚೌಕೀದಾರರು “ಕಾಳ ಧನ ಹತ್ತಿಕ್ಕಲು ನೋಟು ಬಂದಿಯಂಥಾ ಕಹಿ ಗುಳಿಗೆ ಪ್ರಯೋಗಿಸಿದೆ” ಎಂದು ಬೊಗಳೆ ಭಾಷಣ ಮಾಡುತ್ತಿದ್ದ ದಿನವೇ ಈ ವರದಿ ಬಹಿರಂಗವಾಗಿದೆ. ಈ ವರದಿ ಇಂದಿನದ್ದಲ್ಲ!! ಕಳೆದ ವರ್ಷದ ನವಂಬರ್ 20ರದ್ದು!! ಮೂರು ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಮೋದಿ ಬೂಸಿ ಭಾಷಣ ಮಾಡುವಾಗ ಈ ವರದಿ ಬಂದಿದ್ದು ಗಮನಾರ್ಹ.

ರೈತರು ಮುಂಗಾರು ಬೆಳೆ ಮಾರಿ ಹಿಂಗಾರು ಬೆಳೆಗೆ ತಯಾರಿ ನಡೆಸುವ ಸಂಕ್ರಮಣ ಘಟ್ಟದಲ್ಲಿ ಬಿದ್ದ ಈ ಹೊಡೆತದಿಂದಾಗಿ ನಗದು ಅಭಾವ ಅನುಭವಿಸಿದ ರೈತರು ಅಪಾರ ಸಂಕಷ್ಟ ಅನುಭವಿಸಬೇಕಾಯಿತು. ದೇಶದ 27 ಕೋಟಿ ರೈತಾಪಿ ವರ್ಗ ಬಹುತೇಕ ನಗದು ಮೂಲಕವೇ ವ್ಯವಹರಿಸುತ್ತಿದ್ದು ಬೀಜ, ಗೊಬ್ಬರ ಕೊಳ್ಳುವುದರಿಂದ ಹಿಡಿದು ಬೇಸಾಯದ ಎಲ್ಲಾ ಕಾರ್ಯಗಳಲ್ಲೂ ತೊಂದರೆ ಅನುಭವಿಸಿದರು. ದೊಡ್ಡ ಜಮೀನುದಾರರೂ ಕೂಲಿ ಸಂಬಳ ಕೊಡಲು ನಗದು ಅಭಾವ ಅನುಭವಿಸಿದರು.

ರಾಷ್ಟ್ರೀಯ ಬೀಜ ನಿಗಮ 1.38 ಲಕ್ಷ ಕ್ವಿಂಟಾಲುಗಳಷ್ಟು ಬಿತ್ತನೆ ಗೋಧಿ ಬೀಜ ಮಾರಾಟ ಮಾಡಲಾರದೇ ಸೋತಿತು. ಹಳೇ ನೋಟು ಬಳಸಬಹುದು ಎಂದು ಸರ್ಕಾರ ಹೇಳಿದ ಮೇಲೂ ಮಾರಾಟ ಹೆಚ್ಚಲಿಲ್ಲ.

ಬೇಸಾಯ ಕುಂಟಿದ ಬಗ್ಗೆ ಕೃಷಿ ಇಲಾಖೆ ವರದಿಯಲ್ಲಿ ಹೇಳಿದೆ. ಆದರೆ ಇದರ ಸಾಮಾಜಿಕ ಪರಿಣಾಮದ ಬಗ್ಗೆ ಅದು ಹೇಳಿಲ್ಲ. ಅತ್ತ ಕಾರ್ಮಿಕ ಸಚಿವಾಲಯ ನೋಟು ಬಂದಿಯಿಂದ ಕಷ್ಟ-ನಷ್ಟ ಉಂಟಾಗಲಿಲ್ಲ ಎಂದು ಹೇಳಿ ಈ ಸಮಿತಿಯಿಂದ ಉಗಿಸಿಕೊಂಡಿದೆ.

ಇದನ್ನು ಓದಿ: ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ಕೃಷಿ ಕ್ಷೇತ್ರ ಸತತವಾಗಿ ಒಂದೆರಡು ದಶಕಗಳಿಂದ ಕುಂಟುತ್ತಿರುವುದು ಸರ್ಕಾರಕ್ಕೆ ಗೊತ್ತು. ಅಂಥಾ ಸಂದರ್ಭದಲ್ಲಿ ಈ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡಿದ ಮೋದಿ ಇಂದಿಗೂ ಈ ಪ್ರಮಾದವನ್ನು ಒಪ್ಪಿಕೊಳ್ಳುತ್ತಿಲ್ಲ. ಗಾಯದ ಮೇಲೆ ಉಪ್ಪು ಸವರಿದ ಹಾಗೆ ರೈತರ ಆದಾಯ ದ್ವಿಗುಣ ಎಂಬ ಬೂಸಿಯನ್ನು ದೇಶದ ಮೇಲೆ ಹೇರುತ್ತಾ ಮೊನ್ನೆ ಮೊನ್ನೆ ವರೆಗೂ ಓಡಾಡುತ್ತಿದ್ದ ಈ ಬೊಗಳೆ ಪ್ರಧಾನಿ ಲೋಕಸಭಾ ಚುನಾವಣೆಯಲ್ಲಿ ಈ ಯಾವ ವಿಷಯವನ್ನೂ ಪ್ರಸ್ತಾಪಿಸದೇ ಕೂತಿದ್ದಾರೆ.

ನಮ್ಮ ದುರಂತವೆಂದರೆ ಎದುರಾಳಿ ಪಕ್ಷಗಳೂ ನಿರುದ್ಯೋಗ, ರೈತ ಸಂಕಷ್ಟದಂಥಾ ವಿಷಯಗಳನ್ನು ಮುಂದೊತ್ತದೇ ಮೋದಿಯೊಬ್ಬರನ್ನೇ ಟಾರ್ಗೆಟ್ ಮಾಡುವ ರಾಜಕೀಯ ಮಾಡುತ್ತಿದ್ದಾರೆ. ಅಷ್ಟೇಕೆ ಮೋದಿ ಸೃಷ್ಟಿಸಿದ ಮರಣಾಂತಿಕ ಗಾಯಗಳಿಗೆ ಪರಿಹಾರ ಏನು ಎಂಬ ನಕಾಶೆಯೂ ಇವರಲ್ಲಿ ಇಲ್ಲ. ಮೇವಿಲ್ಲದ ಹಸುಗಳು ಕೂತಲ್ಲೇ ತೂಕಡಿಸಿ ಒದ್ದಾಡಿ ಸಾಯುತ್ತವೆ. ಪ್ರಾಣಿ ಸಹಜ ಅಸಹಾಯಕತೆ ಅದು. ಒಂದು ವರ್ಗದ ರೈತರು ಈ ಅಸಹಾಯಕತೆಯಲ್ಲಿದ್ದರೆ, ಇನ್ನೊಂದು ವರ್ಗ ಇರುವ ರಾಜಕೀಯ ಪಕ್ಷಗಳ ಮೇಲಾಟವನ್ನೇ ಸಂಭ್ರಮಿಸುತ್ತಾ ಕೂತಿರುವಂತಿದೆ.

ಜಿಂಕೆಯೊಂದು ಹುಲಿಗೆ ಬಲಿಯಾದರೆ ಹಿಂಡಿನ ಉಳಿದ ಜಿಂಕೆಗಳು ಹೋರಾಡಿದ್ದಿಲ್ಲ. ಒಮ್ಮೆ ನೋಡಿ ಮತ್ತೆ ಮೇಯತೊಡಗುತ್ತವೆ. ರೈತರೂ ಇಂಥಾ ಪಶು ಸಹಜ ಮಟ್ಟಕ್ಕೆ ಬಂದಿದ್ದಾರೆ. ಈ ರೂಪಾಂತರಕ್ಕೆ ಮೋದಿಯ ಕೊಡುಗೆ ದೊಡ್ಡದು!

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...