Homeಮುಖಪುಟಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

ಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರಿಂ ಕೋರ್ಟ್‌ ಮಧ್ಯಂತರ ಜಾಮೀನು ಶುಕ್ರವಾರ ನೀಡಿದೆ. “ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಾಗಿತ್ತು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ಗುಜರಾತ್‌‌ ಹೈಕೋರ್ಟ್‌ ಅನ್ನು ಟೀಕಿಸಿದೆ.

ಗುರುವಾರದಂದು ಗುಜರಾತ್‌ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್, ಆರು ವಾರಗಳ ನಂತರ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀಸ್ತಾ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು, ಹೈಕೋರ್ಟ್ ತನ್ನ ಜಾಮೀನು ಅರ್ಜಿಯನ್ನು ನಿರ್ಧರಿಸುವವರೆಗೆ ತೀಸ್ತಾ ಅವರು ತನ್ನ ಪಾಸ್‌ಪೋರ್ಟ್ ಅನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಮಧ್ಯಂತರ ಜಾಮೀನು ನೀಡುವ ವೇಳೆ ತಿಳಿಸಿದೆ.

ಇದನ್ನೂ ಓದಿ: ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

“ಅರ್ಜಿದಾರರು 2 ತಿಂಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿದ್ದಾರೆ. ಈ ಹಂತದಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅವರ ವಸ್ತುನಿಷ್ಠ ಅರ್ಜಿಯ ಪರಿಗಣನೆಯ ಬಾಕಿ ಇರುವಾಗ ಮಧ್ಯಂತರ ಜಾಮೀನಿನ ಪರಿಹಾರಕ್ಕೆ ಖಂಡಿತವಾಗಿಯೂ ಅರ್ಹರಾಗಿರುತ್ತಾರೆ” ಎಂದು ಸಿಜೆಐ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿತ ಪ್ರಕರಣದಲ್ಲಿ ತೀಸ್ತಾ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸೂಕ್ತವೆಂದು ಪರಿಗಣಿಸುವ ಷರತ್ತುಗಳಿಗೆ ಒಳಪಟ್ಟು ಅವರನ್ನು ಆದಷ್ಟು ಬೇಗ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸುಪ್ರೀಂಕೋರ್ಟ್ ಗುಜರಾತ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ನ್ಯಾಯಾಲಯವು ಪರಿಗಣಿಸುವವರೆಗೆ ತನ್ನ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ಮತ್ತು ಬಾಕಿ ಉಳಿದಿರುವ ಪ್ರಕರಣದಲ್ಲಿ ಸಂಪೂರ್ಣ ಸಹಕಾರವನ್ನು ನೀಡುವಂತೆ ತೀಸ್ತಾ ಅವರಿಗೆ ಸುಪ್ರೀಂ ಸೂಚಿಸಿದೆ. ಹೀಗಾಗಿ ತೀಸ್ತಾ ಅವರು ಪಾಸ್‌ಪೋರ್ಟ್‌ ಅನ್ನು ಸಲ್ಲಿಸಿ, ಇತರ ಜಾಮೀನು ಔಪಚಾರಿಕತೆಗಳ ನಂತರ ಬಿಡುಗಡೆಯಾಗುತ್ತಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

2002 ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ‘ಅಮಾಯಕರನ್ನು’ ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಗುಜರಾತ್ ಪೋಲೀಸರ ಭಯೋತ್ಪಾದನಾ ನಿಗ್ರಹ ದಳವು ಜೂನ್ 26 ರಂದು ಮುಂಬೈನಲ್ಲಿ ತೀಸ್ತಾ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ಗಜರಾತಿನ ಜೈಲುಗಳಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾಮೀನು ದೊರಕುವುದು ತಡವಾಯಿತು, ಆದರೂ ಸದ್ಯಕ್ಕೆ ಇದು ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...