Homeಮುಖಪುಟಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

- Advertisement -
- Advertisement -

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆಯಾಗಿದೆ. ‘ಫುಕುವೋಕಾ ಪ್ರಶಸ್ತಿ’ಯು ಜಪಾನಿನ ಫುಕುವೊಕಾ ನಗರ ಮತ್ತು ಫುಕುವೋಕಾ ಸಿಟಿ ಇಂಟರ್ನ್ಯಾಷನಲ್ ಫೌಂಡೇಶನ್ ಸ್ಥಾಪಿಸಿದ ಪ್ರಶಸ್ತಿಯಾಗಿದ್ದು, ಏಷ್ಯನ್ ಸಂಸ್ಕೃತಿಯನ್ನು ಸಂರಕ್ಷಿಸುತ್ತಿರುವ ವ್ಯಕ್ತಿಗಳ ಅಥವಾ ಸಂಸ್ಥೆಗಳ ಮಹೋನ್ನತ ಕಾರ್ಯಗಳನ್ನು ಗೌರವಿಸಿ ನೀಡಲಾಗುತ್ತದೆ.

ಪಿ. ಸಾಯಿನಾಥ್‌ ಅವರು ‘ಪರಿ’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದು, ಇದು ಭಾರತದ ಗ್ರಾಮೀಣ ಭಾಗದ ಜನರ ಬದುಕು, ಕೃಷಿ ಇತ್ಯಾದಿಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿದೆ. ‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕವನ್ನು ಬರೆದಿರುವ ಅವರು ತಮ್ಮ ವೃತ್ತಿಜೀವನದುದ್ದಕ್ಕೂ, ರೈತರ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಈಗ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಕೂಡಾ ಅವರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

“ಪಿ. ಸಾಯಿನಾಥ್‌ ಅವರು ಉತ್ಸಾಹಿ ಪತ್ರಕರ್ತರಾಗಿದ್ದು, ಅವರು ಭಾರತದ ಬಡ ಕೃಷಿ ಗ್ರಾಮಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಗ್ರಾಮೀಣ ಜನರ ಮಾತುಗಳನ್ನು ಆಲಿಸಿ, ಜನರ ಜೀವನ ಶೈಲಿಯ ವಾಸ್ತವತೆಯನ್ನು ಸೆರೆಹಿಡಿದು ‘ಗ್ರಾಮೀಣ ವರದಿ’ಗಳನ್ನು ವರದಿ ಮಾಡುತ್ತಿದ್ದಾರೆ. ಏಷ್ಯಾವು ಪ್ರಕ್ಷುಬ್ಧ ಬದಲಾವಣೆಗಳ ಮೂಲಕ ಸಾಗುತ್ತಿದ್ದಾಗ ಸಾಯಿನಾಥ್‌‌ ಅವರು ಹೊಸ ‘ಜ್ಞಾನ’ವನ್ನು ಪಡೆಯುವುದಕ್ಕಾಗಿ ನಾಗರಿಕ ಸಹಕಾರವನ್ನು ಉತ್ತೇಜಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರು ಫುಕುವೊಕಾ ಬಹುಮಾನದ ಗ್ರ್ಯಾಂಡ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ” ಪ್ರಶಸ್ತಿಯ ಪ್ರಕಟಣೆ ಹೇಳಿದೆ.

Image

1990 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ‘ಗ್ರ್ಯಾಂಡ್ ಪ್ರಶಸ್ತಿ’, ‘ಶೈಕ್ಷಣಿಕ ಪ್ರಶಸ್ತಿ’, ಮತ್ತು ‘ಕಲೆ ಮತ್ತು ಸಂಸ್ಕೃತಿ ಪ್ರಶಸ್ತಿ’ ಎಂಬ ಮೂರು ವಿಭಾಗಗಳನ್ನು ಹೊಂದಿದೆ. ಪಿ. ಸಾಯಿನಾಥ್ ಅವರಿಗೆ ಘೋಷಣೆಯಾಗಿರುವ ಗ್ರ್ಯಾಂಡ್ ಪ್ರಶಸ್ತಿಯು 5 ಮಿಲಿಯನ್ ಯೆನ್(33.53 ಲಕ್ಷ) ನಗದು ಬಹುಮಾನವನ್ನು ಹೊಂದಿದೆ. ಉಳಿದ ಎರಡು ವಿಭಾಗದ ಪ್ರಶಸ್ತಿಯು 3 ಮಿಲಿಯನ್ ಯೆನ್ ನಗದು ಬಹುಮಾನ ಹೊಂದಿದೆ.

2015 ರಲ್ಲಿ ಇತಿಹಾಸಗಾರ ರಾಮಚಂದ್ರ ಗುಹಾ ಅವರಿ ಶೈಕ್ಷಣಿಕ ವಿಭಾದಲ್ಲಿ ಪ್ರಶಸ್ತಿ ದಕ್ಕಿತ್ತು. ಪುಕುವೋಕಾ ಗ್ರ್ಯಾಂಡ್ ಪ್ರಶಸ್ತಿಯು 2016 ರಲ್ಲಿ ಸಂಗೀತ ನಿರ್ದೇಶಕ ಎ.ಆರ್‌. ರಹಮಾನ್ ಅವರಿಗೆ ಕೂಡಾ ದಕ್ಕಿತ್ತು. 2018 ರಲ್ಲಿ ‘ಕಲೆ ಮತ್ತು ಸಂಸ್ಕೃತಿ’ ವಿಭಾದಲ್ಲಿ ತೀಜನ್ ಬಾಯಿ ಅವರಿಗೆ ಪ್ರಶಸ್ತಿ ದಕ್ಕಿತ್ತು. ಅವರು ಚತ್ತೀಸ್‌ಘಡದ ‘ಪಾಂಡಾವಾಣಿ’ ಎಂಬ ಸಾಂಪ್ರದಾಯಿಕ ಕಲಾ ಪ್ರದರ್ಶನದ ಕಲಾವಿದರಾಗಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...