Homeಮುಖಪುಟಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

- Advertisement -
- Advertisement -

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆಯಾಗಿದೆ. ‘ಫುಕುವೋಕಾ ಪ್ರಶಸ್ತಿ’ಯು ಜಪಾನಿನ ಫುಕುವೊಕಾ ನಗರ ಮತ್ತು ಫುಕುವೋಕಾ ಸಿಟಿ ಇಂಟರ್ನ್ಯಾಷನಲ್ ಫೌಂಡೇಶನ್ ಸ್ಥಾಪಿಸಿದ ಪ್ರಶಸ್ತಿಯಾಗಿದ್ದು, ಏಷ್ಯನ್ ಸಂಸ್ಕೃತಿಯನ್ನು ಸಂರಕ್ಷಿಸುತ್ತಿರುವ ವ್ಯಕ್ತಿಗಳ ಅಥವಾ ಸಂಸ್ಥೆಗಳ ಮಹೋನ್ನತ ಕಾರ್ಯಗಳನ್ನು ಗೌರವಿಸಿ ನೀಡಲಾಗುತ್ತದೆ.

ಪಿ. ಸಾಯಿನಾಥ್‌ ಅವರು ‘ಪರಿ’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದು, ಇದು ಭಾರತದ ಗ್ರಾಮೀಣ ಭಾಗದ ಜನರ ಬದುಕು, ಕೃಷಿ ಇತ್ಯಾದಿಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿದೆ. ‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕವನ್ನು ಬರೆದಿರುವ ಅವರು ತಮ್ಮ ವೃತ್ತಿಜೀವನದುದ್ದಕ್ಕೂ, ರೈತರ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಈಗ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಕೂಡಾ ಅವರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

“ಪಿ. ಸಾಯಿನಾಥ್‌ ಅವರು ಉತ್ಸಾಹಿ ಪತ್ರಕರ್ತರಾಗಿದ್ದು, ಅವರು ಭಾರತದ ಬಡ ಕೃಷಿ ಗ್ರಾಮಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಗ್ರಾಮೀಣ ಜನರ ಮಾತುಗಳನ್ನು ಆಲಿಸಿ, ಜನರ ಜೀವನ ಶೈಲಿಯ ವಾಸ್ತವತೆಯನ್ನು ಸೆರೆಹಿಡಿದು ‘ಗ್ರಾಮೀಣ ವರದಿ’ಗಳನ್ನು ವರದಿ ಮಾಡುತ್ತಿದ್ದಾರೆ. ಏಷ್ಯಾವು ಪ್ರಕ್ಷುಬ್ಧ ಬದಲಾವಣೆಗಳ ಮೂಲಕ ಸಾಗುತ್ತಿದ್ದಾಗ ಸಾಯಿನಾಥ್‌‌ ಅವರು ಹೊಸ ‘ಜ್ಞಾನ’ವನ್ನು ಪಡೆಯುವುದಕ್ಕಾಗಿ ನಾಗರಿಕ ಸಹಕಾರವನ್ನು ಉತ್ತೇಜಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರು ಫುಕುವೊಕಾ ಬಹುಮಾನದ ಗ್ರ್ಯಾಂಡ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ” ಪ್ರಶಸ್ತಿಯ ಪ್ರಕಟಣೆ ಹೇಳಿದೆ.

Image

1990 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ‘ಗ್ರ್ಯಾಂಡ್ ಪ್ರಶಸ್ತಿ’, ‘ಶೈಕ್ಷಣಿಕ ಪ್ರಶಸ್ತಿ’, ಮತ್ತು ‘ಕಲೆ ಮತ್ತು ಸಂಸ್ಕೃತಿ ಪ್ರಶಸ್ತಿ’ ಎಂಬ ಮೂರು ವಿಭಾಗಗಳನ್ನು ಹೊಂದಿದೆ. ಪಿ. ಸಾಯಿನಾಥ್ ಅವರಿಗೆ ಘೋಷಣೆಯಾಗಿರುವ ಗ್ರ್ಯಾಂಡ್ ಪ್ರಶಸ್ತಿಯು 5 ಮಿಲಿಯನ್ ಯೆನ್(33.53 ಲಕ್ಷ) ನಗದು ಬಹುಮಾನವನ್ನು ಹೊಂದಿದೆ. ಉಳಿದ ಎರಡು ವಿಭಾಗದ ಪ್ರಶಸ್ತಿಯು 3 ಮಿಲಿಯನ್ ಯೆನ್ ನಗದು ಬಹುಮಾನ ಹೊಂದಿದೆ.

2015 ರಲ್ಲಿ ಇತಿಹಾಸಗಾರ ರಾಮಚಂದ್ರ ಗುಹಾ ಅವರಿ ಶೈಕ್ಷಣಿಕ ವಿಭಾದಲ್ಲಿ ಪ್ರಶಸ್ತಿ ದಕ್ಕಿತ್ತು. ಪುಕುವೋಕಾ ಗ್ರ್ಯಾಂಡ್ ಪ್ರಶಸ್ತಿಯು 2016 ರಲ್ಲಿ ಸಂಗೀತ ನಿರ್ದೇಶಕ ಎ.ಆರ್‌. ರಹಮಾನ್ ಅವರಿಗೆ ಕೂಡಾ ದಕ್ಕಿತ್ತು. 2018 ರಲ್ಲಿ ‘ಕಲೆ ಮತ್ತು ಸಂಸ್ಕೃತಿ’ ವಿಭಾದಲ್ಲಿ ತೀಜನ್ ಬಾಯಿ ಅವರಿಗೆ ಪ್ರಶಸ್ತಿ ದಕ್ಕಿತ್ತು. ಅವರು ಚತ್ತೀಸ್‌ಘಡದ ‘ಪಾಂಡಾವಾಣಿ’ ಎಂಬ ಸಾಂಪ್ರದಾಯಿಕ ಕಲಾ ಪ್ರದರ್ಶನದ ಕಲಾವಿದರಾಗಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...