Homeಮುಖಪುಟಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

- Advertisement -
- Advertisement -

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆಯಾಗಿದೆ. ‘ಫುಕುವೋಕಾ ಪ್ರಶಸ್ತಿ’ಯು ಜಪಾನಿನ ಫುಕುವೊಕಾ ನಗರ ಮತ್ತು ಫುಕುವೋಕಾ ಸಿಟಿ ಇಂಟರ್ನ್ಯಾಷನಲ್ ಫೌಂಡೇಶನ್ ಸ್ಥಾಪಿಸಿದ ಪ್ರಶಸ್ತಿಯಾಗಿದ್ದು, ಏಷ್ಯನ್ ಸಂಸ್ಕೃತಿಯನ್ನು ಸಂರಕ್ಷಿಸುತ್ತಿರುವ ವ್ಯಕ್ತಿಗಳ ಅಥವಾ ಸಂಸ್ಥೆಗಳ ಮಹೋನ್ನತ ಕಾರ್ಯಗಳನ್ನು ಗೌರವಿಸಿ ನೀಡಲಾಗುತ್ತದೆ.

ಪಿ. ಸಾಯಿನಾಥ್‌ ಅವರು ‘ಪರಿ’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದು, ಇದು ಭಾರತದ ಗ್ರಾಮೀಣ ಭಾಗದ ಜನರ ಬದುಕು, ಕೃಷಿ ಇತ್ಯಾದಿಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿದೆ. ‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕವನ್ನು ಬರೆದಿರುವ ಅವರು ತಮ್ಮ ವೃತ್ತಿಜೀವನದುದ್ದಕ್ಕೂ, ರೈತರ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಈಗ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಕೂಡಾ ಅವರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

“ಪಿ. ಸಾಯಿನಾಥ್‌ ಅವರು ಉತ್ಸಾಹಿ ಪತ್ರಕರ್ತರಾಗಿದ್ದು, ಅವರು ಭಾರತದ ಬಡ ಕೃಷಿ ಗ್ರಾಮಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಗ್ರಾಮೀಣ ಜನರ ಮಾತುಗಳನ್ನು ಆಲಿಸಿ, ಜನರ ಜೀವನ ಶೈಲಿಯ ವಾಸ್ತವತೆಯನ್ನು ಸೆರೆಹಿಡಿದು ‘ಗ್ರಾಮೀಣ ವರದಿ’ಗಳನ್ನು ವರದಿ ಮಾಡುತ್ತಿದ್ದಾರೆ. ಏಷ್ಯಾವು ಪ್ರಕ್ಷುಬ್ಧ ಬದಲಾವಣೆಗಳ ಮೂಲಕ ಸಾಗುತ್ತಿದ್ದಾಗ ಸಾಯಿನಾಥ್‌‌ ಅವರು ಹೊಸ ‘ಜ್ಞಾನ’ವನ್ನು ಪಡೆಯುವುದಕ್ಕಾಗಿ ನಾಗರಿಕ ಸಹಕಾರವನ್ನು ಉತ್ತೇಜಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರು ಫುಕುವೊಕಾ ಬಹುಮಾನದ ಗ್ರ್ಯಾಂಡ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ” ಪ್ರಶಸ್ತಿಯ ಪ್ರಕಟಣೆ ಹೇಳಿದೆ.

Image

1990 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ‘ಗ್ರ್ಯಾಂಡ್ ಪ್ರಶಸ್ತಿ’, ‘ಶೈಕ್ಷಣಿಕ ಪ್ರಶಸ್ತಿ’, ಮತ್ತು ‘ಕಲೆ ಮತ್ತು ಸಂಸ್ಕೃತಿ ಪ್ರಶಸ್ತಿ’ ಎಂಬ ಮೂರು ವಿಭಾಗಗಳನ್ನು ಹೊಂದಿದೆ. ಪಿ. ಸಾಯಿನಾಥ್ ಅವರಿಗೆ ಘೋಷಣೆಯಾಗಿರುವ ಗ್ರ್ಯಾಂಡ್ ಪ್ರಶಸ್ತಿಯು 5 ಮಿಲಿಯನ್ ಯೆನ್(33.53 ಲಕ್ಷ) ನಗದು ಬಹುಮಾನವನ್ನು ಹೊಂದಿದೆ. ಉಳಿದ ಎರಡು ವಿಭಾಗದ ಪ್ರಶಸ್ತಿಯು 3 ಮಿಲಿಯನ್ ಯೆನ್ ನಗದು ಬಹುಮಾನ ಹೊಂದಿದೆ.

2015 ರಲ್ಲಿ ಇತಿಹಾಸಗಾರ ರಾಮಚಂದ್ರ ಗುಹಾ ಅವರಿ ಶೈಕ್ಷಣಿಕ ವಿಭಾದಲ್ಲಿ ಪ್ರಶಸ್ತಿ ದಕ್ಕಿತ್ತು. ಪುಕುವೋಕಾ ಗ್ರ್ಯಾಂಡ್ ಪ್ರಶಸ್ತಿಯು 2016 ರಲ್ಲಿ ಸಂಗೀತ ನಿರ್ದೇಶಕ ಎ.ಆರ್‌. ರಹಮಾನ್ ಅವರಿಗೆ ಕೂಡಾ ದಕ್ಕಿತ್ತು. 2018 ರಲ್ಲಿ ‘ಕಲೆ ಮತ್ತು ಸಂಸ್ಕೃತಿ’ ವಿಭಾದಲ್ಲಿ ತೀಜನ್ ಬಾಯಿ ಅವರಿಗೆ ಪ್ರಶಸ್ತಿ ದಕ್ಕಿತ್ತು. ಅವರು ಚತ್ತೀಸ್‌ಘಡದ ‘ಪಾಂಡಾವಾಣಿ’ ಎಂಬ ಸಾಂಪ್ರದಾಯಿಕ ಕಲಾ ಪ್ರದರ್ಶನದ ಕಲಾವಿದರಾಗಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...