Homeಮುಖಪುಟಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

- Advertisement -
- Advertisement -

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆಯಾಗಿದೆ. ‘ಫುಕುವೋಕಾ ಪ್ರಶಸ್ತಿ’ಯು ಜಪಾನಿನ ಫುಕುವೊಕಾ ನಗರ ಮತ್ತು ಫುಕುವೋಕಾ ಸಿಟಿ ಇಂಟರ್ನ್ಯಾಷನಲ್ ಫೌಂಡೇಶನ್ ಸ್ಥಾಪಿಸಿದ ಪ್ರಶಸ್ತಿಯಾಗಿದ್ದು, ಏಷ್ಯನ್ ಸಂಸ್ಕೃತಿಯನ್ನು ಸಂರಕ್ಷಿಸುತ್ತಿರುವ ವ್ಯಕ್ತಿಗಳ ಅಥವಾ ಸಂಸ್ಥೆಗಳ ಮಹೋನ್ನತ ಕಾರ್ಯಗಳನ್ನು ಗೌರವಿಸಿ ನೀಡಲಾಗುತ್ತದೆ.

ಪಿ. ಸಾಯಿನಾಥ್‌ ಅವರು ‘ಪರಿ’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದು, ಇದು ಭಾರತದ ಗ್ರಾಮೀಣ ಭಾಗದ ಜನರ ಬದುಕು, ಕೃಷಿ ಇತ್ಯಾದಿಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿದೆ. ‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕವನ್ನು ಬರೆದಿರುವ ಅವರು ತಮ್ಮ ವೃತ್ತಿಜೀವನದುದ್ದಕ್ಕೂ, ರೈತರ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಈಗ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಕೂಡಾ ಅವರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

“ಪಿ. ಸಾಯಿನಾಥ್‌ ಅವರು ಉತ್ಸಾಹಿ ಪತ್ರಕರ್ತರಾಗಿದ್ದು, ಅವರು ಭಾರತದ ಬಡ ಕೃಷಿ ಗ್ರಾಮಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಗ್ರಾಮೀಣ ಜನರ ಮಾತುಗಳನ್ನು ಆಲಿಸಿ, ಜನರ ಜೀವನ ಶೈಲಿಯ ವಾಸ್ತವತೆಯನ್ನು ಸೆರೆಹಿಡಿದು ‘ಗ್ರಾಮೀಣ ವರದಿ’ಗಳನ್ನು ವರದಿ ಮಾಡುತ್ತಿದ್ದಾರೆ. ಏಷ್ಯಾವು ಪ್ರಕ್ಷುಬ್ಧ ಬದಲಾವಣೆಗಳ ಮೂಲಕ ಸಾಗುತ್ತಿದ್ದಾಗ ಸಾಯಿನಾಥ್‌‌ ಅವರು ಹೊಸ ‘ಜ್ಞಾನ’ವನ್ನು ಪಡೆಯುವುದಕ್ಕಾಗಿ ನಾಗರಿಕ ಸಹಕಾರವನ್ನು ಉತ್ತೇಜಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರು ಫುಕುವೊಕಾ ಬಹುಮಾನದ ಗ್ರ್ಯಾಂಡ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ” ಪ್ರಶಸ್ತಿಯ ಪ್ರಕಟಣೆ ಹೇಳಿದೆ.

Image

1990 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ‘ಗ್ರ್ಯಾಂಡ್ ಪ್ರಶಸ್ತಿ’, ‘ಶೈಕ್ಷಣಿಕ ಪ್ರಶಸ್ತಿ’, ಮತ್ತು ‘ಕಲೆ ಮತ್ತು ಸಂಸ್ಕೃತಿ ಪ್ರಶಸ್ತಿ’ ಎಂಬ ಮೂರು ವಿಭಾಗಗಳನ್ನು ಹೊಂದಿದೆ. ಪಿ. ಸಾಯಿನಾಥ್ ಅವರಿಗೆ ಘೋಷಣೆಯಾಗಿರುವ ಗ್ರ್ಯಾಂಡ್ ಪ್ರಶಸ್ತಿಯು 5 ಮಿಲಿಯನ್ ಯೆನ್(33.53 ಲಕ್ಷ) ನಗದು ಬಹುಮಾನವನ್ನು ಹೊಂದಿದೆ. ಉಳಿದ ಎರಡು ವಿಭಾಗದ ಪ್ರಶಸ್ತಿಯು 3 ಮಿಲಿಯನ್ ಯೆನ್ ನಗದು ಬಹುಮಾನ ಹೊಂದಿದೆ.

2015 ರಲ್ಲಿ ಇತಿಹಾಸಗಾರ ರಾಮಚಂದ್ರ ಗುಹಾ ಅವರಿ ಶೈಕ್ಷಣಿಕ ವಿಭಾದಲ್ಲಿ ಪ್ರಶಸ್ತಿ ದಕ್ಕಿತ್ತು. ಪುಕುವೋಕಾ ಗ್ರ್ಯಾಂಡ್ ಪ್ರಶಸ್ತಿಯು 2016 ರಲ್ಲಿ ಸಂಗೀತ ನಿರ್ದೇಶಕ ಎ.ಆರ್‌. ರಹಮಾನ್ ಅವರಿಗೆ ಕೂಡಾ ದಕ್ಕಿತ್ತು. 2018 ರಲ್ಲಿ ‘ಕಲೆ ಮತ್ತು ಸಂಸ್ಕೃತಿ’ ವಿಭಾದಲ್ಲಿ ತೀಜನ್ ಬಾಯಿ ಅವರಿಗೆ ಪ್ರಶಸ್ತಿ ದಕ್ಕಿತ್ತು. ಅವರು ಚತ್ತೀಸ್‌ಘಡದ ‘ಪಾಂಡಾವಾಣಿ’ ಎಂಬ ಸಾಂಪ್ರದಾಯಿಕ ಕಲಾ ಪ್ರದರ್ಶನದ ಕಲಾವಿದರಾಗಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...