Homeಮುಖಪುಟಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

- Advertisement -
- Advertisement -

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆಯಾಗಿದೆ. ‘ಫುಕುವೋಕಾ ಪ್ರಶಸ್ತಿ’ಯು ಜಪಾನಿನ ಫುಕುವೊಕಾ ನಗರ ಮತ್ತು ಫುಕುವೋಕಾ ಸಿಟಿ ಇಂಟರ್ನ್ಯಾಷನಲ್ ಫೌಂಡೇಶನ್ ಸ್ಥಾಪಿಸಿದ ಪ್ರಶಸ್ತಿಯಾಗಿದ್ದು, ಏಷ್ಯನ್ ಸಂಸ್ಕೃತಿಯನ್ನು ಸಂರಕ್ಷಿಸುತ್ತಿರುವ ವ್ಯಕ್ತಿಗಳ ಅಥವಾ ಸಂಸ್ಥೆಗಳ ಮಹೋನ್ನತ ಕಾರ್ಯಗಳನ್ನು ಗೌರವಿಸಿ ನೀಡಲಾಗುತ್ತದೆ.

ಪಿ. ಸಾಯಿನಾಥ್‌ ಅವರು ‘ಪರಿ’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದು, ಇದು ಭಾರತದ ಗ್ರಾಮೀಣ ಭಾಗದ ಜನರ ಬದುಕು, ಕೃಷಿ ಇತ್ಯಾದಿಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿದೆ. ‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕವನ್ನು ಬರೆದಿರುವ ಅವರು ತಮ್ಮ ವೃತ್ತಿಜೀವನದುದ್ದಕ್ಕೂ, ರೈತರ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಈಗ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಕೂಡಾ ಅವರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

“ಪಿ. ಸಾಯಿನಾಥ್‌ ಅವರು ಉತ್ಸಾಹಿ ಪತ್ರಕರ್ತರಾಗಿದ್ದು, ಅವರು ಭಾರತದ ಬಡ ಕೃಷಿ ಗ್ರಾಮಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಗ್ರಾಮೀಣ ಜನರ ಮಾತುಗಳನ್ನು ಆಲಿಸಿ, ಜನರ ಜೀವನ ಶೈಲಿಯ ವಾಸ್ತವತೆಯನ್ನು ಸೆರೆಹಿಡಿದು ‘ಗ್ರಾಮೀಣ ವರದಿ’ಗಳನ್ನು ವರದಿ ಮಾಡುತ್ತಿದ್ದಾರೆ. ಏಷ್ಯಾವು ಪ್ರಕ್ಷುಬ್ಧ ಬದಲಾವಣೆಗಳ ಮೂಲಕ ಸಾಗುತ್ತಿದ್ದಾಗ ಸಾಯಿನಾಥ್‌‌ ಅವರು ಹೊಸ ‘ಜ್ಞಾನ’ವನ್ನು ಪಡೆಯುವುದಕ್ಕಾಗಿ ನಾಗರಿಕ ಸಹಕಾರವನ್ನು ಉತ್ತೇಜಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರು ಫುಕುವೊಕಾ ಬಹುಮಾನದ ಗ್ರ್ಯಾಂಡ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ” ಪ್ರಶಸ್ತಿಯ ಪ್ರಕಟಣೆ ಹೇಳಿದೆ.

Image

1990 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ‘ಗ್ರ್ಯಾಂಡ್ ಪ್ರಶಸ್ತಿ’, ‘ಶೈಕ್ಷಣಿಕ ಪ್ರಶಸ್ತಿ’, ಮತ್ತು ‘ಕಲೆ ಮತ್ತು ಸಂಸ್ಕೃತಿ ಪ್ರಶಸ್ತಿ’ ಎಂಬ ಮೂರು ವಿಭಾಗಗಳನ್ನು ಹೊಂದಿದೆ. ಪಿ. ಸಾಯಿನಾಥ್ ಅವರಿಗೆ ಘೋಷಣೆಯಾಗಿರುವ ಗ್ರ್ಯಾಂಡ್ ಪ್ರಶಸ್ತಿಯು 5 ಮಿಲಿಯನ್ ಯೆನ್(33.53 ಲಕ್ಷ) ನಗದು ಬಹುಮಾನವನ್ನು ಹೊಂದಿದೆ. ಉಳಿದ ಎರಡು ವಿಭಾಗದ ಪ್ರಶಸ್ತಿಯು 3 ಮಿಲಿಯನ್ ಯೆನ್ ನಗದು ಬಹುಮಾನ ಹೊಂದಿದೆ.

2015 ರಲ್ಲಿ ಇತಿಹಾಸಗಾರ ರಾಮಚಂದ್ರ ಗುಹಾ ಅವರಿ ಶೈಕ್ಷಣಿಕ ವಿಭಾದಲ್ಲಿ ಪ್ರಶಸ್ತಿ ದಕ್ಕಿತ್ತು. ಪುಕುವೋಕಾ ಗ್ರ್ಯಾಂಡ್ ಪ್ರಶಸ್ತಿಯು 2016 ರಲ್ಲಿ ಸಂಗೀತ ನಿರ್ದೇಶಕ ಎ.ಆರ್‌. ರಹಮಾನ್ ಅವರಿಗೆ ಕೂಡಾ ದಕ್ಕಿತ್ತು. 2018 ರಲ್ಲಿ ‘ಕಲೆ ಮತ್ತು ಸಂಸ್ಕೃತಿ’ ವಿಭಾದಲ್ಲಿ ತೀಜನ್ ಬಾಯಿ ಅವರಿಗೆ ಪ್ರಶಸ್ತಿ ದಕ್ಕಿತ್ತು. ಅವರು ಚತ್ತೀಸ್‌ಘಡದ ‘ಪಾಂಡಾವಾಣಿ’ ಎಂಬ ಸಾಂಪ್ರದಾಯಿಕ ಕಲಾ ಪ್ರದರ್ಶನದ ಕಲಾವಿದರಾಗಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...