Homeಚಳವಳಿ#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು...

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು…

- Advertisement -
- Advertisement -

ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರದಿಂದ ಪರಿಹಾರ ಹಣ ನೀಡಿಲ್ಲ. ಪಿಎಂಸಿ ಬ್ಯಾಂಕಿನಿಂದ ಅನ್ಯಾಯ.. ಕಾಶ್ಮೀರದಲ್ಲಿ ಕರ್ಫ್ಯೂ ಮುಂದುವರೆದಿದೆ. ಆದರೆ ಪ್ರಧಾನಿ ಮೋದಿ ಈ ವಿಚಾರಗಳಿಗೆ ಏನು ಮಾಡುತ್ತಿಲ್ಲ ಎಂದು ಆರೋಪಿಸಿ ’ಇದು ಸರಿಯಲ್ಲ ಮೋದಿಜಿ’ ಎಂದು ನೆಟ್ಟಿಗರು ಗುಡುಗಿದ್ದಾರೆ.

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್ ಮಾಡುವ ಮೂಲಕ ಹೊಸ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದು ಭಾರತದಲ್ಲೇ ಟ್ರೆಂಡ್ ಆಗಿದ್ದು ಸಾಕಷ್ಟು ಜನ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮೋದಿ ಜಿ ರಾಷ್ಟ್ರದ ದುಃಖವನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಫ್ಯಾಸಿಸ್ಟ್ ಸರ್ಕಾರವು “ಭಾರತದಲ್ಲಿ ಎಲ್ಲವೂ ಒಳ್ಳೆಯದು” ಎಂದು ಹೇಳಿದಾಗ ಅವರ ಮಾತುಗಳನ್ನು ಮರುಪರಿಶೀಲಿಸಬೇಕಿದೆ. ಮೋದಿಯವರ ಅಜಾಗರೂಕ ನಿರ್ಧಾರಗಳಿಂದಾಗಿ ಇಡೀ ರಾಷ್ಟ್ರವು ಅಘೋಷಿತ ತುರ್ತು ಪರಿಸ್ಥಿತಿಯಿಂದ ಬಳಲುತ್ತಿದೆ. ಇನ್ನೂ ತಡವಾಗುವ ಮುನ್ನ ಎಚ್ಚರಗೊಳ್ಳೋಣ ಎಂದು ಕುಶಾಗ್ರ ಸಕ್ಸೇನಾರವರು ಟ್ವೀಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ 17 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಲೋಕಸಭಾ ಚುನಾವಣೆಗಳಲ್ಲಿ 14 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಆದರೆ ಪ್ರವಾಹ ಉಂಟಾದಾಗ ಜನರನ್ನು ನೋಡಲು ಸಮಯ ಮತ್ತು ಹಣವಿಲ್ಲ.

ಹೇಡಿ 25 ಸಂಸದರು ಮತ್ತು 105 ಶಾಸಕರು ಮೌನವಾಗಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಚಲಾಯಿಸಿದ ಭಕ್ತರಿಗೆ ರಾಷ್ಟ್ರೀಯ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗಿದೆ

ಸ್ವಂತ ಸಮಾಧಿಯನ್ನು ಅಗೆಯುವುದು ಭಕ್ತರಿಂದ ಕಲಿಯಬೇಕು ಎಂದು ಹೇಮಂತ್ ಕೃಷ್ಣೇಗೌಡ ಟ್ವೀಟ್ ಮಾಡಿದ್ದಾರೆ.

ನವರಾತ್ರಿಯ ಐದನೇ ದಿ‌‌ನ‌ ಇಂದು. ಕಳೆದ ಬಾರಿ ಮೋದಿ ಪ್ರಧಾನಿಯಾಗಬೇಕೆಂದು ನಾವೆಲ್ಲರೂ ಒಂಭತ್ತು ದಿನಗಳ ಕಾಲ ಉಪವಾಸ ಮಾಡಿದ್ದೆವು. ಈ ಬಾರಿ ವೃಷಭಾವತಿ ಸ್ವಚ್ಛವಾಗಲೆಂದು ನಾವು ಉಪವಾಸವಿದ್ದೇವೆ ಎಂದು ಚಕ್ರವರ್ತಿ ಸೂಲಿಬೆಲೆ ಬರೆಯುವ ಮೂಲಕ ಪರೋಕ್ಷವಾಗಿ ಮೋದಿ ವಿರುದ್ಧದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರೀತಿಯ ನರೇಂದ್ರ ಮೋದಿಜಿ,
ಕರ್ನಾಟಕದ ಜನರ ಬಗ್ಗೆ ದುರಹಂಕಾರಿ ಹೇಳಿಕೆ ನೀಡಿದ ಡಿ.ವಿ.ಸದಾನಂದಗೌಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಅಲ್ಲಿ ಭಾರೀ ಪ್ರವಾಹದ ನಂತರ ಲಕ್ಷಾಂತರ ಜನರು ಬಳಲುತ್ತಿದ್ದಾರೆ. ನಾವು ನೆರವು ಕೇಳಿದ್ದೇವೆ ಅಷ್ಟೇ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ ಎಂದು ಶ್ವೇತಾ ಡಿ.ಜಿಯವರು ಕಿಡಿಕಾರಿದ್ದಾರೆ.

ರೈತರು ಕಾರ್ಮಿಕರ ಕಷ್ಟದ ಕುರಿತು ಅಮಿತ್ ಪಾಂಡೆಯವರು ವಿಡಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರವನ್ನು ಸ್ತುತಿಸಿದರೆ ನೀವು ರಾಷ್ಟ್ರೀಯವಾದಿಗಳಾಗುತ್ತೀರಿ. ಸರ್ಕಾರವನ್ನು ಪ್ರಶ್ನಿಸಿದರೆ (ಅಥವಾ ಪ್ರವಾಹ ಪರಿಹಾರಕ್ಕಾಗಿ ಸಹ ಕೇಳಿ) ನಿಮ್ಮನ್ನು ರಾಷ್ಟ್ರ ವಿರೋಧಿ ಮತ್ತು ದೇಶ್ರೋಹಿ ಎಂದು ಕರೆಯಲಾಗುತ್ತದೆ. ಇದು ಪ್ರಸ್ತುತ ಸನ್ನಿವೇಶದ ಕಹಿ ಸತ್ಯ. ಎಂದು ಶೌರ್ಯ ಡಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...