Homeಚಳವಳಿ#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು...

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು…

- Advertisement -
- Advertisement -

ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರದಿಂದ ಪರಿಹಾರ ಹಣ ನೀಡಿಲ್ಲ. ಪಿಎಂಸಿ ಬ್ಯಾಂಕಿನಿಂದ ಅನ್ಯಾಯ.. ಕಾಶ್ಮೀರದಲ್ಲಿ ಕರ್ಫ್ಯೂ ಮುಂದುವರೆದಿದೆ. ಆದರೆ ಪ್ರಧಾನಿ ಮೋದಿ ಈ ವಿಚಾರಗಳಿಗೆ ಏನು ಮಾಡುತ್ತಿಲ್ಲ ಎಂದು ಆರೋಪಿಸಿ ’ಇದು ಸರಿಯಲ್ಲ ಮೋದಿಜಿ’ ಎಂದು ನೆಟ್ಟಿಗರು ಗುಡುಗಿದ್ದಾರೆ.

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್ ಮಾಡುವ ಮೂಲಕ ಹೊಸ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದು ಭಾರತದಲ್ಲೇ ಟ್ರೆಂಡ್ ಆಗಿದ್ದು ಸಾಕಷ್ಟು ಜನ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮೋದಿ ಜಿ ರಾಷ್ಟ್ರದ ದುಃಖವನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಫ್ಯಾಸಿಸ್ಟ್ ಸರ್ಕಾರವು “ಭಾರತದಲ್ಲಿ ಎಲ್ಲವೂ ಒಳ್ಳೆಯದು” ಎಂದು ಹೇಳಿದಾಗ ಅವರ ಮಾತುಗಳನ್ನು ಮರುಪರಿಶೀಲಿಸಬೇಕಿದೆ. ಮೋದಿಯವರ ಅಜಾಗರೂಕ ನಿರ್ಧಾರಗಳಿಂದಾಗಿ ಇಡೀ ರಾಷ್ಟ್ರವು ಅಘೋಷಿತ ತುರ್ತು ಪರಿಸ್ಥಿತಿಯಿಂದ ಬಳಲುತ್ತಿದೆ. ಇನ್ನೂ ತಡವಾಗುವ ಮುನ್ನ ಎಚ್ಚರಗೊಳ್ಳೋಣ ಎಂದು ಕುಶಾಗ್ರ ಸಕ್ಸೇನಾರವರು ಟ್ವೀಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ 17 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಲೋಕಸಭಾ ಚುನಾವಣೆಗಳಲ್ಲಿ 14 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಆದರೆ ಪ್ರವಾಹ ಉಂಟಾದಾಗ ಜನರನ್ನು ನೋಡಲು ಸಮಯ ಮತ್ತು ಹಣವಿಲ್ಲ.

ಹೇಡಿ 25 ಸಂಸದರು ಮತ್ತು 105 ಶಾಸಕರು ಮೌನವಾಗಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಚಲಾಯಿಸಿದ ಭಕ್ತರಿಗೆ ರಾಷ್ಟ್ರೀಯ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗಿದೆ

ಸ್ವಂತ ಸಮಾಧಿಯನ್ನು ಅಗೆಯುವುದು ಭಕ್ತರಿಂದ ಕಲಿಯಬೇಕು ಎಂದು ಹೇಮಂತ್ ಕೃಷ್ಣೇಗೌಡ ಟ್ವೀಟ್ ಮಾಡಿದ್ದಾರೆ.

ನವರಾತ್ರಿಯ ಐದನೇ ದಿ‌‌ನ‌ ಇಂದು. ಕಳೆದ ಬಾರಿ ಮೋದಿ ಪ್ರಧಾನಿಯಾಗಬೇಕೆಂದು ನಾವೆಲ್ಲರೂ ಒಂಭತ್ತು ದಿನಗಳ ಕಾಲ ಉಪವಾಸ ಮಾಡಿದ್ದೆವು. ಈ ಬಾರಿ ವೃಷಭಾವತಿ ಸ್ವಚ್ಛವಾಗಲೆಂದು ನಾವು ಉಪವಾಸವಿದ್ದೇವೆ ಎಂದು ಚಕ್ರವರ್ತಿ ಸೂಲಿಬೆಲೆ ಬರೆಯುವ ಮೂಲಕ ಪರೋಕ್ಷವಾಗಿ ಮೋದಿ ವಿರುದ್ಧದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರೀತಿಯ ನರೇಂದ್ರ ಮೋದಿಜಿ,
ಕರ್ನಾಟಕದ ಜನರ ಬಗ್ಗೆ ದುರಹಂಕಾರಿ ಹೇಳಿಕೆ ನೀಡಿದ ಡಿ.ವಿ.ಸದಾನಂದಗೌಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಅಲ್ಲಿ ಭಾರೀ ಪ್ರವಾಹದ ನಂತರ ಲಕ್ಷಾಂತರ ಜನರು ಬಳಲುತ್ತಿದ್ದಾರೆ. ನಾವು ನೆರವು ಕೇಳಿದ್ದೇವೆ ಅಷ್ಟೇ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ ಎಂದು ಶ್ವೇತಾ ಡಿ.ಜಿಯವರು ಕಿಡಿಕಾರಿದ್ದಾರೆ.

ರೈತರು ಕಾರ್ಮಿಕರ ಕಷ್ಟದ ಕುರಿತು ಅಮಿತ್ ಪಾಂಡೆಯವರು ವಿಡಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರವನ್ನು ಸ್ತುತಿಸಿದರೆ ನೀವು ರಾಷ್ಟ್ರೀಯವಾದಿಗಳಾಗುತ್ತೀರಿ. ಸರ್ಕಾರವನ್ನು ಪ್ರಶ್ನಿಸಿದರೆ (ಅಥವಾ ಪ್ರವಾಹ ಪರಿಹಾರಕ್ಕಾಗಿ ಸಹ ಕೇಳಿ) ನಿಮ್ಮನ್ನು ರಾಷ್ಟ್ರ ವಿರೋಧಿ ಮತ್ತು ದೇಶ್ರೋಹಿ ಎಂದು ಕರೆಯಲಾಗುತ್ತದೆ. ಇದು ಪ್ರಸ್ತುತ ಸನ್ನಿವೇಶದ ಕಹಿ ಸತ್ಯ. ಎಂದು ಶೌರ್ಯ ಡಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...