Homeಚಳವಳಿ#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು...

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು…

- Advertisement -
- Advertisement -

ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರದಿಂದ ಪರಿಹಾರ ಹಣ ನೀಡಿಲ್ಲ. ಪಿಎಂಸಿ ಬ್ಯಾಂಕಿನಿಂದ ಅನ್ಯಾಯ.. ಕಾಶ್ಮೀರದಲ್ಲಿ ಕರ್ಫ್ಯೂ ಮುಂದುವರೆದಿದೆ. ಆದರೆ ಪ್ರಧಾನಿ ಮೋದಿ ಈ ವಿಚಾರಗಳಿಗೆ ಏನು ಮಾಡುತ್ತಿಲ್ಲ ಎಂದು ಆರೋಪಿಸಿ ’ಇದು ಸರಿಯಲ್ಲ ಮೋದಿಜಿ’ ಎಂದು ನೆಟ್ಟಿಗರು ಗುಡುಗಿದ್ದಾರೆ.

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್ ಮಾಡುವ ಮೂಲಕ ಹೊಸ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದು ಭಾರತದಲ್ಲೇ ಟ್ರೆಂಡ್ ಆಗಿದ್ದು ಸಾಕಷ್ಟು ಜನ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮೋದಿ ಜಿ ರಾಷ್ಟ್ರದ ದುಃಖವನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಫ್ಯಾಸಿಸ್ಟ್ ಸರ್ಕಾರವು “ಭಾರತದಲ್ಲಿ ಎಲ್ಲವೂ ಒಳ್ಳೆಯದು” ಎಂದು ಹೇಳಿದಾಗ ಅವರ ಮಾತುಗಳನ್ನು ಮರುಪರಿಶೀಲಿಸಬೇಕಿದೆ. ಮೋದಿಯವರ ಅಜಾಗರೂಕ ನಿರ್ಧಾರಗಳಿಂದಾಗಿ ಇಡೀ ರಾಷ್ಟ್ರವು ಅಘೋಷಿತ ತುರ್ತು ಪರಿಸ್ಥಿತಿಯಿಂದ ಬಳಲುತ್ತಿದೆ. ಇನ್ನೂ ತಡವಾಗುವ ಮುನ್ನ ಎಚ್ಚರಗೊಳ್ಳೋಣ ಎಂದು ಕುಶಾಗ್ರ ಸಕ್ಸೇನಾರವರು ಟ್ವೀಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ 17 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಲೋಕಸಭಾ ಚುನಾವಣೆಗಳಲ್ಲಿ 14 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಆದರೆ ಪ್ರವಾಹ ಉಂಟಾದಾಗ ಜನರನ್ನು ನೋಡಲು ಸಮಯ ಮತ್ತು ಹಣವಿಲ್ಲ.

ಹೇಡಿ 25 ಸಂಸದರು ಮತ್ತು 105 ಶಾಸಕರು ಮೌನವಾಗಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಚಲಾಯಿಸಿದ ಭಕ್ತರಿಗೆ ರಾಷ್ಟ್ರೀಯ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗಿದೆ

ಸ್ವಂತ ಸಮಾಧಿಯನ್ನು ಅಗೆಯುವುದು ಭಕ್ತರಿಂದ ಕಲಿಯಬೇಕು ಎಂದು ಹೇಮಂತ್ ಕೃಷ್ಣೇಗೌಡ ಟ್ವೀಟ್ ಮಾಡಿದ್ದಾರೆ.

ನವರಾತ್ರಿಯ ಐದನೇ ದಿ‌‌ನ‌ ಇಂದು. ಕಳೆದ ಬಾರಿ ಮೋದಿ ಪ್ರಧಾನಿಯಾಗಬೇಕೆಂದು ನಾವೆಲ್ಲರೂ ಒಂಭತ್ತು ದಿನಗಳ ಕಾಲ ಉಪವಾಸ ಮಾಡಿದ್ದೆವು. ಈ ಬಾರಿ ವೃಷಭಾವತಿ ಸ್ವಚ್ಛವಾಗಲೆಂದು ನಾವು ಉಪವಾಸವಿದ್ದೇವೆ ಎಂದು ಚಕ್ರವರ್ತಿ ಸೂಲಿಬೆಲೆ ಬರೆಯುವ ಮೂಲಕ ಪರೋಕ್ಷವಾಗಿ ಮೋದಿ ವಿರುದ್ಧದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರೀತಿಯ ನರೇಂದ್ರ ಮೋದಿಜಿ,
ಕರ್ನಾಟಕದ ಜನರ ಬಗ್ಗೆ ದುರಹಂಕಾರಿ ಹೇಳಿಕೆ ನೀಡಿದ ಡಿ.ವಿ.ಸದಾನಂದಗೌಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಅಲ್ಲಿ ಭಾರೀ ಪ್ರವಾಹದ ನಂತರ ಲಕ್ಷಾಂತರ ಜನರು ಬಳಲುತ್ತಿದ್ದಾರೆ. ನಾವು ನೆರವು ಕೇಳಿದ್ದೇವೆ ಅಷ್ಟೇ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ ಎಂದು ಶ್ವೇತಾ ಡಿ.ಜಿಯವರು ಕಿಡಿಕಾರಿದ್ದಾರೆ.

ರೈತರು ಕಾರ್ಮಿಕರ ಕಷ್ಟದ ಕುರಿತು ಅಮಿತ್ ಪಾಂಡೆಯವರು ವಿಡಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರವನ್ನು ಸ್ತುತಿಸಿದರೆ ನೀವು ರಾಷ್ಟ್ರೀಯವಾದಿಗಳಾಗುತ್ತೀರಿ. ಸರ್ಕಾರವನ್ನು ಪ್ರಶ್ನಿಸಿದರೆ (ಅಥವಾ ಪ್ರವಾಹ ಪರಿಹಾರಕ್ಕಾಗಿ ಸಹ ಕೇಳಿ) ನಿಮ್ಮನ್ನು ರಾಷ್ಟ್ರ ವಿರೋಧಿ ಮತ್ತು ದೇಶ್ರೋಹಿ ಎಂದು ಕರೆಯಲಾಗುತ್ತದೆ. ಇದು ಪ್ರಸ್ತುತ ಸನ್ನಿವೇಶದ ಕಹಿ ಸತ್ಯ. ಎಂದು ಶೌರ್ಯ ಡಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...