Homeಚಳವಳಿ#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು...

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು…

- Advertisement -
- Advertisement -

ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರದಿಂದ ಪರಿಹಾರ ಹಣ ನೀಡಿಲ್ಲ. ಪಿಎಂಸಿ ಬ್ಯಾಂಕಿನಿಂದ ಅನ್ಯಾಯ.. ಕಾಶ್ಮೀರದಲ್ಲಿ ಕರ್ಫ್ಯೂ ಮುಂದುವರೆದಿದೆ. ಆದರೆ ಪ್ರಧಾನಿ ಮೋದಿ ಈ ವಿಚಾರಗಳಿಗೆ ಏನು ಮಾಡುತ್ತಿಲ್ಲ ಎಂದು ಆರೋಪಿಸಿ ’ಇದು ಸರಿಯಲ್ಲ ಮೋದಿಜಿ’ ಎಂದು ನೆಟ್ಟಿಗರು ಗುಡುಗಿದ್ದಾರೆ.

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್ ಮಾಡುವ ಮೂಲಕ ಹೊಸ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದು ಭಾರತದಲ್ಲೇ ಟ್ರೆಂಡ್ ಆಗಿದ್ದು ಸಾಕಷ್ಟು ಜನ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮೋದಿ ಜಿ ರಾಷ್ಟ್ರದ ದುಃಖವನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಫ್ಯಾಸಿಸ್ಟ್ ಸರ್ಕಾರವು “ಭಾರತದಲ್ಲಿ ಎಲ್ಲವೂ ಒಳ್ಳೆಯದು” ಎಂದು ಹೇಳಿದಾಗ ಅವರ ಮಾತುಗಳನ್ನು ಮರುಪರಿಶೀಲಿಸಬೇಕಿದೆ. ಮೋದಿಯವರ ಅಜಾಗರೂಕ ನಿರ್ಧಾರಗಳಿಂದಾಗಿ ಇಡೀ ರಾಷ್ಟ್ರವು ಅಘೋಷಿತ ತುರ್ತು ಪರಿಸ್ಥಿತಿಯಿಂದ ಬಳಲುತ್ತಿದೆ. ಇನ್ನೂ ತಡವಾಗುವ ಮುನ್ನ ಎಚ್ಚರಗೊಳ್ಳೋಣ ಎಂದು ಕುಶಾಗ್ರ ಸಕ್ಸೇನಾರವರು ಟ್ವೀಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ 17 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಲೋಕಸಭಾ ಚುನಾವಣೆಗಳಲ್ಲಿ 14 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಆದರೆ ಪ್ರವಾಹ ಉಂಟಾದಾಗ ಜನರನ್ನು ನೋಡಲು ಸಮಯ ಮತ್ತು ಹಣವಿಲ್ಲ.

ಹೇಡಿ 25 ಸಂಸದರು ಮತ್ತು 105 ಶಾಸಕರು ಮೌನವಾಗಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಚಲಾಯಿಸಿದ ಭಕ್ತರಿಗೆ ರಾಷ್ಟ್ರೀಯ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗಿದೆ

ಸ್ವಂತ ಸಮಾಧಿಯನ್ನು ಅಗೆಯುವುದು ಭಕ್ತರಿಂದ ಕಲಿಯಬೇಕು ಎಂದು ಹೇಮಂತ್ ಕೃಷ್ಣೇಗೌಡ ಟ್ವೀಟ್ ಮಾಡಿದ್ದಾರೆ.

ನವರಾತ್ರಿಯ ಐದನೇ ದಿ‌‌ನ‌ ಇಂದು. ಕಳೆದ ಬಾರಿ ಮೋದಿ ಪ್ರಧಾನಿಯಾಗಬೇಕೆಂದು ನಾವೆಲ್ಲರೂ ಒಂಭತ್ತು ದಿನಗಳ ಕಾಲ ಉಪವಾಸ ಮಾಡಿದ್ದೆವು. ಈ ಬಾರಿ ವೃಷಭಾವತಿ ಸ್ವಚ್ಛವಾಗಲೆಂದು ನಾವು ಉಪವಾಸವಿದ್ದೇವೆ ಎಂದು ಚಕ್ರವರ್ತಿ ಸೂಲಿಬೆಲೆ ಬರೆಯುವ ಮೂಲಕ ಪರೋಕ್ಷವಾಗಿ ಮೋದಿ ವಿರುದ್ಧದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರೀತಿಯ ನರೇಂದ್ರ ಮೋದಿಜಿ,
ಕರ್ನಾಟಕದ ಜನರ ಬಗ್ಗೆ ದುರಹಂಕಾರಿ ಹೇಳಿಕೆ ನೀಡಿದ ಡಿ.ವಿ.ಸದಾನಂದಗೌಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಅಲ್ಲಿ ಭಾರೀ ಪ್ರವಾಹದ ನಂತರ ಲಕ್ಷಾಂತರ ಜನರು ಬಳಲುತ್ತಿದ್ದಾರೆ. ನಾವು ನೆರವು ಕೇಳಿದ್ದೇವೆ ಅಷ್ಟೇ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ ಎಂದು ಶ್ವೇತಾ ಡಿ.ಜಿಯವರು ಕಿಡಿಕಾರಿದ್ದಾರೆ.

ರೈತರು ಕಾರ್ಮಿಕರ ಕಷ್ಟದ ಕುರಿತು ಅಮಿತ್ ಪಾಂಡೆಯವರು ವಿಡಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರವನ್ನು ಸ್ತುತಿಸಿದರೆ ನೀವು ರಾಷ್ಟ್ರೀಯವಾದಿಗಳಾಗುತ್ತೀರಿ. ಸರ್ಕಾರವನ್ನು ಪ್ರಶ್ನಿಸಿದರೆ (ಅಥವಾ ಪ್ರವಾಹ ಪರಿಹಾರಕ್ಕಾಗಿ ಸಹ ಕೇಳಿ) ನಿಮ್ಮನ್ನು ರಾಷ್ಟ್ರ ವಿರೋಧಿ ಮತ್ತು ದೇಶ್ರೋಹಿ ಎಂದು ಕರೆಯಲಾಗುತ್ತದೆ. ಇದು ಪ್ರಸ್ತುತ ಸನ್ನಿವೇಶದ ಕಹಿ ಸತ್ಯ. ಎಂದು ಶೌರ್ಯ ಡಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...