Homeಕರೋನಾ ತಲ್ಲಣಆಮ್ಲಜನಕ ಕೊರತೆಯಿಂದ ಯಾವುದೆ ಸಾವಾಗಿಲ್ಲ: ಯುಪಿ ಸರ್ಕಾರ

ಆಮ್ಲಜನಕ ಕೊರತೆಯಿಂದ ಯಾವುದೆ ಸಾವಾಗಿಲ್ಲ: ಯುಪಿ ಸರ್ಕಾರ

- Advertisement -
- Advertisement -

ಕೊರೊನಾ ಎರಡನೇ ಅಲೆಯ ಸಮಯದಲ್ಲಿ ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳಾಗಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದೆ. ಆದರೆ ಸರ್ಕಾರದ ಈ ಪ್ರತಿಪಾದನೆಯನ್ನು ಪ್ರತಿಪಕ್ಷಗಳು ತಿರಸ್ಕರಿಸಿವೆ.

ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ 22,915 ರೋಗಿಗಳಲ್ಲಿ ಯಾರೊಬ್ಬರಲ್ಲೂ ‘ಆಮ್ಲಜನಕದ ಕೊರತೆಯಿಂದಾದ ಸಾವು’ ಎಂದು ಮರಣ ಪ್ರಮಾಣಪತ್ರದಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ದೀಪಕ್ ಸಿಂಗ್ ಅವರಿಗೆ ಉತ್ತರಿಸಿದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್, ‘ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ’ ಎಂದು ಹೇಳಿದ್ದಾರೆ.

ಪೂರಕ ಪ್ರಶ್ನೆಯನ್ನು ಎತ್ತಿರುವ ದೀಪಕ್, ತನ್ನದೇ ಮಂತ್ರಿಗಳು ಆರೋಪಿಸಿದ್ದ ಇದೇ ರೀತಿಯ ಪ್ರಕರಣಗಳ ಬಗ್ಗೆ ಸರ್ಕಾರದ ಬಳಿ ವಿವರಗಳಿವೆಯೇ ಎಂದು ಕೇಳಿದ್ದರು.

“ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದ ಸಾವುಗಳು ಸಂಭವಿಸುತ್ತಿವೆ ಎಂದು ಹಲವು ಸಚಿವರು ಪತ್ರ ಬರೆದಿದ್ದಾರೆ. ಇದಲ್ಲದೇ ಹಲವು ಸಂಸದರು ಕೂಡ ಇಂತಹ ದೂರುಗಳನ್ನು ನೀಡಿದ್ದರು. ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ ಹಲವು ಘಟನೆಗಳು ಬೆಳಕಿಗೆ ಬಂದಿದ್ದವು. ಇಡೀ ರಾಜ್ಯದಲ್ಲಿ ಈ ಸಾವುಗಳ ಬಗ್ಗೆ ಸರ್ಕಾರದ ಬಳಿ ಏನಾದರೂ ಮಾಹಿತಿ ಇದೆಯೇ. ಗಂಗಾನದಿಯಲ್ಲಿ ಮೃತದೇಹಗಳು ಹರಿಯುತ್ತಿದ್ದು, ಆಮ್ಲಜನಕದ ಕೊರತೆಯಿಂದ ಜನರು ನರಳುತ್ತಿರುವುದನ್ನು ಸರ್ಕಾರ ನೋಡಿಲ್ಲವೇ?” ಎಂದು ಅವರು ಕೇಳಿದ್ದರು.

ಇದನ್ನೂ ಓದಿ:ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ತನಿಖೆಗೆ ಸಮಿತಿ ರಚಿಸುವಂತೆ ಮತ್ತೊಮ್ಮೆ ಆಗ್ರಹಿಸಿದ ದೆಹಲಿ ಸರ್ಕಾರ

ಇದಕ್ಕೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಜೈ ಪ್ರತಾಪ್, “ಆಸ್ಪತ್ರೆಗೆ ದಾಖಲಾದ ರೋಗಿಯು ಮೃತಪಟ್ಟರೆ ವೈದ್ಯರು ಮರಣ ಪ್ರಮಾಣ ಪತ್ರ ನೀಡುತ್ತಾರೆ. ರಾಜ್ಯದಲ್ಲಿ ಕೊರೊನಾ ಸಂತ್ರಸ್ತರಿಗಾಗಿ ವೈದ್ಯರು ನೀಡಿರುವ 22,915 ಮರಣ ಪ್ರಮಾಣ ಪತ್ರಗಳಲ್ಲಿ ಎಲ್ಲಿಯೂ ‘ಆಮ್ಲಜನಕದ ಕೊರತೆಯಿಂದ ಆದ ಸಾವು’ ಎಂಬ ಉಲ್ಲೇಖವಿಲ್ಲ” ಎಂದು ಅವರು ಹೇಳಿದ್ದಾರೆ.

“ಸಾಂಕ್ರಾಮಿಕ ಸಮಯದಲ್ಲಿ ಹಲವಾರು ಸಾವುಗಳು ಹಲವಾರು ಇತರ ಕಾಯಿಲೆಗಳಿಂದ ಉಂಟಾಗಿವೆ. ಆಮ್ಲಜನಕ ಕೊರತೆಯಾದಾಗ ಸರ್ಕಾರವು ಇತರ ರಾಜ್ಯಗಳಿಂದ ಆಮ್ಲಜನಕವನ್ನು ವ್ಯವಸ್ಥೆ ಮಾಡಿದೆ” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...