Homeಕರೋನಾ ತಲ್ಲಣಆಮ್ಲಜನಕ ಕೊರತೆಯಿಂದ ಯಾವುದೆ ಸಾವಾಗಿಲ್ಲ: ಯುಪಿ ಸರ್ಕಾರ

ಆಮ್ಲಜನಕ ಕೊರತೆಯಿಂದ ಯಾವುದೆ ಸಾವಾಗಿಲ್ಲ: ಯುಪಿ ಸರ್ಕಾರ

- Advertisement -
- Advertisement -

ಕೊರೊನಾ ಎರಡನೇ ಅಲೆಯ ಸಮಯದಲ್ಲಿ ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳಾಗಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದೆ. ಆದರೆ ಸರ್ಕಾರದ ಈ ಪ್ರತಿಪಾದನೆಯನ್ನು ಪ್ರತಿಪಕ್ಷಗಳು ತಿರಸ್ಕರಿಸಿವೆ.

ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ 22,915 ರೋಗಿಗಳಲ್ಲಿ ಯಾರೊಬ್ಬರಲ್ಲೂ ‘ಆಮ್ಲಜನಕದ ಕೊರತೆಯಿಂದಾದ ಸಾವು’ ಎಂದು ಮರಣ ಪ್ರಮಾಣಪತ್ರದಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ:‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ದೀಪಕ್ ಸಿಂಗ್ ಅವರಿಗೆ ಉತ್ತರಿಸಿದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್, ‘ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ರಾಜ್ಯದಲ್ಲಿ ಯಾವುದೇ ಸಾವು ಸಂಭವಿಸಿಲ್ಲ’ ಎಂದು ಹೇಳಿದ್ದಾರೆ.

ಪೂರಕ ಪ್ರಶ್ನೆಯನ್ನು ಎತ್ತಿರುವ ದೀಪಕ್, ತನ್ನದೇ ಮಂತ್ರಿಗಳು ಆರೋಪಿಸಿದ್ದ ಇದೇ ರೀತಿಯ ಪ್ರಕರಣಗಳ ಬಗ್ಗೆ ಸರ್ಕಾರದ ಬಳಿ ವಿವರಗಳಿವೆಯೇ ಎಂದು ಕೇಳಿದ್ದರು.

“ರಾಜ್ಯದಲ್ಲಿ ಆಮ್ಲಜನಕದ ಕೊರತೆಯಿಂದ ಸಾವುಗಳು ಸಂಭವಿಸುತ್ತಿವೆ ಎಂದು ಹಲವು ಸಚಿವರು ಪತ್ರ ಬರೆದಿದ್ದಾರೆ. ಇದಲ್ಲದೇ ಹಲವು ಸಂಸದರು ಕೂಡ ಇಂತಹ ದೂರುಗಳನ್ನು ನೀಡಿದ್ದರು. ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ ಹಲವು ಘಟನೆಗಳು ಬೆಳಕಿಗೆ ಬಂದಿದ್ದವು. ಇಡೀ ರಾಜ್ಯದಲ್ಲಿ ಈ ಸಾವುಗಳ ಬಗ್ಗೆ ಸರ್ಕಾರದ ಬಳಿ ಏನಾದರೂ ಮಾಹಿತಿ ಇದೆಯೇ. ಗಂಗಾನದಿಯಲ್ಲಿ ಮೃತದೇಹಗಳು ಹರಿಯುತ್ತಿದ್ದು, ಆಮ್ಲಜನಕದ ಕೊರತೆಯಿಂದ ಜನರು ನರಳುತ್ತಿರುವುದನ್ನು ಸರ್ಕಾರ ನೋಡಿಲ್ಲವೇ?” ಎಂದು ಅವರು ಕೇಳಿದ್ದರು.

ಇದನ್ನೂ ಓದಿ:ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ತನಿಖೆಗೆ ಸಮಿತಿ ರಚಿಸುವಂತೆ ಮತ್ತೊಮ್ಮೆ ಆಗ್ರಹಿಸಿದ ದೆಹಲಿ ಸರ್ಕಾರ

ಇದಕ್ಕೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಜೈ ಪ್ರತಾಪ್, “ಆಸ್ಪತ್ರೆಗೆ ದಾಖಲಾದ ರೋಗಿಯು ಮೃತಪಟ್ಟರೆ ವೈದ್ಯರು ಮರಣ ಪ್ರಮಾಣ ಪತ್ರ ನೀಡುತ್ತಾರೆ. ರಾಜ್ಯದಲ್ಲಿ ಕೊರೊನಾ ಸಂತ್ರಸ್ತರಿಗಾಗಿ ವೈದ್ಯರು ನೀಡಿರುವ 22,915 ಮರಣ ಪ್ರಮಾಣ ಪತ್ರಗಳಲ್ಲಿ ಎಲ್ಲಿಯೂ ‘ಆಮ್ಲಜನಕದ ಕೊರತೆಯಿಂದ ಆದ ಸಾವು’ ಎಂಬ ಉಲ್ಲೇಖವಿಲ್ಲ” ಎಂದು ಅವರು ಹೇಳಿದ್ದಾರೆ.

“ಸಾಂಕ್ರಾಮಿಕ ಸಮಯದಲ್ಲಿ ಹಲವಾರು ಸಾವುಗಳು ಹಲವಾರು ಇತರ ಕಾಯಿಲೆಗಳಿಂದ ಉಂಟಾಗಿವೆ. ಆಮ್ಲಜನಕ ಕೊರತೆಯಾದಾಗ ಸರ್ಕಾರವು ಇತರ ರಾಜ್ಯಗಳಿಂದ ಆಮ್ಲಜನಕವನ್ನು ವ್ಯವಸ್ಥೆ ಮಾಡಿದೆ” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...