Homeಕರ್ನಾಟಕಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಕೆ.ಎಸ್.ಆರ್.ಟಿ.ಸಿ. ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ, ಬಿಬಿಎಂಪಿ, ಕಾರ್ಪೊರೇಟ್ ವಲಯ ಎಲ್ಲರೂ ಸೇರಿ ಈ ಮಕ್ಕಳ ಆಸ್ಪತ್ರೆಯನ್ನು ಪುನರ್ ನಿರ್ಮಿಸಿದ್ದಾರೆ. ಕೋವಿಡ್‌ನಿಂದಾಗಿ ಎಲ್ಲರಿಗೂ ಆರ್ಥಿಕ ತೊಂದರೆಗಳಾಗಿವೆ. ಜನ ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸಿಸುವ ಕೆಲಸವನ್ನು ಮಾಡಿದೆ. ಎಲ್ಲರೂ ಒಟ್ಟಾಗಿ ಇದನ್ನು ಎದುರಿಸಬೇಕೆನ್ನುವ ಮನಸ್ಥಿತಿಗೆ ಬಂದದ್ದರಿಂದ ಇಂಥ ಕೆಲಸಗಳು ಆಗುತ್ತವೆ ಎಂದರು.

ಮಾನವೀಯತೆ ಬಹಳ ಮುಖ್ಯ. ಇನ್ನೊಬ್ಬರಿಗಾಗಿ ಮನ ಮಿಡಿಯದಿದ್ದರೆ, ಮತ್ತೊಬ್ಬರಿಗಾಗಿ ನಾವು ಕೆಲಸ ಮಾಡದಿದ್ದರೆ, ಈ ಜೀವನ ಸಾರ್ಥಕವಾಗುವುದಿಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದ ಸಾಕಷ್ಟು ಪಾಠವನ್ನು ಕಲಿತಿದ್ದೇವೆ. ಕೋವಿಡ್ ಮೂರನೇ ಅಲೆ ಬರಬಾರದು. ಬಂದರೂ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆಕ್ಸಿಜನ್ ಮಹತ್ವವನ್ನು ಕೋವಿಡ್ ಸಂದರ್ಭದಲ್ಲಿ ಅರಿತೆವು. ದಿನನಿತ್ಯದ ಆಹಾರದಲ್ಲಿನ ಮಹತ್ವವನ್ನು ಅರಿತು, ಪೌಷ್ಟಿಕ ಆಹಾರವನ್ನು ಪಡೆದುಕೊಂಡರೆ, ನಮ್ಮ ದೇಹದ ವ್ಯವಸ್ಥೆ ಸುಧಾರಿಸುತ್ತದೆ. ಏನಾದರೂ ಕೊರತೆಯಾದಾಗ ಮಾತ್ರ ನಮಗೆ ಅದರ ಮಹತ್ವ ತಿಳಿಯುತ್ತದೆ. ಜಯನಗರ ಟಿ. ಬ್ಲಾಕ್ ಆಸ್ಪತ್ರೆ ಕೊರತೆಯಾದ ಸಂದರ್ಭದಲ್ಲಿ ಹುಟ್ಟಿಕೊಂಡಿದ್ದು, ಎಲ್ಲರೂ ಈ ಆಸ್ಪತ್ರೆಗೆ ಸಹಾಯ ಮಾಡಿದ್ದಾರೆ. ಇದನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಇಲ್ಲಿನ ಸಿಬ್ಬಂದಿಯದ್ದು ಎಂದು ತಿಳಿಸಿದರು.

ಇದನ್ನೂ ಓದಿ: ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

ಕೊಡುಗೆ ನೀಡಿದ ಎಲ್ಲ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು. ಆಗ ಮಾತ್ರ ಜೀವನಕ್ಕೆ ನಿಜವಾದ ಅರ್ಥ ಬರುತ್ತದೆ. ಅಗತ್ಯಕ್ಕಿಂತ ಹೆಚ್ಚಿನದನ್ನು ಪಡೆದುಕೊಳ್ಳುವ ಪ್ರವೃತ್ತಿಗಿಂತ ಕೊಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದರು.

ಆರೋಗ್ಯ ವ್ಯವಸ್ಥೆ ಒಂದೇ ಪ್ರಾಧಿಕಾರದಡಿಗೆ ಬರಬೇಕು ಎನ್ನುವ ಚಿಂತನೆ ಇದೆ. ಬೆಂಗಳೂರಿಗೆ ಯೋಜಿತ ಬೆಳವಣಿಗೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಜನಸಾಮಾನ್ಯರಿಗೆ ಸೇವೆಗಳು ಸುಲಭವಾಗಿ ದೊರೆಯಬೇಕು. ಬೆಂಗಳೂರಿನಲ್ಲಿ ಮೆಗಾ ಯೋಜನೆಗಳು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಿ ಇನ್ನಷ್ಟು ವಾಸಯೋಗ್ಯವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಂಸದ ತೇಜಸ್ವಿ ಸೂರ್ಯ, ಶಾಸಕಿ ಸೌಮ್ಯ ರೆಡ್ಡಿ, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...