Homeಮುಖಪುಟ"ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ": ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಯೆಮೆನ್‌ನಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ತಡೆಯಲು “ಭಾರತ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ” ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ. ಯೆಮೆನ್ ರಾಜತಾಂತ್ರಿಕವಾಗಿ ಗುರುತಿಸಲ್ಪಟ್ಟಿಲ್ಲ. ಬ್ಲಡ್ ಮನಿ ವಿಚಾರ ಖಾಸಗಿ ಮಾತುಕತೆಯಾಗಿದೆ. ಸರ್ಕಾರ ಖಾಸಗಿ ಮಾರ್ಗಗಳ ಮೂಲಕ ನಿಮಿಷಾ ಅವರನ್ನು ರಕ್ಷಿಸಲು ತನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತಿದೆ” ಎಂದು ಕೇಂದ್ರ ಸರ್ಕಾರದ ಪರ ಅಡ್ವೋಕೇಟ್ ಜನರಲ್ ವೆಂಕಟರಮಣಿ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಜುಲೈ 16ರಂದು ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಜಾರಿಯಾಗಲಿದ್ದು, ಅದನ್ನು ತಡೆಯಲು ಸರ್ಕಾರ ಮಧ್ಯಪ್ರವೇಶಿಸುವಂತೆ ನಿರ್ದೇಶಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆ ವೇಳೆ ಕೇಂದ್ರ ಸರ್ಕಾರ ತನ್ನ ಪ್ರತಿಕ್ರಿಯೆ ನೀಡಿದೆ.

ಈ ವಿಚಾರದಲ್ಲಿ ಭಾರತ ಸರ್ಕಾರ ಯಾವ ಹಂತದವರೆಗೆ ಹೋಗಬಹುದು ಎಂಬುದಕ್ಕೆ ಒಂದು ಮಿತಿಯಿದೆ. ನಾವು ಆ ಮಿತಿಯನ್ನು ತಲುಪಿದ್ದೇವೆ. ಯೆಮೆನ್ ಪ್ರಪಂಚದ ಇತರ ದೇಶಗಳಂತೆ ಅಲ್ಲ. ನಾವು ಸಾರ್ವಜನಿಕವಾಗಿ ಮಾತನಾಡುವ ಮೂಲಕ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಲು ಬಯಸಿರಲಿಲ್ಲ. ಖಾಸಗಿಯಾಗಿ ನಿಮಿಷಾ ಅವರ ರಕ್ಷಣೆಗೆ ಎಲ್ಲಾ ಪ್ರಯತ್ನಿಗಳನ್ನು ಮಾಡಿದ್ದೇವೆ ಎಂದು ಎಜಿ ಹೇಳಿದ್ದಾರೆ.

ಸರ್ಕಾರ ನಿಮಿಷಾ ಅವರ ಪ್ರಕರಣದಲ್ಲಿ ಮೃತ ಯೆಮನ್‌ ಪ್ರಜೆಯ ಕುಟುಂಬದೊಂದಿಗೆ ಮಾತುಕತೆ ನಡೆಸಬೇಕು. ನಿಮಿಷಾ ಅವರ ಕುಟುಂಬ ಮೃತನ ಕುಟುಂಬಕ್ಕೆ 8.6 ಕೋಟಿ ರೂಪಾಯಿ ಬ್ಲಡ್ ಮನಿ ನೀಡಲು ಮುಂದಾಗಿದೆ. ಇದು ಯೆಮನ್‌ನ ಷರಿಯಾ ಕಾನೂನಿನಡಿಯಲ್ಲಿ ಮಾನ್ಯವಾಗಿರುವ ನಿಬಂಧನೆಯಾಗಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಜಿ, “ಬ್ಲಡ್ ವಿಚಾರವಾಗಿ ಖಾಸಗಿ ಮಾತುಕತೆಯಾಗಿದೆ. ಸರ್ಕಾರ ಅಲ್ಲಿನ ಕೆಲ ಶೇಖ್‌ಗಳು, ಪ್ರಭಾವಿ ವ್ಯಕ್ತಿಗಳೊಂದಿಗೆ ಖಾಸಗಿಯಾಗಿ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...