Homeಕರ್ನಾಟಕಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ.

- Advertisement -
- Advertisement -

2022-23 ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಏನನ್ನು ಘೋಷಿಸಲಾಗಿತ್ತೊ ಅವುಗಳನ್ನು ಪೂರ್ಣಗೊಳಿಸುತ್ತೇವೆ ಎಂದಷ್ಟೆ 2023-24ರ ಈ ವರ್ಷದ ಬಜೆಟ್‌ನಲ್ಲಿ ಹೇಳಲಾಗಿದೆ ಹೊರತು, ಹೊಸತೇನೂ ಇಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ ನಿರಂಜನರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಘೋಷಿಸಿಲ್ಲ. ಆಡಳಿತ ಸುಧಾರಣಾ ಆಯೋಗ-2 ಅಪೌಷ್ಟಿಕತೆ ದೊಡ್ಡ ಮಟ್ಟದಲ್ಲಿದೆ ಎಂದು ವರದಿ ನೀಡಿತ್ತು. ಹಾಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ಕೊಡಬೇಕು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ಕೊಡಬೇಕು ಎಂಬದು ಶಿಫಾರಸ್ಸು ಮಾಡಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1,41,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿಲ್ಲ. ಹಿಂದೆ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರೂ ಆ ಪ್ರಕ್ರಿಯೆಯೇ ಇನ್ನು ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ರಹಿತ ಕನ್ನಡ ಶಾಲೆಗಳು 1994ರಿಂದಲೂ ಅನುದಾನ ಕೊಡಿ ಎಂದು ಕೇಳುತ್ತಾ ಬಂದಿದ್ದಾರೆ. ಅವು ಕನ್ನಡ ಶಾಲೆಗಳಾಗಿದ್ದು ಅನುದಾನ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ ಈ ಬಜೆಟ್‌ನಲ್ಲಿಯೂ ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಇನ್ನು ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ ಎಂದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಆರ್‌ಟಿಇ ಕಾಯ್ದೆಯ ಅನುಸರಣೆ ಕೇವಲ 23% ಇದೆ. ಅದು ಕನಿಷ್ಟ 50%ಗೆ ಏರಿಸಬೇಕೆಂಬುದು ನಮ್ಮ ಹಕ್ಕೊತ್ತಾಯವಾಗಿತ್ತು. ಆದರೆ ಅದನ್ನೂ ಪ್ರಸ್ತಾಪಿಸಿಲ್ಲ. ಇನ್ನು ವರ್ಷವೀಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹೋದಬಂದಲೆಲ್ಲಾ ಮಾತನಾಡುತ್ತಿದ್ದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಪದವನ್ನೇ ಬಳಸಿಲ್ಲ. 5ನೇ ತರಗತಿಯವರೆಗೂ ಕನ್ನಡ ಮಾಧ್ಯಮ ತರುತ್ತೇವೆ ಎಂಬುದಾಗಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂಬುದೆಲ್ಲ ಬರೀ ಸುಳ್ಳು ಎಂಬುದನ್ನು ಈ ಬಜೆಟ್‌ ನಿರೂಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣಕ್ಕೆ ರೂ.31,980 ಕೋಟಿಯನ್ನು ಮೀಸಲಿಡಲಾಗಿತ್ತು. 2022-23 ನೇ ಸಾಲಿನ ಒಟ್ಟು ಆಯವ್ಯಯದಲ್ಲಿ ಶಿಕ್ಷಣದ ಪಾಲು ಶೇಕಡ 12. ಈ ಬಾರಿ ಶಿಕ್ಷಣಕ್ಕೆ 37,960 ಕೋಟಿಯನ್ನು ಮೀಸಲಿಡಲಾಗಿದೆ. ಒಟ್ಟು ಆಯವ್ಯದಲ್ಲಿ ಶಿಕ್ಷಣದ ಪಾಲು ಶೇಕಡ 13.1. ಯಥಾರ್ಥದಲ್ಲಿ, ಶಿಕ್ಷಣಕ್ಕೆ ಕಳೆದ ಬಾರಿಗಿಂತ 5980 ಕೋಟಿ ಹೆಚ್ಚಿನ ಅನುದಾನ ಸಿಕ್ಕಿದ್ದು, ಒಟ್ಟು ಆಯವ್ಯಯದಲ್ಲಿ ಶೇಕಡಾ 13.1 ದೊರೆತಿದ್ದು,  ಶೇಕಡಾವಾರು ಲೆಕ್ಕದಲ್ಲಿ 1.1 ರಷ್ಟು ಹೆಚ್ಚಿದೆ.

ಇದು ತೋರಿಕೆಗೆ ಜಾಸ್ತಿಯೆನಿಸಿದರೂ, ಬಹುತೇಕ ಪಾಲು ಈಗಿನ ಶಿಕ್ಷಕರ ಸಂಬಳ, ಹೆಚ್ಚಿಸಿರುವ ಗೌರವ ಧನ ಹಾಗು ಹಿಂದಿನ ಸಾಲಿನಲ್ಲಿ ಮುಂದುವರಿದಿರುವ ಕಾಮಗಾರಿಗಳಿಗೆ ವ್ಯಯವಾಗುತ್ತದೆ. ಆದ್ದರಿಂದ, ಜ್ವಲಂತ ಸಮಸ್ಯೆಗಳಾಗಿರುವ ಶಿಕ್ಷಣ ಹಕ್ಕು ಕಾಯಿದೆಯ ಈಗಿನ ಶೇಕಡ 23.6 ಅನುಸರಣೆಯನ್ನು ಕನಿಷ್ಠ 50 ಕ್ಕೆ ಏರಿಸಲಾಗಲಿ, ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ 1,41,358 ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಭರವಷೆಯಾಗಲಿ, ತೀವ್ರ ಅಪೌಷ್ಠಿಕತೆಯನ್ನು ತೊಡೆದು ಹಾಕಲು ಆಡಳಿತ ಸುಧಾರಣಾ ಆಯೋಗ -೨ರ ವರದಿಯು ಪ್ರಸ್ತಾಪಿಸಿದಂತೆ ಮಕ್ಕಳಿಗೆ ವಾರದಲ್ಲಿ 5 ದಿನವೂ ಮೊಟ್ಟೆ ನೀಡುವ ಭರವಷೆಯಾಗಲಿ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸುವ ಅಥವಾ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವ ಅಂಶಗಳೂ ಆಯವ್ಯದಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ ಹಳೆಯ ಬಜೆಟ್‌ನ ಎರಡನೇ ಆವೃತ್ತಿ ಇದಾಗಿದೆ. ಇದು ಹೊಸ ಬಜೆಟ್ ಅಲ್ಲವೇ ಅಲ್ಲ. 2022-23 (ಎರಡನೇ ಆವೃತ್ತಿ) ಆಗಿದೆ ಎಂದು ವಿ.ಪಿ ನಿರಂಜನರಾಧ್ಯರು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...