Homeಕರ್ನಾಟಕಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ.

- Advertisement -
- Advertisement -

2022-23 ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಏನನ್ನು ಘೋಷಿಸಲಾಗಿತ್ತೊ ಅವುಗಳನ್ನು ಪೂರ್ಣಗೊಳಿಸುತ್ತೇವೆ ಎಂದಷ್ಟೆ 2023-24ರ ಈ ವರ್ಷದ ಬಜೆಟ್‌ನಲ್ಲಿ ಹೇಳಲಾಗಿದೆ ಹೊರತು, ಹೊಸತೇನೂ ಇಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ ನಿರಂಜನರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಘೋಷಿಸಿಲ್ಲ. ಆಡಳಿತ ಸುಧಾರಣಾ ಆಯೋಗ-2 ಅಪೌಷ್ಟಿಕತೆ ದೊಡ್ಡ ಮಟ್ಟದಲ್ಲಿದೆ ಎಂದು ವರದಿ ನೀಡಿತ್ತು. ಹಾಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ಕೊಡಬೇಕು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ಕೊಡಬೇಕು ಎಂಬದು ಶಿಫಾರಸ್ಸು ಮಾಡಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1,41,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿಲ್ಲ. ಹಿಂದೆ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರೂ ಆ ಪ್ರಕ್ರಿಯೆಯೇ ಇನ್ನು ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ರಹಿತ ಕನ್ನಡ ಶಾಲೆಗಳು 1994ರಿಂದಲೂ ಅನುದಾನ ಕೊಡಿ ಎಂದು ಕೇಳುತ್ತಾ ಬಂದಿದ್ದಾರೆ. ಅವು ಕನ್ನಡ ಶಾಲೆಗಳಾಗಿದ್ದು ಅನುದಾನ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ ಈ ಬಜೆಟ್‌ನಲ್ಲಿಯೂ ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಇನ್ನು ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ ಎಂದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಆರ್‌ಟಿಇ ಕಾಯ್ದೆಯ ಅನುಸರಣೆ ಕೇವಲ 23% ಇದೆ. ಅದು ಕನಿಷ್ಟ 50%ಗೆ ಏರಿಸಬೇಕೆಂಬುದು ನಮ್ಮ ಹಕ್ಕೊತ್ತಾಯವಾಗಿತ್ತು. ಆದರೆ ಅದನ್ನೂ ಪ್ರಸ್ತಾಪಿಸಿಲ್ಲ. ಇನ್ನು ವರ್ಷವೀಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹೋದಬಂದಲೆಲ್ಲಾ ಮಾತನಾಡುತ್ತಿದ್ದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಪದವನ್ನೇ ಬಳಸಿಲ್ಲ. 5ನೇ ತರಗತಿಯವರೆಗೂ ಕನ್ನಡ ಮಾಧ್ಯಮ ತರುತ್ತೇವೆ ಎಂಬುದಾಗಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂಬುದೆಲ್ಲ ಬರೀ ಸುಳ್ಳು ಎಂಬುದನ್ನು ಈ ಬಜೆಟ್‌ ನಿರೂಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣಕ್ಕೆ ರೂ.31,980 ಕೋಟಿಯನ್ನು ಮೀಸಲಿಡಲಾಗಿತ್ತು. 2022-23 ನೇ ಸಾಲಿನ ಒಟ್ಟು ಆಯವ್ಯಯದಲ್ಲಿ ಶಿಕ್ಷಣದ ಪಾಲು ಶೇಕಡ 12. ಈ ಬಾರಿ ಶಿಕ್ಷಣಕ್ಕೆ 37,960 ಕೋಟಿಯನ್ನು ಮೀಸಲಿಡಲಾಗಿದೆ. ಒಟ್ಟು ಆಯವ್ಯದಲ್ಲಿ ಶಿಕ್ಷಣದ ಪಾಲು ಶೇಕಡ 13.1. ಯಥಾರ್ಥದಲ್ಲಿ, ಶಿಕ್ಷಣಕ್ಕೆ ಕಳೆದ ಬಾರಿಗಿಂತ 5980 ಕೋಟಿ ಹೆಚ್ಚಿನ ಅನುದಾನ ಸಿಕ್ಕಿದ್ದು, ಒಟ್ಟು ಆಯವ್ಯಯದಲ್ಲಿ ಶೇಕಡಾ 13.1 ದೊರೆತಿದ್ದು,  ಶೇಕಡಾವಾರು ಲೆಕ್ಕದಲ್ಲಿ 1.1 ರಷ್ಟು ಹೆಚ್ಚಿದೆ.

ಇದು ತೋರಿಕೆಗೆ ಜಾಸ್ತಿಯೆನಿಸಿದರೂ, ಬಹುತೇಕ ಪಾಲು ಈಗಿನ ಶಿಕ್ಷಕರ ಸಂಬಳ, ಹೆಚ್ಚಿಸಿರುವ ಗೌರವ ಧನ ಹಾಗು ಹಿಂದಿನ ಸಾಲಿನಲ್ಲಿ ಮುಂದುವರಿದಿರುವ ಕಾಮಗಾರಿಗಳಿಗೆ ವ್ಯಯವಾಗುತ್ತದೆ. ಆದ್ದರಿಂದ, ಜ್ವಲಂತ ಸಮಸ್ಯೆಗಳಾಗಿರುವ ಶಿಕ್ಷಣ ಹಕ್ಕು ಕಾಯಿದೆಯ ಈಗಿನ ಶೇಕಡ 23.6 ಅನುಸರಣೆಯನ್ನು ಕನಿಷ್ಠ 50 ಕ್ಕೆ ಏರಿಸಲಾಗಲಿ, ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ 1,41,358 ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಭರವಷೆಯಾಗಲಿ, ತೀವ್ರ ಅಪೌಷ್ಠಿಕತೆಯನ್ನು ತೊಡೆದು ಹಾಕಲು ಆಡಳಿತ ಸುಧಾರಣಾ ಆಯೋಗ -೨ರ ವರದಿಯು ಪ್ರಸ್ತಾಪಿಸಿದಂತೆ ಮಕ್ಕಳಿಗೆ ವಾರದಲ್ಲಿ 5 ದಿನವೂ ಮೊಟ್ಟೆ ನೀಡುವ ಭರವಷೆಯಾಗಲಿ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸುವ ಅಥವಾ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವ ಅಂಶಗಳೂ ಆಯವ್ಯದಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ ಹಳೆಯ ಬಜೆಟ್‌ನ ಎರಡನೇ ಆವೃತ್ತಿ ಇದಾಗಿದೆ. ಇದು ಹೊಸ ಬಜೆಟ್ ಅಲ್ಲವೇ ಅಲ್ಲ. 2022-23 (ಎರಡನೇ ಆವೃತ್ತಿ) ಆಗಿದೆ ಎಂದು ವಿ.ಪಿ ನಿರಂಜನರಾಧ್ಯರು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...