Homeಕರ್ನಾಟಕಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ.

- Advertisement -
- Advertisement -

2022-23 ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಏನನ್ನು ಘೋಷಿಸಲಾಗಿತ್ತೊ ಅವುಗಳನ್ನು ಪೂರ್ಣಗೊಳಿಸುತ್ತೇವೆ ಎಂದಷ್ಟೆ 2023-24ರ ಈ ವರ್ಷದ ಬಜೆಟ್‌ನಲ್ಲಿ ಹೇಳಲಾಗಿದೆ ಹೊರತು, ಹೊಸತೇನೂ ಇಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ ನಿರಂಜನರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಘೋಷಿಸಿಲ್ಲ. ಆಡಳಿತ ಸುಧಾರಣಾ ಆಯೋಗ-2 ಅಪೌಷ್ಟಿಕತೆ ದೊಡ್ಡ ಮಟ್ಟದಲ್ಲಿದೆ ಎಂದು ವರದಿ ನೀಡಿತ್ತು. ಹಾಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ಕೊಡಬೇಕು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ಕೊಡಬೇಕು ಎಂಬದು ಶಿಫಾರಸ್ಸು ಮಾಡಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1,41,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿಲ್ಲ. ಹಿಂದೆ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರೂ ಆ ಪ್ರಕ್ರಿಯೆಯೇ ಇನ್ನು ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ರಹಿತ ಕನ್ನಡ ಶಾಲೆಗಳು 1994ರಿಂದಲೂ ಅನುದಾನ ಕೊಡಿ ಎಂದು ಕೇಳುತ್ತಾ ಬಂದಿದ್ದಾರೆ. ಅವು ಕನ್ನಡ ಶಾಲೆಗಳಾಗಿದ್ದು ಅನುದಾನ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ ಈ ಬಜೆಟ್‌ನಲ್ಲಿಯೂ ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಇನ್ನು ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ ಎಂದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಆರ್‌ಟಿಇ ಕಾಯ್ದೆಯ ಅನುಸರಣೆ ಕೇವಲ 23% ಇದೆ. ಅದು ಕನಿಷ್ಟ 50%ಗೆ ಏರಿಸಬೇಕೆಂಬುದು ನಮ್ಮ ಹಕ್ಕೊತ್ತಾಯವಾಗಿತ್ತು. ಆದರೆ ಅದನ್ನೂ ಪ್ರಸ್ತಾಪಿಸಿಲ್ಲ. ಇನ್ನು ವರ್ಷವೀಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹೋದಬಂದಲೆಲ್ಲಾ ಮಾತನಾಡುತ್ತಿದ್ದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಪದವನ್ನೇ ಬಳಸಿಲ್ಲ. 5ನೇ ತರಗತಿಯವರೆಗೂ ಕನ್ನಡ ಮಾಧ್ಯಮ ತರುತ್ತೇವೆ ಎಂಬುದಾಗಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂಬುದೆಲ್ಲ ಬರೀ ಸುಳ್ಳು ಎಂಬುದನ್ನು ಈ ಬಜೆಟ್‌ ನಿರೂಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣಕ್ಕೆ ರೂ.31,980 ಕೋಟಿಯನ್ನು ಮೀಸಲಿಡಲಾಗಿತ್ತು. 2022-23 ನೇ ಸಾಲಿನ ಒಟ್ಟು ಆಯವ್ಯಯದಲ್ಲಿ ಶಿಕ್ಷಣದ ಪಾಲು ಶೇಕಡ 12. ಈ ಬಾರಿ ಶಿಕ್ಷಣಕ್ಕೆ 37,960 ಕೋಟಿಯನ್ನು ಮೀಸಲಿಡಲಾಗಿದೆ. ಒಟ್ಟು ಆಯವ್ಯದಲ್ಲಿ ಶಿಕ್ಷಣದ ಪಾಲು ಶೇಕಡ 13.1. ಯಥಾರ್ಥದಲ್ಲಿ, ಶಿಕ್ಷಣಕ್ಕೆ ಕಳೆದ ಬಾರಿಗಿಂತ 5980 ಕೋಟಿ ಹೆಚ್ಚಿನ ಅನುದಾನ ಸಿಕ್ಕಿದ್ದು, ಒಟ್ಟು ಆಯವ್ಯಯದಲ್ಲಿ ಶೇಕಡಾ 13.1 ದೊರೆತಿದ್ದು,  ಶೇಕಡಾವಾರು ಲೆಕ್ಕದಲ್ಲಿ 1.1 ರಷ್ಟು ಹೆಚ್ಚಿದೆ.

ಇದು ತೋರಿಕೆಗೆ ಜಾಸ್ತಿಯೆನಿಸಿದರೂ, ಬಹುತೇಕ ಪಾಲು ಈಗಿನ ಶಿಕ್ಷಕರ ಸಂಬಳ, ಹೆಚ್ಚಿಸಿರುವ ಗೌರವ ಧನ ಹಾಗು ಹಿಂದಿನ ಸಾಲಿನಲ್ಲಿ ಮುಂದುವರಿದಿರುವ ಕಾಮಗಾರಿಗಳಿಗೆ ವ್ಯಯವಾಗುತ್ತದೆ. ಆದ್ದರಿಂದ, ಜ್ವಲಂತ ಸಮಸ್ಯೆಗಳಾಗಿರುವ ಶಿಕ್ಷಣ ಹಕ್ಕು ಕಾಯಿದೆಯ ಈಗಿನ ಶೇಕಡ 23.6 ಅನುಸರಣೆಯನ್ನು ಕನಿಷ್ಠ 50 ಕ್ಕೆ ಏರಿಸಲಾಗಲಿ, ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ 1,41,358 ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಭರವಷೆಯಾಗಲಿ, ತೀವ್ರ ಅಪೌಷ್ಠಿಕತೆಯನ್ನು ತೊಡೆದು ಹಾಕಲು ಆಡಳಿತ ಸುಧಾರಣಾ ಆಯೋಗ -೨ರ ವರದಿಯು ಪ್ರಸ್ತಾಪಿಸಿದಂತೆ ಮಕ್ಕಳಿಗೆ ವಾರದಲ್ಲಿ 5 ದಿನವೂ ಮೊಟ್ಟೆ ನೀಡುವ ಭರವಷೆಯಾಗಲಿ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸುವ ಅಥವಾ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವ ಅಂಶಗಳೂ ಆಯವ್ಯದಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ ಹಳೆಯ ಬಜೆಟ್‌ನ ಎರಡನೇ ಆವೃತ್ತಿ ಇದಾಗಿದೆ. ಇದು ಹೊಸ ಬಜೆಟ್ ಅಲ್ಲವೇ ಅಲ್ಲ. 2022-23 (ಎರಡನೇ ಆವೃತ್ತಿ) ಆಗಿದೆ ಎಂದು ವಿ.ಪಿ ನಿರಂಜನರಾಧ್ಯರು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...