Homeಕರ್ನಾಟಕಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ.

- Advertisement -
- Advertisement -

2022-23 ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಏನನ್ನು ಘೋಷಿಸಲಾಗಿತ್ತೊ ಅವುಗಳನ್ನು ಪೂರ್ಣಗೊಳಿಸುತ್ತೇವೆ ಎಂದಷ್ಟೆ 2023-24ರ ಈ ವರ್ಷದ ಬಜೆಟ್‌ನಲ್ಲಿ ಹೇಳಲಾಗಿದೆ ಹೊರತು, ಹೊಸತೇನೂ ಇಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ ನಿರಂಜನರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಘೋಷಿಸಿಲ್ಲ. ಆಡಳಿತ ಸುಧಾರಣಾ ಆಯೋಗ-2 ಅಪೌಷ್ಟಿಕತೆ ದೊಡ್ಡ ಮಟ್ಟದಲ್ಲಿದೆ ಎಂದು ವರದಿ ನೀಡಿತ್ತು. ಹಾಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ಕೊಡಬೇಕು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ಕೊಡಬೇಕು ಎಂಬದು ಶಿಫಾರಸ್ಸು ಮಾಡಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1,41,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿಲ್ಲ. ಹಿಂದೆ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರೂ ಆ ಪ್ರಕ್ರಿಯೆಯೇ ಇನ್ನು ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ರಹಿತ ಕನ್ನಡ ಶಾಲೆಗಳು 1994ರಿಂದಲೂ ಅನುದಾನ ಕೊಡಿ ಎಂದು ಕೇಳುತ್ತಾ ಬಂದಿದ್ದಾರೆ. ಅವು ಕನ್ನಡ ಶಾಲೆಗಳಾಗಿದ್ದು ಅನುದಾನ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ ಈ ಬಜೆಟ್‌ನಲ್ಲಿಯೂ ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಇನ್ನು ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ ಎಂದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಆರ್‌ಟಿಇ ಕಾಯ್ದೆಯ ಅನುಸರಣೆ ಕೇವಲ 23% ಇದೆ. ಅದು ಕನಿಷ್ಟ 50%ಗೆ ಏರಿಸಬೇಕೆಂಬುದು ನಮ್ಮ ಹಕ್ಕೊತ್ತಾಯವಾಗಿತ್ತು. ಆದರೆ ಅದನ್ನೂ ಪ್ರಸ್ತಾಪಿಸಿಲ್ಲ. ಇನ್ನು ವರ್ಷವೀಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹೋದಬಂದಲೆಲ್ಲಾ ಮಾತನಾಡುತ್ತಿದ್ದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಪದವನ್ನೇ ಬಳಸಿಲ್ಲ. 5ನೇ ತರಗತಿಯವರೆಗೂ ಕನ್ನಡ ಮಾಧ್ಯಮ ತರುತ್ತೇವೆ ಎಂಬುದಾಗಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂಬುದೆಲ್ಲ ಬರೀ ಸುಳ್ಳು ಎಂಬುದನ್ನು ಈ ಬಜೆಟ್‌ ನಿರೂಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣಕ್ಕೆ ರೂ.31,980 ಕೋಟಿಯನ್ನು ಮೀಸಲಿಡಲಾಗಿತ್ತು. 2022-23 ನೇ ಸಾಲಿನ ಒಟ್ಟು ಆಯವ್ಯಯದಲ್ಲಿ ಶಿಕ್ಷಣದ ಪಾಲು ಶೇಕಡ 12. ಈ ಬಾರಿ ಶಿಕ್ಷಣಕ್ಕೆ 37,960 ಕೋಟಿಯನ್ನು ಮೀಸಲಿಡಲಾಗಿದೆ. ಒಟ್ಟು ಆಯವ್ಯದಲ್ಲಿ ಶಿಕ್ಷಣದ ಪಾಲು ಶೇಕಡ 13.1. ಯಥಾರ್ಥದಲ್ಲಿ, ಶಿಕ್ಷಣಕ್ಕೆ ಕಳೆದ ಬಾರಿಗಿಂತ 5980 ಕೋಟಿ ಹೆಚ್ಚಿನ ಅನುದಾನ ಸಿಕ್ಕಿದ್ದು, ಒಟ್ಟು ಆಯವ್ಯಯದಲ್ಲಿ ಶೇಕಡಾ 13.1 ದೊರೆತಿದ್ದು,  ಶೇಕಡಾವಾರು ಲೆಕ್ಕದಲ್ಲಿ 1.1 ರಷ್ಟು ಹೆಚ್ಚಿದೆ.

ಇದು ತೋರಿಕೆಗೆ ಜಾಸ್ತಿಯೆನಿಸಿದರೂ, ಬಹುತೇಕ ಪಾಲು ಈಗಿನ ಶಿಕ್ಷಕರ ಸಂಬಳ, ಹೆಚ್ಚಿಸಿರುವ ಗೌರವ ಧನ ಹಾಗು ಹಿಂದಿನ ಸಾಲಿನಲ್ಲಿ ಮುಂದುವರಿದಿರುವ ಕಾಮಗಾರಿಗಳಿಗೆ ವ್ಯಯವಾಗುತ್ತದೆ. ಆದ್ದರಿಂದ, ಜ್ವಲಂತ ಸಮಸ್ಯೆಗಳಾಗಿರುವ ಶಿಕ್ಷಣ ಹಕ್ಕು ಕಾಯಿದೆಯ ಈಗಿನ ಶೇಕಡ 23.6 ಅನುಸರಣೆಯನ್ನು ಕನಿಷ್ಠ 50 ಕ್ಕೆ ಏರಿಸಲಾಗಲಿ, ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ 1,41,358 ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಭರವಷೆಯಾಗಲಿ, ತೀವ್ರ ಅಪೌಷ್ಠಿಕತೆಯನ್ನು ತೊಡೆದು ಹಾಕಲು ಆಡಳಿತ ಸುಧಾರಣಾ ಆಯೋಗ -೨ರ ವರದಿಯು ಪ್ರಸ್ತಾಪಿಸಿದಂತೆ ಮಕ್ಕಳಿಗೆ ವಾರದಲ್ಲಿ 5 ದಿನವೂ ಮೊಟ್ಟೆ ನೀಡುವ ಭರವಷೆಯಾಗಲಿ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸುವ ಅಥವಾ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವ ಅಂಶಗಳೂ ಆಯವ್ಯದಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ ಹಳೆಯ ಬಜೆಟ್‌ನ ಎರಡನೇ ಆವೃತ್ತಿ ಇದಾಗಿದೆ. ಇದು ಹೊಸ ಬಜೆಟ್ ಅಲ್ಲವೇ ಅಲ್ಲ. 2022-23 (ಎರಡನೇ ಆವೃತ್ತಿ) ಆಗಿದೆ ಎಂದು ವಿ.ಪಿ ನಿರಂಜನರಾಧ್ಯರು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....