Homeಕರ್ನಾಟಕಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ.

- Advertisement -
- Advertisement -

2022-23 ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಏನನ್ನು ಘೋಷಿಸಲಾಗಿತ್ತೊ ಅವುಗಳನ್ನು ಪೂರ್ಣಗೊಳಿಸುತ್ತೇವೆ ಎಂದಷ್ಟೆ 2023-24ರ ಈ ವರ್ಷದ ಬಜೆಟ್‌ನಲ್ಲಿ ಹೇಳಲಾಗಿದೆ ಹೊರತು, ಹೊಸತೇನೂ ಇಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ ನಿರಂಜನರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಘೋಷಿಸಿಲ್ಲ. ಆಡಳಿತ ಸುಧಾರಣಾ ಆಯೋಗ-2 ಅಪೌಷ್ಟಿಕತೆ ದೊಡ್ಡ ಮಟ್ಟದಲ್ಲಿದೆ ಎಂದು ವರದಿ ನೀಡಿತ್ತು. ಹಾಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ಕೊಡಬೇಕು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ಕೊಡಬೇಕು ಎಂಬದು ಶಿಫಾರಸ್ಸು ಮಾಡಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1,41,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿಲ್ಲ. ಹಿಂದೆ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರೂ ಆ ಪ್ರಕ್ರಿಯೆಯೇ ಇನ್ನು ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ರಹಿತ ಕನ್ನಡ ಶಾಲೆಗಳು 1994ರಿಂದಲೂ ಅನುದಾನ ಕೊಡಿ ಎಂದು ಕೇಳುತ್ತಾ ಬಂದಿದ್ದಾರೆ. ಅವು ಕನ್ನಡ ಶಾಲೆಗಳಾಗಿದ್ದು ಅನುದಾನ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ ಈ ಬಜೆಟ್‌ನಲ್ಲಿಯೂ ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಇನ್ನು ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ ಎಂದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಆರ್‌ಟಿಇ ಕಾಯ್ದೆಯ ಅನುಸರಣೆ ಕೇವಲ 23% ಇದೆ. ಅದು ಕನಿಷ್ಟ 50%ಗೆ ಏರಿಸಬೇಕೆಂಬುದು ನಮ್ಮ ಹಕ್ಕೊತ್ತಾಯವಾಗಿತ್ತು. ಆದರೆ ಅದನ್ನೂ ಪ್ರಸ್ತಾಪಿಸಿಲ್ಲ. ಇನ್ನು ವರ್ಷವೀಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹೋದಬಂದಲೆಲ್ಲಾ ಮಾತನಾಡುತ್ತಿದ್ದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಪದವನ್ನೇ ಬಳಸಿಲ್ಲ. 5ನೇ ತರಗತಿಯವರೆಗೂ ಕನ್ನಡ ಮಾಧ್ಯಮ ತರುತ್ತೇವೆ ಎಂಬುದಾಗಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂಬುದೆಲ್ಲ ಬರೀ ಸುಳ್ಳು ಎಂಬುದನ್ನು ಈ ಬಜೆಟ್‌ ನಿರೂಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣಕ್ಕೆ ರೂ.31,980 ಕೋಟಿಯನ್ನು ಮೀಸಲಿಡಲಾಗಿತ್ತು. 2022-23 ನೇ ಸಾಲಿನ ಒಟ್ಟು ಆಯವ್ಯಯದಲ್ಲಿ ಶಿಕ್ಷಣದ ಪಾಲು ಶೇಕಡ 12. ಈ ಬಾರಿ ಶಿಕ್ಷಣಕ್ಕೆ 37,960 ಕೋಟಿಯನ್ನು ಮೀಸಲಿಡಲಾಗಿದೆ. ಒಟ್ಟು ಆಯವ್ಯದಲ್ಲಿ ಶಿಕ್ಷಣದ ಪಾಲು ಶೇಕಡ 13.1. ಯಥಾರ್ಥದಲ್ಲಿ, ಶಿಕ್ಷಣಕ್ಕೆ ಕಳೆದ ಬಾರಿಗಿಂತ 5980 ಕೋಟಿ ಹೆಚ್ಚಿನ ಅನುದಾನ ಸಿಕ್ಕಿದ್ದು, ಒಟ್ಟು ಆಯವ್ಯಯದಲ್ಲಿ ಶೇಕಡಾ 13.1 ದೊರೆತಿದ್ದು,  ಶೇಕಡಾವಾರು ಲೆಕ್ಕದಲ್ಲಿ 1.1 ರಷ್ಟು ಹೆಚ್ಚಿದೆ.

ಇದು ತೋರಿಕೆಗೆ ಜಾಸ್ತಿಯೆನಿಸಿದರೂ, ಬಹುತೇಕ ಪಾಲು ಈಗಿನ ಶಿಕ್ಷಕರ ಸಂಬಳ, ಹೆಚ್ಚಿಸಿರುವ ಗೌರವ ಧನ ಹಾಗು ಹಿಂದಿನ ಸಾಲಿನಲ್ಲಿ ಮುಂದುವರಿದಿರುವ ಕಾಮಗಾರಿಗಳಿಗೆ ವ್ಯಯವಾಗುತ್ತದೆ. ಆದ್ದರಿಂದ, ಜ್ವಲಂತ ಸಮಸ್ಯೆಗಳಾಗಿರುವ ಶಿಕ್ಷಣ ಹಕ್ಕು ಕಾಯಿದೆಯ ಈಗಿನ ಶೇಕಡ 23.6 ಅನುಸರಣೆಯನ್ನು ಕನಿಷ್ಠ 50 ಕ್ಕೆ ಏರಿಸಲಾಗಲಿ, ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ 1,41,358 ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಭರವಷೆಯಾಗಲಿ, ತೀವ್ರ ಅಪೌಷ್ಠಿಕತೆಯನ್ನು ತೊಡೆದು ಹಾಕಲು ಆಡಳಿತ ಸುಧಾರಣಾ ಆಯೋಗ -೨ರ ವರದಿಯು ಪ್ರಸ್ತಾಪಿಸಿದಂತೆ ಮಕ್ಕಳಿಗೆ ವಾರದಲ್ಲಿ 5 ದಿನವೂ ಮೊಟ್ಟೆ ನೀಡುವ ಭರವಷೆಯಾಗಲಿ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸುವ ಅಥವಾ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವ ಅಂಶಗಳೂ ಆಯವ್ಯದಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ ಹಳೆಯ ಬಜೆಟ್‌ನ ಎರಡನೇ ಆವೃತ್ತಿ ಇದಾಗಿದೆ. ಇದು ಹೊಸ ಬಜೆಟ್ ಅಲ್ಲವೇ ಅಲ್ಲ. 2022-23 (ಎರಡನೇ ಆವೃತ್ತಿ) ಆಗಿದೆ ಎಂದು ವಿ.ಪಿ ನಿರಂಜನರಾಧ್ಯರು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...