HomeUncategorizedಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಇಂದು (ಸೆಪ್ಟೆಂಬರ್ 18) ಸಂಸತ್​​ನ ‘ವಿಶೇಷ’ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನದ ಮೊದಲ ದಿನ ಸಂವಿಧಾನ ರಚನಾ ಸಭೆಯ ರಚನೆಯಿಂದ 75 ವರ್ಷಗಳ ಸಂಸದೀಯ ಪಯಣದ ಕುರಿತು ಮಾತನಾಡಲಾಯಿತು.

ಇಂದಿನಿಂದ ಆರಂಭವಾದ ವಿಶೇಷ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ನಿನ್ನೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಅಜೆಂಡಾದಲ್ಲಿ ಏನಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ನಾವು ಈಗಾಗಲೇ ನಮ್ಮ ಕಾರ್ಯಸೂಚಿಯನ್ನು ಪ್ರಕಟಿಸಿದ್ದೇವೆ, ಇಂದು ಚರ್ಚಿಸಲಿರುವ 75 ವರ್ಷಗಳ ಸಂಸತ್ತಿನ ಪಯಣಕ್ಕೆ ಹಾಜರಾಗಲು ನಾನು ಅವರನ್ನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಸೆ. 19ರಂದು ಹೊಸ ಕಟ್ಟಡದಲ್ಲಿ ಕಲಾಪ ನಡೆಯಲಿದೆ. ರಾಷ್ಟ್ರಗೀತೆಯ ನಂತರ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಲೋಕಸಭೆಯಲ್ಲಿ ಕಲಾಪ ಆರಂಭಿಸಲು ಸದಸ್ಯರು ಸಭೆ ಸೇರುತ್ತಿದ್ದಂತೆ, ಪ್ರತಿಪಕ್ಷಗಳ ಮೈಕ್‌ಗಳನ್ನು ಆಫ್ ಮಾಡಿಲಾಗಿತ್ತು. ಇದು ಕೆಲಕಾಲ ಗದ್ದಲಕ್ಕೆ ಕಾರಣವಾಯಿತು. ನಂತರ ಸ್ಪೀಕರ್ ಓಂ ಬಿರ್ಲಾ ಅವರು ತಾಂತ್ರಿಕ ದೋಷವಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ.

ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ”ಅಟಲ್ ಬಿಹಾರಿ ವಾಜಪೇಯಿ 21 ಬಾರಿ, ಮನಮೋಹನ್ ಸಿಂಗ್ 30 ಬಾರಿ ಹೇಳಿಕೆ ನೀಡಿದ್ದಾರೆ . ಆದಾಗ್ಯೂ ಕೆಲವು ‘ಸಾಂಪ್ರದಾಯಿಕ ಕಾಮೆಂಟ್’ಗಳನ್ನು ಹೊರತುಪಡಿಸಿ, ಪ್ರಧಾನಿ ಮೋದಿ ಕೇವಲ ಎರಡು ಬಾರಿ ಮಾತ್ರ ತಮ್ಮ ಹೇಳಿಕೆಯನ್ನು ನೀಡಿದ್ದಾರೆ” ಎಂದು ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.

ನಿಮ್ಮ ರಾಜಕೀಯ ಮಾಡುವ ವಿಧಾನವನ್ನು ಬದಲಿಸಿ, ಹೊಸ ಸಂಸತ್ ಗೆ ನಾವು ಹೋದರೆ ಹೊಸದೇನೂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವೇಳೆ ಸಭಾಪತಿ ಜಗದೀಪ್ ಧನ್ಖರ್ ಆಕ್ಷೇಪಿಸಿ ಖರ್ಗೆ ವಿಷಯಾಂತರ ಮಾಡುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು.

ರಾಜ್ಯಸಭೆಯಲ್ಲಿ ವಿವಿಧ ಅಧಿವೇಶನಗಳಲ್ಲಿ ನಡೆದಿರುವ ಅಡೆತಡೆಗಳ ಬಗ್ಗೆ ಪ್ರತಿಕ್ರಿಯಿಸಿದ ಧನ್ಖರ್, ಪ್ರತಿಪಕ್ಷಗಳು ಸಭಾಪತಿಯ ನಿರ್ಧಾರವನ್ನು ಅಗೌರವಗೊಳಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

”ನೆಹರೂ ಅವರು ಪ್ರಬಲ ಪ್ರತಿಪಕ್ಷದ ಅನುಪಸ್ಥಿತಿಯು ವ್ಯವಸ್ಥೆಯಲ್ಲಿ ಗಮನಾರ್ಹ ನ್ಯೂನತೆಗಳಿವೆ ಎಂದು ನಂಬುತ್ತಾರೆ, ಯಾವುದೇ ಪ್ರಬಲ ವಿರೋಧವಿಲ್ಲದಿದ್ದರೆ, ಅದು ಸರಿಯಲ್ಲ. ಈಗ, ಪ್ರಬಲ ವಿರೋಧವಿದೆ, ಇಡಿ, ಸಿಬಿಐ ಮೂಲಕ ದುರ್ಬಲಗೊಳಿಸುವುದರ ಮೇಲೆ ಕೇಂದ್ರ ಸರ್ಕಾರ ಗಮನ ಕೇಂದ್ರೀಕರಿಸಿದೆ. ಅವರು ತಮ್ಮ ಪಕ್ಷಕ್ಕೆ ಕರೆದೊಯ್ದು ಅಲ್ಲಿ ವಾಷಿಂಗ್ ಮೆಷಿನ್‌ನಲ್ಲಿ ಕೊಳೆ ತೊಳೆದಂತೆ ಅವರ ಮೇಲಿನ ಅಪರಾಧಗಳನ್ನು ಮನ್ನಿಸಿ ಅವರನ್ನು ತಮ್ಮ ಪಕ್ಷದಲ್ಲಿ ಖಾಯಂ ಮಾಡಿಕೊಳ್ಳುತ್ತಾರೆ. ಇವತ್ತು ಏನಾಗುತ್ತಿದೆ ಎಂಬುದನ್ನು ನೀವು ನೋಡಬಹುದು, ಸಂಸತ್​​ಗೆ ಪ್ರಧಾನಿ ಅಪರೂಪಕ್ಕೆ ಬರುತ್ತಾರೆ. ಅವರು ಅವರ ಕಾರ್ಯಕ್ರಮ ಮಗಿಸಿ ನಂತರ ಹೊರಟು ಹೋಗುತ್ತಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...