HomeUncategorizedಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಇಂದು (ಸೆಪ್ಟೆಂಬರ್ 18) ಸಂಸತ್​​ನ ‘ವಿಶೇಷ’ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನದ ಮೊದಲ ದಿನ ಸಂವಿಧಾನ ರಚನಾ ಸಭೆಯ ರಚನೆಯಿಂದ 75 ವರ್ಷಗಳ ಸಂಸದೀಯ ಪಯಣದ ಕುರಿತು ಮಾತನಾಡಲಾಯಿತು.

ಇಂದಿನಿಂದ ಆರಂಭವಾದ ವಿಶೇಷ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ನಿನ್ನೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಅಜೆಂಡಾದಲ್ಲಿ ಏನಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ನಾವು ಈಗಾಗಲೇ ನಮ್ಮ ಕಾರ್ಯಸೂಚಿಯನ್ನು ಪ್ರಕಟಿಸಿದ್ದೇವೆ, ಇಂದು ಚರ್ಚಿಸಲಿರುವ 75 ವರ್ಷಗಳ ಸಂಸತ್ತಿನ ಪಯಣಕ್ಕೆ ಹಾಜರಾಗಲು ನಾನು ಅವರನ್ನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಸೆ. 19ರಂದು ಹೊಸ ಕಟ್ಟಡದಲ್ಲಿ ಕಲಾಪ ನಡೆಯಲಿದೆ. ರಾಷ್ಟ್ರಗೀತೆಯ ನಂತರ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಲೋಕಸಭೆಯಲ್ಲಿ ಕಲಾಪ ಆರಂಭಿಸಲು ಸದಸ್ಯರು ಸಭೆ ಸೇರುತ್ತಿದ್ದಂತೆ, ಪ್ರತಿಪಕ್ಷಗಳ ಮೈಕ್‌ಗಳನ್ನು ಆಫ್ ಮಾಡಿಲಾಗಿತ್ತು. ಇದು ಕೆಲಕಾಲ ಗದ್ದಲಕ್ಕೆ ಕಾರಣವಾಯಿತು. ನಂತರ ಸ್ಪೀಕರ್ ಓಂ ಬಿರ್ಲಾ ಅವರು ತಾಂತ್ರಿಕ ದೋಷವಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ.

ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ”ಅಟಲ್ ಬಿಹಾರಿ ವಾಜಪೇಯಿ 21 ಬಾರಿ, ಮನಮೋಹನ್ ಸಿಂಗ್ 30 ಬಾರಿ ಹೇಳಿಕೆ ನೀಡಿದ್ದಾರೆ . ಆದಾಗ್ಯೂ ಕೆಲವು ‘ಸಾಂಪ್ರದಾಯಿಕ ಕಾಮೆಂಟ್’ಗಳನ್ನು ಹೊರತುಪಡಿಸಿ, ಪ್ರಧಾನಿ ಮೋದಿ ಕೇವಲ ಎರಡು ಬಾರಿ ಮಾತ್ರ ತಮ್ಮ ಹೇಳಿಕೆಯನ್ನು ನೀಡಿದ್ದಾರೆ” ಎಂದು ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.

ನಿಮ್ಮ ರಾಜಕೀಯ ಮಾಡುವ ವಿಧಾನವನ್ನು ಬದಲಿಸಿ, ಹೊಸ ಸಂಸತ್ ಗೆ ನಾವು ಹೋದರೆ ಹೊಸದೇನೂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವೇಳೆ ಸಭಾಪತಿ ಜಗದೀಪ್ ಧನ್ಖರ್ ಆಕ್ಷೇಪಿಸಿ ಖರ್ಗೆ ವಿಷಯಾಂತರ ಮಾಡುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು.

ರಾಜ್ಯಸಭೆಯಲ್ಲಿ ವಿವಿಧ ಅಧಿವೇಶನಗಳಲ್ಲಿ ನಡೆದಿರುವ ಅಡೆತಡೆಗಳ ಬಗ್ಗೆ ಪ್ರತಿಕ್ರಿಯಿಸಿದ ಧನ್ಖರ್, ಪ್ರತಿಪಕ್ಷಗಳು ಸಭಾಪತಿಯ ನಿರ್ಧಾರವನ್ನು ಅಗೌರವಗೊಳಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

”ನೆಹರೂ ಅವರು ಪ್ರಬಲ ಪ್ರತಿಪಕ್ಷದ ಅನುಪಸ್ಥಿತಿಯು ವ್ಯವಸ್ಥೆಯಲ್ಲಿ ಗಮನಾರ್ಹ ನ್ಯೂನತೆಗಳಿವೆ ಎಂದು ನಂಬುತ್ತಾರೆ, ಯಾವುದೇ ಪ್ರಬಲ ವಿರೋಧವಿಲ್ಲದಿದ್ದರೆ, ಅದು ಸರಿಯಲ್ಲ. ಈಗ, ಪ್ರಬಲ ವಿರೋಧವಿದೆ, ಇಡಿ, ಸಿಬಿಐ ಮೂಲಕ ದುರ್ಬಲಗೊಳಿಸುವುದರ ಮೇಲೆ ಕೇಂದ್ರ ಸರ್ಕಾರ ಗಮನ ಕೇಂದ್ರೀಕರಿಸಿದೆ. ಅವರು ತಮ್ಮ ಪಕ್ಷಕ್ಕೆ ಕರೆದೊಯ್ದು ಅಲ್ಲಿ ವಾಷಿಂಗ್ ಮೆಷಿನ್‌ನಲ್ಲಿ ಕೊಳೆ ತೊಳೆದಂತೆ ಅವರ ಮೇಲಿನ ಅಪರಾಧಗಳನ್ನು ಮನ್ನಿಸಿ ಅವರನ್ನು ತಮ್ಮ ಪಕ್ಷದಲ್ಲಿ ಖಾಯಂ ಮಾಡಿಕೊಳ್ಳುತ್ತಾರೆ. ಇವತ್ತು ಏನಾಗುತ್ತಿದೆ ಎಂಬುದನ್ನು ನೀವು ನೋಡಬಹುದು, ಸಂಸತ್​​ಗೆ ಪ್ರಧಾನಿ ಅಪರೂಪಕ್ಕೆ ಬರುತ್ತಾರೆ. ಅವರು ಅವರ ಕಾರ್ಯಕ್ರಮ ಮಗಿಸಿ ನಂತರ ಹೊರಟು ಹೋಗುತ್ತಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...