HomeUncategorizedಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಇಂದು (ಸೆಪ್ಟೆಂಬರ್ 18) ಸಂಸತ್​​ನ ‘ವಿಶೇಷ’ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನದ ಮೊದಲ ದಿನ ಸಂವಿಧಾನ ರಚನಾ ಸಭೆಯ ರಚನೆಯಿಂದ 75 ವರ್ಷಗಳ ಸಂಸದೀಯ ಪಯಣದ ಕುರಿತು ಮಾತನಾಡಲಾಯಿತು.

ಇಂದಿನಿಂದ ಆರಂಭವಾದ ವಿಶೇಷ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ನಿನ್ನೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಅಜೆಂಡಾದಲ್ಲಿ ಏನಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ನಾವು ಈಗಾಗಲೇ ನಮ್ಮ ಕಾರ್ಯಸೂಚಿಯನ್ನು ಪ್ರಕಟಿಸಿದ್ದೇವೆ, ಇಂದು ಚರ್ಚಿಸಲಿರುವ 75 ವರ್ಷಗಳ ಸಂಸತ್ತಿನ ಪಯಣಕ್ಕೆ ಹಾಜರಾಗಲು ನಾನು ಅವರನ್ನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಸೆ. 19ರಂದು ಹೊಸ ಕಟ್ಟಡದಲ್ಲಿ ಕಲಾಪ ನಡೆಯಲಿದೆ. ರಾಷ್ಟ್ರಗೀತೆಯ ನಂತರ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಲೋಕಸಭೆಯಲ್ಲಿ ಕಲಾಪ ಆರಂಭಿಸಲು ಸದಸ್ಯರು ಸಭೆ ಸೇರುತ್ತಿದ್ದಂತೆ, ಪ್ರತಿಪಕ್ಷಗಳ ಮೈಕ್‌ಗಳನ್ನು ಆಫ್ ಮಾಡಿಲಾಗಿತ್ತು. ಇದು ಕೆಲಕಾಲ ಗದ್ದಲಕ್ಕೆ ಕಾರಣವಾಯಿತು. ನಂತರ ಸ್ಪೀಕರ್ ಓಂ ಬಿರ್ಲಾ ಅವರು ತಾಂತ್ರಿಕ ದೋಷವಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ.

ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ”ಅಟಲ್ ಬಿಹಾರಿ ವಾಜಪೇಯಿ 21 ಬಾರಿ, ಮನಮೋಹನ್ ಸಿಂಗ್ 30 ಬಾರಿ ಹೇಳಿಕೆ ನೀಡಿದ್ದಾರೆ . ಆದಾಗ್ಯೂ ಕೆಲವು ‘ಸಾಂಪ್ರದಾಯಿಕ ಕಾಮೆಂಟ್’ಗಳನ್ನು ಹೊರತುಪಡಿಸಿ, ಪ್ರಧಾನಿ ಮೋದಿ ಕೇವಲ ಎರಡು ಬಾರಿ ಮಾತ್ರ ತಮ್ಮ ಹೇಳಿಕೆಯನ್ನು ನೀಡಿದ್ದಾರೆ” ಎಂದು ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.

ನಿಮ್ಮ ರಾಜಕೀಯ ಮಾಡುವ ವಿಧಾನವನ್ನು ಬದಲಿಸಿ, ಹೊಸ ಸಂಸತ್ ಗೆ ನಾವು ಹೋದರೆ ಹೊಸದೇನೂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವೇಳೆ ಸಭಾಪತಿ ಜಗದೀಪ್ ಧನ್ಖರ್ ಆಕ್ಷೇಪಿಸಿ ಖರ್ಗೆ ವಿಷಯಾಂತರ ಮಾಡುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು.

ರಾಜ್ಯಸಭೆಯಲ್ಲಿ ವಿವಿಧ ಅಧಿವೇಶನಗಳಲ್ಲಿ ನಡೆದಿರುವ ಅಡೆತಡೆಗಳ ಬಗ್ಗೆ ಪ್ರತಿಕ್ರಿಯಿಸಿದ ಧನ್ಖರ್, ಪ್ರತಿಪಕ್ಷಗಳು ಸಭಾಪತಿಯ ನಿರ್ಧಾರವನ್ನು ಅಗೌರವಗೊಳಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

”ನೆಹರೂ ಅವರು ಪ್ರಬಲ ಪ್ರತಿಪಕ್ಷದ ಅನುಪಸ್ಥಿತಿಯು ವ್ಯವಸ್ಥೆಯಲ್ಲಿ ಗಮನಾರ್ಹ ನ್ಯೂನತೆಗಳಿವೆ ಎಂದು ನಂಬುತ್ತಾರೆ, ಯಾವುದೇ ಪ್ರಬಲ ವಿರೋಧವಿಲ್ಲದಿದ್ದರೆ, ಅದು ಸರಿಯಲ್ಲ. ಈಗ, ಪ್ರಬಲ ವಿರೋಧವಿದೆ, ಇಡಿ, ಸಿಬಿಐ ಮೂಲಕ ದುರ್ಬಲಗೊಳಿಸುವುದರ ಮೇಲೆ ಕೇಂದ್ರ ಸರ್ಕಾರ ಗಮನ ಕೇಂದ್ರೀಕರಿಸಿದೆ. ಅವರು ತಮ್ಮ ಪಕ್ಷಕ್ಕೆ ಕರೆದೊಯ್ದು ಅಲ್ಲಿ ವಾಷಿಂಗ್ ಮೆಷಿನ್‌ನಲ್ಲಿ ಕೊಳೆ ತೊಳೆದಂತೆ ಅವರ ಮೇಲಿನ ಅಪರಾಧಗಳನ್ನು ಮನ್ನಿಸಿ ಅವರನ್ನು ತಮ್ಮ ಪಕ್ಷದಲ್ಲಿ ಖಾಯಂ ಮಾಡಿಕೊಳ್ಳುತ್ತಾರೆ. ಇವತ್ತು ಏನಾಗುತ್ತಿದೆ ಎಂಬುದನ್ನು ನೀವು ನೋಡಬಹುದು, ಸಂಸತ್​​ಗೆ ಪ್ರಧಾನಿ ಅಪರೂಪಕ್ಕೆ ಬರುತ್ತಾರೆ. ಅವರು ಅವರ ಕಾರ್ಯಕ್ರಮ ಮಗಿಸಿ ನಂತರ ಹೊರಟು ಹೋಗುತ್ತಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...