HomeUncategorizedಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಹೊಸ ಸಂಸತ್‌ಗೆ ಹೋದರೆ ಹೊಸದೇನೂ ಆಗುವುದಿಲ್ಲ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಇಂದು (ಸೆಪ್ಟೆಂಬರ್ 18) ಸಂಸತ್​​ನ ‘ವಿಶೇಷ’ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನದ ಮೊದಲ ದಿನ ಸಂವಿಧಾನ ರಚನಾ ಸಭೆಯ ರಚನೆಯಿಂದ 75 ವರ್ಷಗಳ ಸಂಸದೀಯ ಪಯಣದ ಕುರಿತು ಮಾತನಾಡಲಾಯಿತು.

ಇಂದಿನಿಂದ ಆರಂಭವಾದ ವಿಶೇಷ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೋಮವಾರ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ನಿನ್ನೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಅಜೆಂಡಾದಲ್ಲಿ ಏನಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ನಾವು ಈಗಾಗಲೇ ನಮ್ಮ ಕಾರ್ಯಸೂಚಿಯನ್ನು ಪ್ರಕಟಿಸಿದ್ದೇವೆ, ಇಂದು ಚರ್ಚಿಸಲಿರುವ 75 ವರ್ಷಗಳ ಸಂಸತ್ತಿನ ಪಯಣಕ್ಕೆ ಹಾಜರಾಗಲು ನಾನು ಅವರನ್ನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಸೆ. 19ರಂದು ಹೊಸ ಕಟ್ಟಡದಲ್ಲಿ ಕಲಾಪ ನಡೆಯಲಿದೆ. ರಾಷ್ಟ್ರಗೀತೆಯ ನಂತರ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಲೋಕಸಭೆಯಲ್ಲಿ ಕಲಾಪ ಆರಂಭಿಸಲು ಸದಸ್ಯರು ಸಭೆ ಸೇರುತ್ತಿದ್ದಂತೆ, ಪ್ರತಿಪಕ್ಷಗಳ ಮೈಕ್‌ಗಳನ್ನು ಆಫ್ ಮಾಡಿಲಾಗಿತ್ತು. ಇದು ಕೆಲಕಾಲ ಗದ್ದಲಕ್ಕೆ ಕಾರಣವಾಯಿತು. ನಂತರ ಸ್ಪೀಕರ್ ಓಂ ಬಿರ್ಲಾ ಅವರು ತಾಂತ್ರಿಕ ದೋಷವಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ.

ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ”ಅಟಲ್ ಬಿಹಾರಿ ವಾಜಪೇಯಿ 21 ಬಾರಿ, ಮನಮೋಹನ್ ಸಿಂಗ್ 30 ಬಾರಿ ಹೇಳಿಕೆ ನೀಡಿದ್ದಾರೆ . ಆದಾಗ್ಯೂ ಕೆಲವು ‘ಸಾಂಪ್ರದಾಯಿಕ ಕಾಮೆಂಟ್’ಗಳನ್ನು ಹೊರತುಪಡಿಸಿ, ಪ್ರಧಾನಿ ಮೋದಿ ಕೇವಲ ಎರಡು ಬಾರಿ ಮಾತ್ರ ತಮ್ಮ ಹೇಳಿಕೆಯನ್ನು ನೀಡಿದ್ದಾರೆ” ಎಂದು ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.

ನಿಮ್ಮ ರಾಜಕೀಯ ಮಾಡುವ ವಿಧಾನವನ್ನು ಬದಲಿಸಿ, ಹೊಸ ಸಂಸತ್ ಗೆ ನಾವು ಹೋದರೆ ಹೊಸದೇನೂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ವೇಳೆ ಸಭಾಪತಿ ಜಗದೀಪ್ ಧನ್ಖರ್ ಆಕ್ಷೇಪಿಸಿ ಖರ್ಗೆ ವಿಷಯಾಂತರ ಮಾಡುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು.

ರಾಜ್ಯಸಭೆಯಲ್ಲಿ ವಿವಿಧ ಅಧಿವೇಶನಗಳಲ್ಲಿ ನಡೆದಿರುವ ಅಡೆತಡೆಗಳ ಬಗ್ಗೆ ಪ್ರತಿಕ್ರಿಯಿಸಿದ ಧನ್ಖರ್, ಪ್ರತಿಪಕ್ಷಗಳು ಸಭಾಪತಿಯ ನಿರ್ಧಾರವನ್ನು ಅಗೌರವಗೊಳಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

”ನೆಹರೂ ಅವರು ಪ್ರಬಲ ಪ್ರತಿಪಕ್ಷದ ಅನುಪಸ್ಥಿತಿಯು ವ್ಯವಸ್ಥೆಯಲ್ಲಿ ಗಮನಾರ್ಹ ನ್ಯೂನತೆಗಳಿವೆ ಎಂದು ನಂಬುತ್ತಾರೆ, ಯಾವುದೇ ಪ್ರಬಲ ವಿರೋಧವಿಲ್ಲದಿದ್ದರೆ, ಅದು ಸರಿಯಲ್ಲ. ಈಗ, ಪ್ರಬಲ ವಿರೋಧವಿದೆ, ಇಡಿ, ಸಿಬಿಐ ಮೂಲಕ ದುರ್ಬಲಗೊಳಿಸುವುದರ ಮೇಲೆ ಕೇಂದ್ರ ಸರ್ಕಾರ ಗಮನ ಕೇಂದ್ರೀಕರಿಸಿದೆ. ಅವರು ತಮ್ಮ ಪಕ್ಷಕ್ಕೆ ಕರೆದೊಯ್ದು ಅಲ್ಲಿ ವಾಷಿಂಗ್ ಮೆಷಿನ್‌ನಲ್ಲಿ ಕೊಳೆ ತೊಳೆದಂತೆ ಅವರ ಮೇಲಿನ ಅಪರಾಧಗಳನ್ನು ಮನ್ನಿಸಿ ಅವರನ್ನು ತಮ್ಮ ಪಕ್ಷದಲ್ಲಿ ಖಾಯಂ ಮಾಡಿಕೊಳ್ಳುತ್ತಾರೆ. ಇವತ್ತು ಏನಾಗುತ್ತಿದೆ ಎಂಬುದನ್ನು ನೀವು ನೋಡಬಹುದು, ಸಂಸತ್​​ಗೆ ಪ್ರಧಾನಿ ಅಪರೂಪಕ್ಕೆ ಬರುತ್ತಾರೆ. ಅವರು ಅವರ ಕಾರ್ಯಕ್ರಮ ಮಗಿಸಿ ನಂತರ ಹೊರಟು ಹೋಗುತ್ತಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ನೆಹರು ಸಂಸತ್ತಿನಲ್ಲಿ ದಣಿವರಿಯದೆ ವಿರೋಧ ಪಕ್ಷದ ಧ್ವನಿಯನ್ನು ಆಲಿಸಿದ್ದರು: ಅಧೀರ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...