Homeಚಳವಳಿ’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ...

’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ…

- Advertisement -
- Advertisement -

ಈಗ ನಮ್ಮ ದೇಶದಾಗ ಹಿಂದೂ ಅನ್ನೋ ಪದ ಎನ್ನುವುದು ಟ್ರೆಂಡಿಂಗ್ ಆಗೇದ. ಒಂದ ಏನಪಾ ಅಂದರ ಹಿಂದೆಲ್ಲಾ ‘ನಾವೆಲ್ಲ ಹಿಂದೂ ಅಂತ ಅಂತಿದ್ದವರು ಈಗ ನಾವಷ್ಟ ಹಿಂದೂ’ ಅಂತ ಅನ್ನಲಿಕ್ಕೆ ಹತ್ಯಾರ.

ಭಾರತ- ಪಾಕಿಸ್ತಾನ ಎರಡೂ ದೇಶಗಳ ಸಾಂಸ್ಕೃತಿಕ ಕೊಂಡಿಯಾಗಿದ್ದ ಜನಪ್ರಿಯ ಕವಿ ಫೈಜ್ ಅಹಮದ್ ಫೈಜ್ ಅವರ ‘ಹಮ್ ದೇಖೇಂಗೆ’ ಅನ್ನೋ ಹಾಡು ಹಿಂದೂ ವಿರೋಧಿ ಅಂತ ಕೆಲವರು ದೂರು ಕೊಟ್ಟಾರ. ಅದು ಹೌದೋ ಅಲ್ಲೋ ಅಂತ ನೋಡಲಿಕ್ಕೆ ಐಐಟಿ ಯವರು ಒಂದು ಸಮಿತಿ ನೇಮಕ ಮಾಡ್ಯಾರ. ವಿಧಾನಸೌಧದ ಮೂರನೇ ಮಹಡಿಯೊಳಗ ಒಂದು ಜೋಕ್ ಅದ. ಯಾವುದರೇ ವಿಷಯಕ್ಕ ಯಾವ ನಿರ್ಧಾರಕ್ಕ ಬರಬೇಕು ಅಂತ ತಿಳೀದೇ ಇದ್ದಾಗ ಒಂದು ಸಮಿತಿ ನೇಮಕ ಮಾಡ್ರಿ.

ಹಿಂಗ ಮಾಡಬಹುದು ಅಂತ ಗೊತ್ತಾದನಂತರ ಅದನ್ನ ಈಗ ಸದ್ಯ ಜಾರಿ ಮಾಡಬಾರದು ಅಂತ ಇದ್ದರ ಅದರ ಪರಾಮರ್ಶೆಗೆ ಇನ್ನೊಂದು ಸಮಿತಿ ನೇಮಿಸಿರಿ ಅಂತ.

ನಾಲ್ಕು ಪ್ಯಾರಾದ ಆ ಹಾಡಿನ್ಯಾಗ ಬಳಸಿದ ಕೆಲವು ಶಬ್ದ ಕೆಲವರಿಗೆ ಕಿರಿಕಿರಿ ಆಗ್ಯಾವು.

ಇದರಾಗಿನ ಒಂದು ಸಾಲು ಇದು- “ದೇವ ಭೂಮಿ ಕಾಬಾದಾಗಿನ ಎಲ್ಲಾ ಮೂರ್ತಿಗಳನ್ನು ತೆಗೆಯಲಾಗತದ”. ಇದು ಇಸ್ಲಾಮಿನ ಇತಿಹಾಸಕ್ಕೆ ಸಂಬಂಧಪಟ್ಟದ್ದು. ಇಸ್ಲಾಂ ಪೂರ್ವ ಅರೇಬಿಯಾದಲ್ಲಿ ಮೂರ್ತಿ ಪೂಜೆ ಇತ್ತು. ಪ್ರವಾದಿ ಮಹಮ್ಮದರು ಮೂರ್ತಿ ಪೂಜೆಯ ವಿರೋಧಿ. ಅವರು ಬದ್ರದ ಯುದ್ಧ ಗೆದ್ದು ಮೆಕ್ಕಾಗೆ ಬಂದನಂತರ ಕಾಬಾದಾಗ ಸುಮಾರು 360 ಮೂರ್ತಿಗಳನ್ನ ಇಟ್ಟದ್ದನ್ನ ನೋಡಿದರು. ಅದರಾಗ ಅಂದಿನ ಪ್ರಮುಖ ದೇವತೆ ಹುಬಾಲನ ವಿಗ್ರಹವೂ ಇತ್ತು.

ಅವನ್ನೆಲ್ಲಾ ಅವರು ಅಲ್ಲಿಂದ ತೆಗೆದರು.
ಫೈಜ್ ಅವರ ಕವನದಲ್ಲಿ ಇದು ಮೂರ್ತಿ ಪೂಜೆಯ ವಿರೋಧದಂತೆ ಕಂಡರೂ, ಅದು ಅಸಲಿಗೆ ಆಧುನಿಕ ಕಾಲದ ವ್ಯಕ್ತಿ ಪೂಜೆಯ ವಿರೋಧವಾಗಿರೋದು.

ಇನ್ನ ಅದರಾಗ “ಎಲ್ಲಾ ಕಡೆ ಅನಲ್ ಹಕ್‍ನ ಘೋಷಣೆ ಹೊಮ್ಮಲಿದೆ” ಅನ್ನೋ ಇನ್ನೊಂದು ಸಾಲು ಅದ. ಇದು “ಅಹಂ ಬ್ರಹ್ಮಾಸ್ಮಿ”ಗೆ ಹತ್ತಿರವಾದದ್ದು.

“ನಾನೇ ದೇವರು, ನಾನೇ ಸತ್ಯ” ಅನ್ನೋದು ಇಸ್ಲಾಂನ ಮೂಲತತ್ವ ಅಲ್ಲ ಅಂತ ವಾದಿಸುವವರು ಇರಬಹುದು. ಆದರೆ ಅದನ್ನೇ ನಂಬಿ ಬದುಕಿದ. ಆ ಘೋಷಣೆ ಕೂಗಿದ್ದಕ್ಕೆ ಫಾಸಿ ಶಿಕ್ಷೆ ಅನುಭವಿಸಿದ ಸೂಫಿ ಮನ್ಸೂರ ಅಂಥವರೂ ಇಲ್ಲೇ ದೆಹಲಿಯೊಳಗ ಇದ್ದರು ಅನ್ನೋದು ನಾವು ಮರೆಯಬಾರದು.

ಅದು ಇರಲಿ ಬಿಡಲಿ. ಅಹಂ ಬ್ರಹ್ಮಾಸ್ಮಿ ಅನ್ನೋದಂತೂ ಚೊಕ್ಕ ಹಿಂದೂ ಧರ್ಮದ ತತ್ವ. ಅದನ್ನು ಯಾರಿಗೂ ನೆನಪು ಮಾಡೋದು ಬ್ಯಾಡ.
ಹಂಗಾರ ಇದರಾಗ ಹಿಂದೂ ವಿರೋಧಿ ಅನ್ನೋದು ಏನು ಐತಿ?
ಹೋಗಲಿ ಬಿಡ್ರಿ. ಹಿಂದೂ ಅಂದರರ ಏನು?

ಇದರ ಬಗ್ಗೆ ತತ್ವಜ್ಞಾನಿಗಳು ತಮ್ಮಳವಿಗೆ ತಿಳಿದಂತೆ ಉತ್ತರ ಕೊಟ್ಟರ ಭಾರತದ ಸರ್ವೋಚ್ಚ ನ್ಯಾಯಾಲಯ ಇನ್ನೊಂದು ಉತ್ತರ ಕೊಟ್ಟದ.

ಇವತ್ತಿಗೆ ಸುಮಾರು 50 ವರ್ಷದ ಹಿಂದೆ ಶಾಸ್ತ್ರಿ ವಿರುದ್ಧ ಮೂಲದಾಸ ಪ್ರಕರಣದಾಗ ನ್ಯಾಯಮೂರ್ತಿ ಪಿ. ಬಿ ಗಜೇಂದ್ರಗಡಕರ ಅವರು ಮತ್ತು ಇತರರು ಇದಕ್ಕೊಂದು ಸರ್ವಮಾನ್ಯ ಅನ್ನೋವಂಥಾ ವ್ಯಾಖ್ಯಾನ ಕೊಟ್ಟಾರ.

“ಹಿಂದೂ ಅಂದರ ಅದು ಒಂದು ಜೀವನಶೈಲಿ ಅಷ್ಟೇ. ಅದಕ್ಕೂ ಹೆಚ್ಚಿನದೇನೂ ಇಲ್ಲ” ಅಂತ ಅಧಿಕಾರಯುತವಾಗಿ ಅವರು ಹೇಳಿದ ಮಾತು ಇವತ್ತಿನವರೆಗೂ ನಮ್ಮ ನ್ಯಾಯಾಲಯಗಳನ್ನ ಕೈಹಿಡಿದು ನಡೆಸುತ್ತಾ ಬಂದದ.

ಆ ತೀರ್ಪಿನೊಳಗ ಕಾಣುವ ಮಾತುಗಳು ಇವು.
“ವೇದಗಳಲ್ಲಿ ವಿಶ್ವಾಸ ಹಾಗೂ ಪುನರ್‍ಜನ್ಮದಲ್ಲಿ ನಂಬಿಕೆ ಮತ್ತು ಜನನಮರಣದ ಚಕ್ರದಿಂದ ಬಿಡುಗಡೆಯೇ ಹಿಂದೂ ಧರ್ಮದಲ್ಲಿ ಜೀವನದ ಅಂತಿಮ ಗುರಿ.

ಇದು ಸಾಧ್ಯವಾಗುವುದು ಅನೇಕ ವಿಧಗಳಿಂದ, ಅನೇಕ ರೀತಿ ರಿವಾಜುಗಳಿಂದ. ಇದಕ್ಕ ಒಂದ ದಾರಿ, ಒಂದ ರೀತಿ, ಒಂದ ಧರ್ಮಸಿಂಧು ಅಂತ ಇಲ್ಲ.

ಕೆಲವರು ಇದು ಜ್ಞಾನದಿಂದ ಸಾಧ್ಯ ಎಂದರೆ ಕೆಲವರು ಕರ್ಮ ಹಾಗೂ ಇನ್ನು ಕೆಲವರು ಭಕ್ತಿಯಿಂದ ಅಂತಾರ. ಸತ್ಯಕ್ಕೆ ಹಲವು ಮುಖ. ಅವುಗಳನ್ನು ಯಾರೂ ಸಂಪೂರ್ಣವಾಗಿ ತಿಳಿಸಲು ಸಾಧ್ಯ ಇಲ್ಲ. ಆದ್ದರಿಂದ ಅವೆಲ್ಲವೂ ಖರೆ.”

“ಇದು ಸತ್ಯ ಅಂತ ಎಲ್ಲರಿಗೂ ಗೊತ್ತು. ಎಲ್ಲರೂ ಅದನ್ನು ಅರ್ಥಮಾಡಿಕೊಂಡಾರ. ಆದ್ದರಿಂದನ ಎಲ್ಲಾರಿಗೂ ಹಿಂದೂ ಧರ್ಮದ ಯಾವುದೇ ಮುಖ ಅಪರಿಚಿತ ಅನ್ನಿಸೋದಿಲ್ಲ. ಯಾರು ಯಾವ ಅಭಿಪ್ರಾಯ ಮಂಡಿಸಿದರೂ ಅದನ್ನು ಒಪ್ಪುವುದು ಸಹಜ. ನಂದ ಖರೇ ಅಂತ ಯಾರಾದರೂ ವಾದಾ ಮಾಡಿದರ ಇರಲೆಪ್ಪ, ನನಗ ನಂದ ಖರೇ ನಿನಗ ನಿಂದ ಖರೇ, ಅಂತ ಹೇಳಿ ಸುಮ್ಮನೇ ಆಗತಾರ. ಸತ್ಯದ ಕಡೆ ಹೋಗೋ ದಾರಿ ಪ್ರತಿಯೊಬ್ಬರದೂ ಬ್ಯಾರೆ ಇರಬಹುದು. ಆದರ ಈ ದಾರಿಯೊಳಗ ಬಂದವರಷ್ಟ ನಮ್ಮವರು, ಆ ದಾರಿಯೊಳಗ ಬಂದವರು ನಮ್ಮವರಲ್ಲಾ ಅಂತ ಹೇಳಲಿಕ್ಕೆ ಬರೋದಿಲ್ಲ. ಇದೇ ಸತ್ಯ. ಹಿಂದೂ ಧರ್ಮದ ಪರಂಪರೆಯೊಳಗ ಇರುವ ಅಗಣಿತ ತಾತ್ವಿಕ ಪರಂಪರೆಗಳು ಎಲ್ಲವೂ ಮಾನ್ಯ. ಯಾವುವೂ ತಿರಸ್ಕಾರಕ್ಕೆ ಯೋಗ್ಯ ಅಲ್ಲ.”

“ಯಾಕೆ ಇಷ್ಟೋಂದು ಪಂಥಗಳು ಆದವು ಅನ್ನೋದು ಸಹಿತ ಆಸಕ್ತಿಕರ ವಿಷಯ. ಅದು ಈ ಧಾರ್ಮಿಕ ಪರಂಪರೆಯೊಳಗಿನ ಸೃಜನಶೀಲ ಚಲನೆಯ ಕುರುಹು. ಸಂತರು, ದಾರ್ಶನಿಕರು, ಈ ಧರ್ಮ ಭ್ರಷ್ಟತೆಯನ್ನ, ಅಂಧ ವಿಶ್ವಾಸವನ್ನ ಎದುರಿಸಿದರು. ಪುರೋಹಿತಶಾಹಿಯ ವಿರುದ್ಧ, ವಿಚಾರಕ್ಕಿಂತ ಆಚರಣೆಯ ಹೆಚ್ಚು ಮಹತ್ವ ಪಡೆಯುವುದರ ವಿರುದ್ಧ, ಸಮರ ಸಾರಿದರು. ಇದರಿಂದಾಗಿಯೇ ನಮಗೆ ಬೇರೆ ಬೇರೆ ಪಂಥ ಅಂತ ಅನ್ನಿಸತಾವು. ಆದರ ಇವು ಎಲ್ಲವೂ ಸತ್ಯವನ್ನು ಕಂಡುಕೊಳ್ಳುವ ವಿವಿಧ ದಾರಿಗಳು ಅಷ್ಟ. ಮೇಲುನೋಟಕ್ಕ ಇವು ಬ್ಯಾರೆ ಅಂತ ಅನ್ನಿಸಿದರೂ ಇವು ಒಳಗೆಲ್ಲಾ ಒಂದೇ.”

“ಈ ಎಲ್ಲಾ ಸಂತರ ವಿಚಾರದ ಮೂಲ ನೋಡಿದಾಗ ಅವು ವೇದಗಳಿಂದ ಬಂದದ್ದವು ಅಂತ ಸ್ಪಷ್ಟವಾಗಿ ಗೊತ್ತಾಗತದ. ವೇದ ಎಂಬ ವೈಚಾರಿಕ ಜಲಾಶಯದಿಂದನ ಇವರಿಗೆಲ್ಲಾ ಸ್ಫೂರ್ತಿ ಸಿಕ್ಕದ. ಅವರ ವಿಚಾರದ ಮೂಲಗಳ ಆಕರ ವೇದ ಎಂಬ ಝರಿ. ಹಿಂದೂ ಧರ್ಮ ಅಪೌರುಶೇಯ. ಇದಕ್ಕೆ ಯಾರೋ ಒಬ್ಬ ಮೂಲ ಪುರುಷ, ಜನಕ ಅಥವಾ ಸ್ಥಾಪಕ ಅಂತ ಇಲ್ಲ. ಒಂದೇ ಸಿದ್ಧಾಂತ ಅಂತ ಇಲ್ಲ. ಹಿಂದೂಗಳು ಒಬ್ಬ ದೇವರನ್ನೇ ಪೂಜಿಸುತ್ತಾರೆ ಅಂತೇನೂ ಇಲ್ಲ. ಒಂದೇ ಕಟ್ಟುಪಾಡುಗಳು, ರೀತಿ ರಿವಾಜುಗಳು ಇಲ್ಲ. ಖರೇ ಹೇಳಬೇಕಂದರ ಧರ್ಮ ಅಂದರ ಹಿಂಗ ಇರಬೇಕು ಅಂತ ನಾವು ಯಾವುದಕ್ಕ ಹೇಳತೇವೋ ಅವು ಯಾವ ಗುಣಗಳೂ ಇದಕ್ಕೆ ಇಲ್ಲ. ಇದೊಂದು ಜೀವನ ಶೈಲಿ ಅಷ್ಟ”.
ನಂತರ ಅಪ್ಪಾ ಬಾಳು ಇಂಗಳೆ ಪ್ರಕರಣದಾಗ ಅಸ್ಪøಶ್ಯತೆ ಎನ್ನುವುದು ಹಿಂದೂ ಧರ್ಮವನ್ನು ನಾವು ಅಪಾರ್ಥ ಮಾಡಿಕೊಂಡಿದ್ದರಿಂದ ಬಂದ ಕೆಡುಕು. ಇದು ಹಿಂದು ಧರ್ಮದ ಭಾಗ ಅಂತ ವಾದ ಮಾಡೋರು ಹಿಂದೂ ಧರ್ಮ ಅರ್ಥಮಾಡಿಕೊಂಡೇ ಇಲ್ಲ ಅನ್ನೋ ಮಾತು ಬಂತು.

ಹಿಂದೂ ಧರ್ಮ ಅನ್ನೋದು ಇಷ್ಟು ಸರಳ ಅಂತಾದರ, ಹಿಂದೂ ವಿರೋಧಿ ಅನ್ನೋದು ಯಾಕ ನಮಗ ಅಷ್ಟ ಕಠಿಣ ಆಗೇದ? ತಿಳಿಯಲಾರದವರೇ ತಿಳಿ ಹೇಳಬೇಕು.

ಅಷ್ಟಕ್ಕೂ ಆಳುವವರು ಕಾವ್ಯ ವಿರೋಧಿಗಳಾಗಿರೋದು ಯಾಕ?
ಅದರ ಉತ್ತರ ಕವಿ ಹಬೀಬ್ ಜಾಲಿಬ್‍ರ ಶಾಯರಿಯೊಳಗ ಐತಿ.

“ಶೇರು ಶಾಯರಿಗಳಿಗೆ ಹೆದರತಾರೋ ಇವರು
ಇರುಳುಗಣ್ಣಿನವರು ಬೆಳಕಿಗೆ ಹೆದರತಾರೋ”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...