Homeಚಳವಳಿ’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ...

’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ…

- Advertisement -
- Advertisement -

ಈಗ ನಮ್ಮ ದೇಶದಾಗ ಹಿಂದೂ ಅನ್ನೋ ಪದ ಎನ್ನುವುದು ಟ್ರೆಂಡಿಂಗ್ ಆಗೇದ. ಒಂದ ಏನಪಾ ಅಂದರ ಹಿಂದೆಲ್ಲಾ ‘ನಾವೆಲ್ಲ ಹಿಂದೂ ಅಂತ ಅಂತಿದ್ದವರು ಈಗ ನಾವಷ್ಟ ಹಿಂದೂ’ ಅಂತ ಅನ್ನಲಿಕ್ಕೆ ಹತ್ಯಾರ.

ಭಾರತ- ಪಾಕಿಸ್ತಾನ ಎರಡೂ ದೇಶಗಳ ಸಾಂಸ್ಕೃತಿಕ ಕೊಂಡಿಯಾಗಿದ್ದ ಜನಪ್ರಿಯ ಕವಿ ಫೈಜ್ ಅಹಮದ್ ಫೈಜ್ ಅವರ ‘ಹಮ್ ದೇಖೇಂಗೆ’ ಅನ್ನೋ ಹಾಡು ಹಿಂದೂ ವಿರೋಧಿ ಅಂತ ಕೆಲವರು ದೂರು ಕೊಟ್ಟಾರ. ಅದು ಹೌದೋ ಅಲ್ಲೋ ಅಂತ ನೋಡಲಿಕ್ಕೆ ಐಐಟಿ ಯವರು ಒಂದು ಸಮಿತಿ ನೇಮಕ ಮಾಡ್ಯಾರ. ವಿಧಾನಸೌಧದ ಮೂರನೇ ಮಹಡಿಯೊಳಗ ಒಂದು ಜೋಕ್ ಅದ. ಯಾವುದರೇ ವಿಷಯಕ್ಕ ಯಾವ ನಿರ್ಧಾರಕ್ಕ ಬರಬೇಕು ಅಂತ ತಿಳೀದೇ ಇದ್ದಾಗ ಒಂದು ಸಮಿತಿ ನೇಮಕ ಮಾಡ್ರಿ.

ಹಿಂಗ ಮಾಡಬಹುದು ಅಂತ ಗೊತ್ತಾದನಂತರ ಅದನ್ನ ಈಗ ಸದ್ಯ ಜಾರಿ ಮಾಡಬಾರದು ಅಂತ ಇದ್ದರ ಅದರ ಪರಾಮರ್ಶೆಗೆ ಇನ್ನೊಂದು ಸಮಿತಿ ನೇಮಿಸಿರಿ ಅಂತ.

ನಾಲ್ಕು ಪ್ಯಾರಾದ ಆ ಹಾಡಿನ್ಯಾಗ ಬಳಸಿದ ಕೆಲವು ಶಬ್ದ ಕೆಲವರಿಗೆ ಕಿರಿಕಿರಿ ಆಗ್ಯಾವು.

ಇದರಾಗಿನ ಒಂದು ಸಾಲು ಇದು- “ದೇವ ಭೂಮಿ ಕಾಬಾದಾಗಿನ ಎಲ್ಲಾ ಮೂರ್ತಿಗಳನ್ನು ತೆಗೆಯಲಾಗತದ”. ಇದು ಇಸ್ಲಾಮಿನ ಇತಿಹಾಸಕ್ಕೆ ಸಂಬಂಧಪಟ್ಟದ್ದು. ಇಸ್ಲಾಂ ಪೂರ್ವ ಅರೇಬಿಯಾದಲ್ಲಿ ಮೂರ್ತಿ ಪೂಜೆ ಇತ್ತು. ಪ್ರವಾದಿ ಮಹಮ್ಮದರು ಮೂರ್ತಿ ಪೂಜೆಯ ವಿರೋಧಿ. ಅವರು ಬದ್ರದ ಯುದ್ಧ ಗೆದ್ದು ಮೆಕ್ಕಾಗೆ ಬಂದನಂತರ ಕಾಬಾದಾಗ ಸುಮಾರು 360 ಮೂರ್ತಿಗಳನ್ನ ಇಟ್ಟದ್ದನ್ನ ನೋಡಿದರು. ಅದರಾಗ ಅಂದಿನ ಪ್ರಮುಖ ದೇವತೆ ಹುಬಾಲನ ವಿಗ್ರಹವೂ ಇತ್ತು.

ಅವನ್ನೆಲ್ಲಾ ಅವರು ಅಲ್ಲಿಂದ ತೆಗೆದರು.
ಫೈಜ್ ಅವರ ಕವನದಲ್ಲಿ ಇದು ಮೂರ್ತಿ ಪೂಜೆಯ ವಿರೋಧದಂತೆ ಕಂಡರೂ, ಅದು ಅಸಲಿಗೆ ಆಧುನಿಕ ಕಾಲದ ವ್ಯಕ್ತಿ ಪೂಜೆಯ ವಿರೋಧವಾಗಿರೋದು.

ಇನ್ನ ಅದರಾಗ “ಎಲ್ಲಾ ಕಡೆ ಅನಲ್ ಹಕ್‍ನ ಘೋಷಣೆ ಹೊಮ್ಮಲಿದೆ” ಅನ್ನೋ ಇನ್ನೊಂದು ಸಾಲು ಅದ. ಇದು “ಅಹಂ ಬ್ರಹ್ಮಾಸ್ಮಿ”ಗೆ ಹತ್ತಿರವಾದದ್ದು.

“ನಾನೇ ದೇವರು, ನಾನೇ ಸತ್ಯ” ಅನ್ನೋದು ಇಸ್ಲಾಂನ ಮೂಲತತ್ವ ಅಲ್ಲ ಅಂತ ವಾದಿಸುವವರು ಇರಬಹುದು. ಆದರೆ ಅದನ್ನೇ ನಂಬಿ ಬದುಕಿದ. ಆ ಘೋಷಣೆ ಕೂಗಿದ್ದಕ್ಕೆ ಫಾಸಿ ಶಿಕ್ಷೆ ಅನುಭವಿಸಿದ ಸೂಫಿ ಮನ್ಸೂರ ಅಂಥವರೂ ಇಲ್ಲೇ ದೆಹಲಿಯೊಳಗ ಇದ್ದರು ಅನ್ನೋದು ನಾವು ಮರೆಯಬಾರದು.

ಅದು ಇರಲಿ ಬಿಡಲಿ. ಅಹಂ ಬ್ರಹ್ಮಾಸ್ಮಿ ಅನ್ನೋದಂತೂ ಚೊಕ್ಕ ಹಿಂದೂ ಧರ್ಮದ ತತ್ವ. ಅದನ್ನು ಯಾರಿಗೂ ನೆನಪು ಮಾಡೋದು ಬ್ಯಾಡ.
ಹಂಗಾರ ಇದರಾಗ ಹಿಂದೂ ವಿರೋಧಿ ಅನ್ನೋದು ಏನು ಐತಿ?
ಹೋಗಲಿ ಬಿಡ್ರಿ. ಹಿಂದೂ ಅಂದರರ ಏನು?

ಇದರ ಬಗ್ಗೆ ತತ್ವಜ್ಞಾನಿಗಳು ತಮ್ಮಳವಿಗೆ ತಿಳಿದಂತೆ ಉತ್ತರ ಕೊಟ್ಟರ ಭಾರತದ ಸರ್ವೋಚ್ಚ ನ್ಯಾಯಾಲಯ ಇನ್ನೊಂದು ಉತ್ತರ ಕೊಟ್ಟದ.

ಇವತ್ತಿಗೆ ಸುಮಾರು 50 ವರ್ಷದ ಹಿಂದೆ ಶಾಸ್ತ್ರಿ ವಿರುದ್ಧ ಮೂಲದಾಸ ಪ್ರಕರಣದಾಗ ನ್ಯಾಯಮೂರ್ತಿ ಪಿ. ಬಿ ಗಜೇಂದ್ರಗಡಕರ ಅವರು ಮತ್ತು ಇತರರು ಇದಕ್ಕೊಂದು ಸರ್ವಮಾನ್ಯ ಅನ್ನೋವಂಥಾ ವ್ಯಾಖ್ಯಾನ ಕೊಟ್ಟಾರ.

“ಹಿಂದೂ ಅಂದರ ಅದು ಒಂದು ಜೀವನಶೈಲಿ ಅಷ್ಟೇ. ಅದಕ್ಕೂ ಹೆಚ್ಚಿನದೇನೂ ಇಲ್ಲ” ಅಂತ ಅಧಿಕಾರಯುತವಾಗಿ ಅವರು ಹೇಳಿದ ಮಾತು ಇವತ್ತಿನವರೆಗೂ ನಮ್ಮ ನ್ಯಾಯಾಲಯಗಳನ್ನ ಕೈಹಿಡಿದು ನಡೆಸುತ್ತಾ ಬಂದದ.

ಆ ತೀರ್ಪಿನೊಳಗ ಕಾಣುವ ಮಾತುಗಳು ಇವು.
“ವೇದಗಳಲ್ಲಿ ವಿಶ್ವಾಸ ಹಾಗೂ ಪುನರ್‍ಜನ್ಮದಲ್ಲಿ ನಂಬಿಕೆ ಮತ್ತು ಜನನಮರಣದ ಚಕ್ರದಿಂದ ಬಿಡುಗಡೆಯೇ ಹಿಂದೂ ಧರ್ಮದಲ್ಲಿ ಜೀವನದ ಅಂತಿಮ ಗುರಿ.

ಇದು ಸಾಧ್ಯವಾಗುವುದು ಅನೇಕ ವಿಧಗಳಿಂದ, ಅನೇಕ ರೀತಿ ರಿವಾಜುಗಳಿಂದ. ಇದಕ್ಕ ಒಂದ ದಾರಿ, ಒಂದ ರೀತಿ, ಒಂದ ಧರ್ಮಸಿಂಧು ಅಂತ ಇಲ್ಲ.

ಕೆಲವರು ಇದು ಜ್ಞಾನದಿಂದ ಸಾಧ್ಯ ಎಂದರೆ ಕೆಲವರು ಕರ್ಮ ಹಾಗೂ ಇನ್ನು ಕೆಲವರು ಭಕ್ತಿಯಿಂದ ಅಂತಾರ. ಸತ್ಯಕ್ಕೆ ಹಲವು ಮುಖ. ಅವುಗಳನ್ನು ಯಾರೂ ಸಂಪೂರ್ಣವಾಗಿ ತಿಳಿಸಲು ಸಾಧ್ಯ ಇಲ್ಲ. ಆದ್ದರಿಂದ ಅವೆಲ್ಲವೂ ಖರೆ.”

“ಇದು ಸತ್ಯ ಅಂತ ಎಲ್ಲರಿಗೂ ಗೊತ್ತು. ಎಲ್ಲರೂ ಅದನ್ನು ಅರ್ಥಮಾಡಿಕೊಂಡಾರ. ಆದ್ದರಿಂದನ ಎಲ್ಲಾರಿಗೂ ಹಿಂದೂ ಧರ್ಮದ ಯಾವುದೇ ಮುಖ ಅಪರಿಚಿತ ಅನ್ನಿಸೋದಿಲ್ಲ. ಯಾರು ಯಾವ ಅಭಿಪ್ರಾಯ ಮಂಡಿಸಿದರೂ ಅದನ್ನು ಒಪ್ಪುವುದು ಸಹಜ. ನಂದ ಖರೇ ಅಂತ ಯಾರಾದರೂ ವಾದಾ ಮಾಡಿದರ ಇರಲೆಪ್ಪ, ನನಗ ನಂದ ಖರೇ ನಿನಗ ನಿಂದ ಖರೇ, ಅಂತ ಹೇಳಿ ಸುಮ್ಮನೇ ಆಗತಾರ. ಸತ್ಯದ ಕಡೆ ಹೋಗೋ ದಾರಿ ಪ್ರತಿಯೊಬ್ಬರದೂ ಬ್ಯಾರೆ ಇರಬಹುದು. ಆದರ ಈ ದಾರಿಯೊಳಗ ಬಂದವರಷ್ಟ ನಮ್ಮವರು, ಆ ದಾರಿಯೊಳಗ ಬಂದವರು ನಮ್ಮವರಲ್ಲಾ ಅಂತ ಹೇಳಲಿಕ್ಕೆ ಬರೋದಿಲ್ಲ. ಇದೇ ಸತ್ಯ. ಹಿಂದೂ ಧರ್ಮದ ಪರಂಪರೆಯೊಳಗ ಇರುವ ಅಗಣಿತ ತಾತ್ವಿಕ ಪರಂಪರೆಗಳು ಎಲ್ಲವೂ ಮಾನ್ಯ. ಯಾವುವೂ ತಿರಸ್ಕಾರಕ್ಕೆ ಯೋಗ್ಯ ಅಲ್ಲ.”

“ಯಾಕೆ ಇಷ್ಟೋಂದು ಪಂಥಗಳು ಆದವು ಅನ್ನೋದು ಸಹಿತ ಆಸಕ್ತಿಕರ ವಿಷಯ. ಅದು ಈ ಧಾರ್ಮಿಕ ಪರಂಪರೆಯೊಳಗಿನ ಸೃಜನಶೀಲ ಚಲನೆಯ ಕುರುಹು. ಸಂತರು, ದಾರ್ಶನಿಕರು, ಈ ಧರ್ಮ ಭ್ರಷ್ಟತೆಯನ್ನ, ಅಂಧ ವಿಶ್ವಾಸವನ್ನ ಎದುರಿಸಿದರು. ಪುರೋಹಿತಶಾಹಿಯ ವಿರುದ್ಧ, ವಿಚಾರಕ್ಕಿಂತ ಆಚರಣೆಯ ಹೆಚ್ಚು ಮಹತ್ವ ಪಡೆಯುವುದರ ವಿರುದ್ಧ, ಸಮರ ಸಾರಿದರು. ಇದರಿಂದಾಗಿಯೇ ನಮಗೆ ಬೇರೆ ಬೇರೆ ಪಂಥ ಅಂತ ಅನ್ನಿಸತಾವು. ಆದರ ಇವು ಎಲ್ಲವೂ ಸತ್ಯವನ್ನು ಕಂಡುಕೊಳ್ಳುವ ವಿವಿಧ ದಾರಿಗಳು ಅಷ್ಟ. ಮೇಲುನೋಟಕ್ಕ ಇವು ಬ್ಯಾರೆ ಅಂತ ಅನ್ನಿಸಿದರೂ ಇವು ಒಳಗೆಲ್ಲಾ ಒಂದೇ.”

“ಈ ಎಲ್ಲಾ ಸಂತರ ವಿಚಾರದ ಮೂಲ ನೋಡಿದಾಗ ಅವು ವೇದಗಳಿಂದ ಬಂದದ್ದವು ಅಂತ ಸ್ಪಷ್ಟವಾಗಿ ಗೊತ್ತಾಗತದ. ವೇದ ಎಂಬ ವೈಚಾರಿಕ ಜಲಾಶಯದಿಂದನ ಇವರಿಗೆಲ್ಲಾ ಸ್ಫೂರ್ತಿ ಸಿಕ್ಕದ. ಅವರ ವಿಚಾರದ ಮೂಲಗಳ ಆಕರ ವೇದ ಎಂಬ ಝರಿ. ಹಿಂದೂ ಧರ್ಮ ಅಪೌರುಶೇಯ. ಇದಕ್ಕೆ ಯಾರೋ ಒಬ್ಬ ಮೂಲ ಪುರುಷ, ಜನಕ ಅಥವಾ ಸ್ಥಾಪಕ ಅಂತ ಇಲ್ಲ. ಒಂದೇ ಸಿದ್ಧಾಂತ ಅಂತ ಇಲ್ಲ. ಹಿಂದೂಗಳು ಒಬ್ಬ ದೇವರನ್ನೇ ಪೂಜಿಸುತ್ತಾರೆ ಅಂತೇನೂ ಇಲ್ಲ. ಒಂದೇ ಕಟ್ಟುಪಾಡುಗಳು, ರೀತಿ ರಿವಾಜುಗಳು ಇಲ್ಲ. ಖರೇ ಹೇಳಬೇಕಂದರ ಧರ್ಮ ಅಂದರ ಹಿಂಗ ಇರಬೇಕು ಅಂತ ನಾವು ಯಾವುದಕ್ಕ ಹೇಳತೇವೋ ಅವು ಯಾವ ಗುಣಗಳೂ ಇದಕ್ಕೆ ಇಲ್ಲ. ಇದೊಂದು ಜೀವನ ಶೈಲಿ ಅಷ್ಟ”.
ನಂತರ ಅಪ್ಪಾ ಬಾಳು ಇಂಗಳೆ ಪ್ರಕರಣದಾಗ ಅಸ್ಪøಶ್ಯತೆ ಎನ್ನುವುದು ಹಿಂದೂ ಧರ್ಮವನ್ನು ನಾವು ಅಪಾರ್ಥ ಮಾಡಿಕೊಂಡಿದ್ದರಿಂದ ಬಂದ ಕೆಡುಕು. ಇದು ಹಿಂದು ಧರ್ಮದ ಭಾಗ ಅಂತ ವಾದ ಮಾಡೋರು ಹಿಂದೂ ಧರ್ಮ ಅರ್ಥಮಾಡಿಕೊಂಡೇ ಇಲ್ಲ ಅನ್ನೋ ಮಾತು ಬಂತು.

ಹಿಂದೂ ಧರ್ಮ ಅನ್ನೋದು ಇಷ್ಟು ಸರಳ ಅಂತಾದರ, ಹಿಂದೂ ವಿರೋಧಿ ಅನ್ನೋದು ಯಾಕ ನಮಗ ಅಷ್ಟ ಕಠಿಣ ಆಗೇದ? ತಿಳಿಯಲಾರದವರೇ ತಿಳಿ ಹೇಳಬೇಕು.

ಅಷ್ಟಕ್ಕೂ ಆಳುವವರು ಕಾವ್ಯ ವಿರೋಧಿಗಳಾಗಿರೋದು ಯಾಕ?
ಅದರ ಉತ್ತರ ಕವಿ ಹಬೀಬ್ ಜಾಲಿಬ್‍ರ ಶಾಯರಿಯೊಳಗ ಐತಿ.

“ಶೇರು ಶಾಯರಿಗಳಿಗೆ ಹೆದರತಾರೋ ಇವರು
ಇರುಳುಗಣ್ಣಿನವರು ಬೆಳಕಿಗೆ ಹೆದರತಾರೋ”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...