Homeಚಳವಳಿ’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ...

’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ…

- Advertisement -
- Advertisement -

ಈಗ ನಮ್ಮ ದೇಶದಾಗ ಹಿಂದೂ ಅನ್ನೋ ಪದ ಎನ್ನುವುದು ಟ್ರೆಂಡಿಂಗ್ ಆಗೇದ. ಒಂದ ಏನಪಾ ಅಂದರ ಹಿಂದೆಲ್ಲಾ ‘ನಾವೆಲ್ಲ ಹಿಂದೂ ಅಂತ ಅಂತಿದ್ದವರು ಈಗ ನಾವಷ್ಟ ಹಿಂದೂ’ ಅಂತ ಅನ್ನಲಿಕ್ಕೆ ಹತ್ಯಾರ.

ಭಾರತ- ಪಾಕಿಸ್ತಾನ ಎರಡೂ ದೇಶಗಳ ಸಾಂಸ್ಕೃತಿಕ ಕೊಂಡಿಯಾಗಿದ್ದ ಜನಪ್ರಿಯ ಕವಿ ಫೈಜ್ ಅಹಮದ್ ಫೈಜ್ ಅವರ ‘ಹಮ್ ದೇಖೇಂಗೆ’ ಅನ್ನೋ ಹಾಡು ಹಿಂದೂ ವಿರೋಧಿ ಅಂತ ಕೆಲವರು ದೂರು ಕೊಟ್ಟಾರ. ಅದು ಹೌದೋ ಅಲ್ಲೋ ಅಂತ ನೋಡಲಿಕ್ಕೆ ಐಐಟಿ ಯವರು ಒಂದು ಸಮಿತಿ ನೇಮಕ ಮಾಡ್ಯಾರ. ವಿಧಾನಸೌಧದ ಮೂರನೇ ಮಹಡಿಯೊಳಗ ಒಂದು ಜೋಕ್ ಅದ. ಯಾವುದರೇ ವಿಷಯಕ್ಕ ಯಾವ ನಿರ್ಧಾರಕ್ಕ ಬರಬೇಕು ಅಂತ ತಿಳೀದೇ ಇದ್ದಾಗ ಒಂದು ಸಮಿತಿ ನೇಮಕ ಮಾಡ್ರಿ.

ಹಿಂಗ ಮಾಡಬಹುದು ಅಂತ ಗೊತ್ತಾದನಂತರ ಅದನ್ನ ಈಗ ಸದ್ಯ ಜಾರಿ ಮಾಡಬಾರದು ಅಂತ ಇದ್ದರ ಅದರ ಪರಾಮರ್ಶೆಗೆ ಇನ್ನೊಂದು ಸಮಿತಿ ನೇಮಿಸಿರಿ ಅಂತ.

ನಾಲ್ಕು ಪ್ಯಾರಾದ ಆ ಹಾಡಿನ್ಯಾಗ ಬಳಸಿದ ಕೆಲವು ಶಬ್ದ ಕೆಲವರಿಗೆ ಕಿರಿಕಿರಿ ಆಗ್ಯಾವು.

ಇದರಾಗಿನ ಒಂದು ಸಾಲು ಇದು- “ದೇವ ಭೂಮಿ ಕಾಬಾದಾಗಿನ ಎಲ್ಲಾ ಮೂರ್ತಿಗಳನ್ನು ತೆಗೆಯಲಾಗತದ”. ಇದು ಇಸ್ಲಾಮಿನ ಇತಿಹಾಸಕ್ಕೆ ಸಂಬಂಧಪಟ್ಟದ್ದು. ಇಸ್ಲಾಂ ಪೂರ್ವ ಅರೇಬಿಯಾದಲ್ಲಿ ಮೂರ್ತಿ ಪೂಜೆ ಇತ್ತು. ಪ್ರವಾದಿ ಮಹಮ್ಮದರು ಮೂರ್ತಿ ಪೂಜೆಯ ವಿರೋಧಿ. ಅವರು ಬದ್ರದ ಯುದ್ಧ ಗೆದ್ದು ಮೆಕ್ಕಾಗೆ ಬಂದನಂತರ ಕಾಬಾದಾಗ ಸುಮಾರು 360 ಮೂರ್ತಿಗಳನ್ನ ಇಟ್ಟದ್ದನ್ನ ನೋಡಿದರು. ಅದರಾಗ ಅಂದಿನ ಪ್ರಮುಖ ದೇವತೆ ಹುಬಾಲನ ವಿಗ್ರಹವೂ ಇತ್ತು.

ಅವನ್ನೆಲ್ಲಾ ಅವರು ಅಲ್ಲಿಂದ ತೆಗೆದರು.
ಫೈಜ್ ಅವರ ಕವನದಲ್ಲಿ ಇದು ಮೂರ್ತಿ ಪೂಜೆಯ ವಿರೋಧದಂತೆ ಕಂಡರೂ, ಅದು ಅಸಲಿಗೆ ಆಧುನಿಕ ಕಾಲದ ವ್ಯಕ್ತಿ ಪೂಜೆಯ ವಿರೋಧವಾಗಿರೋದು.

ಇನ್ನ ಅದರಾಗ “ಎಲ್ಲಾ ಕಡೆ ಅನಲ್ ಹಕ್‍ನ ಘೋಷಣೆ ಹೊಮ್ಮಲಿದೆ” ಅನ್ನೋ ಇನ್ನೊಂದು ಸಾಲು ಅದ. ಇದು “ಅಹಂ ಬ್ರಹ್ಮಾಸ್ಮಿ”ಗೆ ಹತ್ತಿರವಾದದ್ದು.

“ನಾನೇ ದೇವರು, ನಾನೇ ಸತ್ಯ” ಅನ್ನೋದು ಇಸ್ಲಾಂನ ಮೂಲತತ್ವ ಅಲ್ಲ ಅಂತ ವಾದಿಸುವವರು ಇರಬಹುದು. ಆದರೆ ಅದನ್ನೇ ನಂಬಿ ಬದುಕಿದ. ಆ ಘೋಷಣೆ ಕೂಗಿದ್ದಕ್ಕೆ ಫಾಸಿ ಶಿಕ್ಷೆ ಅನುಭವಿಸಿದ ಸೂಫಿ ಮನ್ಸೂರ ಅಂಥವರೂ ಇಲ್ಲೇ ದೆಹಲಿಯೊಳಗ ಇದ್ದರು ಅನ್ನೋದು ನಾವು ಮರೆಯಬಾರದು.

ಅದು ಇರಲಿ ಬಿಡಲಿ. ಅಹಂ ಬ್ರಹ್ಮಾಸ್ಮಿ ಅನ್ನೋದಂತೂ ಚೊಕ್ಕ ಹಿಂದೂ ಧರ್ಮದ ತತ್ವ. ಅದನ್ನು ಯಾರಿಗೂ ನೆನಪು ಮಾಡೋದು ಬ್ಯಾಡ.
ಹಂಗಾರ ಇದರಾಗ ಹಿಂದೂ ವಿರೋಧಿ ಅನ್ನೋದು ಏನು ಐತಿ?
ಹೋಗಲಿ ಬಿಡ್ರಿ. ಹಿಂದೂ ಅಂದರರ ಏನು?

ಇದರ ಬಗ್ಗೆ ತತ್ವಜ್ಞಾನಿಗಳು ತಮ್ಮಳವಿಗೆ ತಿಳಿದಂತೆ ಉತ್ತರ ಕೊಟ್ಟರ ಭಾರತದ ಸರ್ವೋಚ್ಚ ನ್ಯಾಯಾಲಯ ಇನ್ನೊಂದು ಉತ್ತರ ಕೊಟ್ಟದ.

ಇವತ್ತಿಗೆ ಸುಮಾರು 50 ವರ್ಷದ ಹಿಂದೆ ಶಾಸ್ತ್ರಿ ವಿರುದ್ಧ ಮೂಲದಾಸ ಪ್ರಕರಣದಾಗ ನ್ಯಾಯಮೂರ್ತಿ ಪಿ. ಬಿ ಗಜೇಂದ್ರಗಡಕರ ಅವರು ಮತ್ತು ಇತರರು ಇದಕ್ಕೊಂದು ಸರ್ವಮಾನ್ಯ ಅನ್ನೋವಂಥಾ ವ್ಯಾಖ್ಯಾನ ಕೊಟ್ಟಾರ.

“ಹಿಂದೂ ಅಂದರ ಅದು ಒಂದು ಜೀವನಶೈಲಿ ಅಷ್ಟೇ. ಅದಕ್ಕೂ ಹೆಚ್ಚಿನದೇನೂ ಇಲ್ಲ” ಅಂತ ಅಧಿಕಾರಯುತವಾಗಿ ಅವರು ಹೇಳಿದ ಮಾತು ಇವತ್ತಿನವರೆಗೂ ನಮ್ಮ ನ್ಯಾಯಾಲಯಗಳನ್ನ ಕೈಹಿಡಿದು ನಡೆಸುತ್ತಾ ಬಂದದ.

ಆ ತೀರ್ಪಿನೊಳಗ ಕಾಣುವ ಮಾತುಗಳು ಇವು.
“ವೇದಗಳಲ್ಲಿ ವಿಶ್ವಾಸ ಹಾಗೂ ಪುನರ್‍ಜನ್ಮದಲ್ಲಿ ನಂಬಿಕೆ ಮತ್ತು ಜನನಮರಣದ ಚಕ್ರದಿಂದ ಬಿಡುಗಡೆಯೇ ಹಿಂದೂ ಧರ್ಮದಲ್ಲಿ ಜೀವನದ ಅಂತಿಮ ಗುರಿ.

ಇದು ಸಾಧ್ಯವಾಗುವುದು ಅನೇಕ ವಿಧಗಳಿಂದ, ಅನೇಕ ರೀತಿ ರಿವಾಜುಗಳಿಂದ. ಇದಕ್ಕ ಒಂದ ದಾರಿ, ಒಂದ ರೀತಿ, ಒಂದ ಧರ್ಮಸಿಂಧು ಅಂತ ಇಲ್ಲ.

ಕೆಲವರು ಇದು ಜ್ಞಾನದಿಂದ ಸಾಧ್ಯ ಎಂದರೆ ಕೆಲವರು ಕರ್ಮ ಹಾಗೂ ಇನ್ನು ಕೆಲವರು ಭಕ್ತಿಯಿಂದ ಅಂತಾರ. ಸತ್ಯಕ್ಕೆ ಹಲವು ಮುಖ. ಅವುಗಳನ್ನು ಯಾರೂ ಸಂಪೂರ್ಣವಾಗಿ ತಿಳಿಸಲು ಸಾಧ್ಯ ಇಲ್ಲ. ಆದ್ದರಿಂದ ಅವೆಲ್ಲವೂ ಖರೆ.”

“ಇದು ಸತ್ಯ ಅಂತ ಎಲ್ಲರಿಗೂ ಗೊತ್ತು. ಎಲ್ಲರೂ ಅದನ್ನು ಅರ್ಥಮಾಡಿಕೊಂಡಾರ. ಆದ್ದರಿಂದನ ಎಲ್ಲಾರಿಗೂ ಹಿಂದೂ ಧರ್ಮದ ಯಾವುದೇ ಮುಖ ಅಪರಿಚಿತ ಅನ್ನಿಸೋದಿಲ್ಲ. ಯಾರು ಯಾವ ಅಭಿಪ್ರಾಯ ಮಂಡಿಸಿದರೂ ಅದನ್ನು ಒಪ್ಪುವುದು ಸಹಜ. ನಂದ ಖರೇ ಅಂತ ಯಾರಾದರೂ ವಾದಾ ಮಾಡಿದರ ಇರಲೆಪ್ಪ, ನನಗ ನಂದ ಖರೇ ನಿನಗ ನಿಂದ ಖರೇ, ಅಂತ ಹೇಳಿ ಸುಮ್ಮನೇ ಆಗತಾರ. ಸತ್ಯದ ಕಡೆ ಹೋಗೋ ದಾರಿ ಪ್ರತಿಯೊಬ್ಬರದೂ ಬ್ಯಾರೆ ಇರಬಹುದು. ಆದರ ಈ ದಾರಿಯೊಳಗ ಬಂದವರಷ್ಟ ನಮ್ಮವರು, ಆ ದಾರಿಯೊಳಗ ಬಂದವರು ನಮ್ಮವರಲ್ಲಾ ಅಂತ ಹೇಳಲಿಕ್ಕೆ ಬರೋದಿಲ್ಲ. ಇದೇ ಸತ್ಯ. ಹಿಂದೂ ಧರ್ಮದ ಪರಂಪರೆಯೊಳಗ ಇರುವ ಅಗಣಿತ ತಾತ್ವಿಕ ಪರಂಪರೆಗಳು ಎಲ್ಲವೂ ಮಾನ್ಯ. ಯಾವುವೂ ತಿರಸ್ಕಾರಕ್ಕೆ ಯೋಗ್ಯ ಅಲ್ಲ.”

“ಯಾಕೆ ಇಷ್ಟೋಂದು ಪಂಥಗಳು ಆದವು ಅನ್ನೋದು ಸಹಿತ ಆಸಕ್ತಿಕರ ವಿಷಯ. ಅದು ಈ ಧಾರ್ಮಿಕ ಪರಂಪರೆಯೊಳಗಿನ ಸೃಜನಶೀಲ ಚಲನೆಯ ಕುರುಹು. ಸಂತರು, ದಾರ್ಶನಿಕರು, ಈ ಧರ್ಮ ಭ್ರಷ್ಟತೆಯನ್ನ, ಅಂಧ ವಿಶ್ವಾಸವನ್ನ ಎದುರಿಸಿದರು. ಪುರೋಹಿತಶಾಹಿಯ ವಿರುದ್ಧ, ವಿಚಾರಕ್ಕಿಂತ ಆಚರಣೆಯ ಹೆಚ್ಚು ಮಹತ್ವ ಪಡೆಯುವುದರ ವಿರುದ್ಧ, ಸಮರ ಸಾರಿದರು. ಇದರಿಂದಾಗಿಯೇ ನಮಗೆ ಬೇರೆ ಬೇರೆ ಪಂಥ ಅಂತ ಅನ್ನಿಸತಾವು. ಆದರ ಇವು ಎಲ್ಲವೂ ಸತ್ಯವನ್ನು ಕಂಡುಕೊಳ್ಳುವ ವಿವಿಧ ದಾರಿಗಳು ಅಷ್ಟ. ಮೇಲುನೋಟಕ್ಕ ಇವು ಬ್ಯಾರೆ ಅಂತ ಅನ್ನಿಸಿದರೂ ಇವು ಒಳಗೆಲ್ಲಾ ಒಂದೇ.”

“ಈ ಎಲ್ಲಾ ಸಂತರ ವಿಚಾರದ ಮೂಲ ನೋಡಿದಾಗ ಅವು ವೇದಗಳಿಂದ ಬಂದದ್ದವು ಅಂತ ಸ್ಪಷ್ಟವಾಗಿ ಗೊತ್ತಾಗತದ. ವೇದ ಎಂಬ ವೈಚಾರಿಕ ಜಲಾಶಯದಿಂದನ ಇವರಿಗೆಲ್ಲಾ ಸ್ಫೂರ್ತಿ ಸಿಕ್ಕದ. ಅವರ ವಿಚಾರದ ಮೂಲಗಳ ಆಕರ ವೇದ ಎಂಬ ಝರಿ. ಹಿಂದೂ ಧರ್ಮ ಅಪೌರುಶೇಯ. ಇದಕ್ಕೆ ಯಾರೋ ಒಬ್ಬ ಮೂಲ ಪುರುಷ, ಜನಕ ಅಥವಾ ಸ್ಥಾಪಕ ಅಂತ ಇಲ್ಲ. ಒಂದೇ ಸಿದ್ಧಾಂತ ಅಂತ ಇಲ್ಲ. ಹಿಂದೂಗಳು ಒಬ್ಬ ದೇವರನ್ನೇ ಪೂಜಿಸುತ್ತಾರೆ ಅಂತೇನೂ ಇಲ್ಲ. ಒಂದೇ ಕಟ್ಟುಪಾಡುಗಳು, ರೀತಿ ರಿವಾಜುಗಳು ಇಲ್ಲ. ಖರೇ ಹೇಳಬೇಕಂದರ ಧರ್ಮ ಅಂದರ ಹಿಂಗ ಇರಬೇಕು ಅಂತ ನಾವು ಯಾವುದಕ್ಕ ಹೇಳತೇವೋ ಅವು ಯಾವ ಗುಣಗಳೂ ಇದಕ್ಕೆ ಇಲ್ಲ. ಇದೊಂದು ಜೀವನ ಶೈಲಿ ಅಷ್ಟ”.
ನಂತರ ಅಪ್ಪಾ ಬಾಳು ಇಂಗಳೆ ಪ್ರಕರಣದಾಗ ಅಸ್ಪøಶ್ಯತೆ ಎನ್ನುವುದು ಹಿಂದೂ ಧರ್ಮವನ್ನು ನಾವು ಅಪಾರ್ಥ ಮಾಡಿಕೊಂಡಿದ್ದರಿಂದ ಬಂದ ಕೆಡುಕು. ಇದು ಹಿಂದು ಧರ್ಮದ ಭಾಗ ಅಂತ ವಾದ ಮಾಡೋರು ಹಿಂದೂ ಧರ್ಮ ಅರ್ಥಮಾಡಿಕೊಂಡೇ ಇಲ್ಲ ಅನ್ನೋ ಮಾತು ಬಂತು.

ಹಿಂದೂ ಧರ್ಮ ಅನ್ನೋದು ಇಷ್ಟು ಸರಳ ಅಂತಾದರ, ಹಿಂದೂ ವಿರೋಧಿ ಅನ್ನೋದು ಯಾಕ ನಮಗ ಅಷ್ಟ ಕಠಿಣ ಆಗೇದ? ತಿಳಿಯಲಾರದವರೇ ತಿಳಿ ಹೇಳಬೇಕು.

ಅಷ್ಟಕ್ಕೂ ಆಳುವವರು ಕಾವ್ಯ ವಿರೋಧಿಗಳಾಗಿರೋದು ಯಾಕ?
ಅದರ ಉತ್ತರ ಕವಿ ಹಬೀಬ್ ಜಾಲಿಬ್‍ರ ಶಾಯರಿಯೊಳಗ ಐತಿ.

“ಶೇರು ಶಾಯರಿಗಳಿಗೆ ಹೆದರತಾರೋ ಇವರು
ಇರುಳುಗಣ್ಣಿನವರು ಬೆಳಕಿಗೆ ಹೆದರತಾರೋ”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...