Homeಚಳವಳಿ’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ...

’ನಾವು ನೋಡುತ್ತೇವೆ’ ಫೈಜ್ ಕಾವ್ಯದಾಗ ತಪ್ಪು ಕಾಣೂವಲ್ದುರಿ…

- Advertisement -
- Advertisement -

ಈಗ ನಮ್ಮ ದೇಶದಾಗ ಹಿಂದೂ ಅನ್ನೋ ಪದ ಎನ್ನುವುದು ಟ್ರೆಂಡಿಂಗ್ ಆಗೇದ. ಒಂದ ಏನಪಾ ಅಂದರ ಹಿಂದೆಲ್ಲಾ ‘ನಾವೆಲ್ಲ ಹಿಂದೂ ಅಂತ ಅಂತಿದ್ದವರು ಈಗ ನಾವಷ್ಟ ಹಿಂದೂ’ ಅಂತ ಅನ್ನಲಿಕ್ಕೆ ಹತ್ಯಾರ.

ಭಾರತ- ಪಾಕಿಸ್ತಾನ ಎರಡೂ ದೇಶಗಳ ಸಾಂಸ್ಕೃತಿಕ ಕೊಂಡಿಯಾಗಿದ್ದ ಜನಪ್ರಿಯ ಕವಿ ಫೈಜ್ ಅಹಮದ್ ಫೈಜ್ ಅವರ ‘ಹಮ್ ದೇಖೇಂಗೆ’ ಅನ್ನೋ ಹಾಡು ಹಿಂದೂ ವಿರೋಧಿ ಅಂತ ಕೆಲವರು ದೂರು ಕೊಟ್ಟಾರ. ಅದು ಹೌದೋ ಅಲ್ಲೋ ಅಂತ ನೋಡಲಿಕ್ಕೆ ಐಐಟಿ ಯವರು ಒಂದು ಸಮಿತಿ ನೇಮಕ ಮಾಡ್ಯಾರ. ವಿಧಾನಸೌಧದ ಮೂರನೇ ಮಹಡಿಯೊಳಗ ಒಂದು ಜೋಕ್ ಅದ. ಯಾವುದರೇ ವಿಷಯಕ್ಕ ಯಾವ ನಿರ್ಧಾರಕ್ಕ ಬರಬೇಕು ಅಂತ ತಿಳೀದೇ ಇದ್ದಾಗ ಒಂದು ಸಮಿತಿ ನೇಮಕ ಮಾಡ್ರಿ.

ಹಿಂಗ ಮಾಡಬಹುದು ಅಂತ ಗೊತ್ತಾದನಂತರ ಅದನ್ನ ಈಗ ಸದ್ಯ ಜಾರಿ ಮಾಡಬಾರದು ಅಂತ ಇದ್ದರ ಅದರ ಪರಾಮರ್ಶೆಗೆ ಇನ್ನೊಂದು ಸಮಿತಿ ನೇಮಿಸಿರಿ ಅಂತ.

ನಾಲ್ಕು ಪ್ಯಾರಾದ ಆ ಹಾಡಿನ್ಯಾಗ ಬಳಸಿದ ಕೆಲವು ಶಬ್ದ ಕೆಲವರಿಗೆ ಕಿರಿಕಿರಿ ಆಗ್ಯಾವು.

ಇದರಾಗಿನ ಒಂದು ಸಾಲು ಇದು- “ದೇವ ಭೂಮಿ ಕಾಬಾದಾಗಿನ ಎಲ್ಲಾ ಮೂರ್ತಿಗಳನ್ನು ತೆಗೆಯಲಾಗತದ”. ಇದು ಇಸ್ಲಾಮಿನ ಇತಿಹಾಸಕ್ಕೆ ಸಂಬಂಧಪಟ್ಟದ್ದು. ಇಸ್ಲಾಂ ಪೂರ್ವ ಅರೇಬಿಯಾದಲ್ಲಿ ಮೂರ್ತಿ ಪೂಜೆ ಇತ್ತು. ಪ್ರವಾದಿ ಮಹಮ್ಮದರು ಮೂರ್ತಿ ಪೂಜೆಯ ವಿರೋಧಿ. ಅವರು ಬದ್ರದ ಯುದ್ಧ ಗೆದ್ದು ಮೆಕ್ಕಾಗೆ ಬಂದನಂತರ ಕಾಬಾದಾಗ ಸುಮಾರು 360 ಮೂರ್ತಿಗಳನ್ನ ಇಟ್ಟದ್ದನ್ನ ನೋಡಿದರು. ಅದರಾಗ ಅಂದಿನ ಪ್ರಮುಖ ದೇವತೆ ಹುಬಾಲನ ವಿಗ್ರಹವೂ ಇತ್ತು.

ಅವನ್ನೆಲ್ಲಾ ಅವರು ಅಲ್ಲಿಂದ ತೆಗೆದರು.
ಫೈಜ್ ಅವರ ಕವನದಲ್ಲಿ ಇದು ಮೂರ್ತಿ ಪೂಜೆಯ ವಿರೋಧದಂತೆ ಕಂಡರೂ, ಅದು ಅಸಲಿಗೆ ಆಧುನಿಕ ಕಾಲದ ವ್ಯಕ್ತಿ ಪೂಜೆಯ ವಿರೋಧವಾಗಿರೋದು.

ಇನ್ನ ಅದರಾಗ “ಎಲ್ಲಾ ಕಡೆ ಅನಲ್ ಹಕ್‍ನ ಘೋಷಣೆ ಹೊಮ್ಮಲಿದೆ” ಅನ್ನೋ ಇನ್ನೊಂದು ಸಾಲು ಅದ. ಇದು “ಅಹಂ ಬ್ರಹ್ಮಾಸ್ಮಿ”ಗೆ ಹತ್ತಿರವಾದದ್ದು.

“ನಾನೇ ದೇವರು, ನಾನೇ ಸತ್ಯ” ಅನ್ನೋದು ಇಸ್ಲಾಂನ ಮೂಲತತ್ವ ಅಲ್ಲ ಅಂತ ವಾದಿಸುವವರು ಇರಬಹುದು. ಆದರೆ ಅದನ್ನೇ ನಂಬಿ ಬದುಕಿದ. ಆ ಘೋಷಣೆ ಕೂಗಿದ್ದಕ್ಕೆ ಫಾಸಿ ಶಿಕ್ಷೆ ಅನುಭವಿಸಿದ ಸೂಫಿ ಮನ್ಸೂರ ಅಂಥವರೂ ಇಲ್ಲೇ ದೆಹಲಿಯೊಳಗ ಇದ್ದರು ಅನ್ನೋದು ನಾವು ಮರೆಯಬಾರದು.

ಅದು ಇರಲಿ ಬಿಡಲಿ. ಅಹಂ ಬ್ರಹ್ಮಾಸ್ಮಿ ಅನ್ನೋದಂತೂ ಚೊಕ್ಕ ಹಿಂದೂ ಧರ್ಮದ ತತ್ವ. ಅದನ್ನು ಯಾರಿಗೂ ನೆನಪು ಮಾಡೋದು ಬ್ಯಾಡ.
ಹಂಗಾರ ಇದರಾಗ ಹಿಂದೂ ವಿರೋಧಿ ಅನ್ನೋದು ಏನು ಐತಿ?
ಹೋಗಲಿ ಬಿಡ್ರಿ. ಹಿಂದೂ ಅಂದರರ ಏನು?

ಇದರ ಬಗ್ಗೆ ತತ್ವಜ್ಞಾನಿಗಳು ತಮ್ಮಳವಿಗೆ ತಿಳಿದಂತೆ ಉತ್ತರ ಕೊಟ್ಟರ ಭಾರತದ ಸರ್ವೋಚ್ಚ ನ್ಯಾಯಾಲಯ ಇನ್ನೊಂದು ಉತ್ತರ ಕೊಟ್ಟದ.

ಇವತ್ತಿಗೆ ಸುಮಾರು 50 ವರ್ಷದ ಹಿಂದೆ ಶಾಸ್ತ್ರಿ ವಿರುದ್ಧ ಮೂಲದಾಸ ಪ್ರಕರಣದಾಗ ನ್ಯಾಯಮೂರ್ತಿ ಪಿ. ಬಿ ಗಜೇಂದ್ರಗಡಕರ ಅವರು ಮತ್ತು ಇತರರು ಇದಕ್ಕೊಂದು ಸರ್ವಮಾನ್ಯ ಅನ್ನೋವಂಥಾ ವ್ಯಾಖ್ಯಾನ ಕೊಟ್ಟಾರ.

“ಹಿಂದೂ ಅಂದರ ಅದು ಒಂದು ಜೀವನಶೈಲಿ ಅಷ್ಟೇ. ಅದಕ್ಕೂ ಹೆಚ್ಚಿನದೇನೂ ಇಲ್ಲ” ಅಂತ ಅಧಿಕಾರಯುತವಾಗಿ ಅವರು ಹೇಳಿದ ಮಾತು ಇವತ್ತಿನವರೆಗೂ ನಮ್ಮ ನ್ಯಾಯಾಲಯಗಳನ್ನ ಕೈಹಿಡಿದು ನಡೆಸುತ್ತಾ ಬಂದದ.

ಆ ತೀರ್ಪಿನೊಳಗ ಕಾಣುವ ಮಾತುಗಳು ಇವು.
“ವೇದಗಳಲ್ಲಿ ವಿಶ್ವಾಸ ಹಾಗೂ ಪುನರ್‍ಜನ್ಮದಲ್ಲಿ ನಂಬಿಕೆ ಮತ್ತು ಜನನಮರಣದ ಚಕ್ರದಿಂದ ಬಿಡುಗಡೆಯೇ ಹಿಂದೂ ಧರ್ಮದಲ್ಲಿ ಜೀವನದ ಅಂತಿಮ ಗುರಿ.

ಇದು ಸಾಧ್ಯವಾಗುವುದು ಅನೇಕ ವಿಧಗಳಿಂದ, ಅನೇಕ ರೀತಿ ರಿವಾಜುಗಳಿಂದ. ಇದಕ್ಕ ಒಂದ ದಾರಿ, ಒಂದ ರೀತಿ, ಒಂದ ಧರ್ಮಸಿಂಧು ಅಂತ ಇಲ್ಲ.

ಕೆಲವರು ಇದು ಜ್ಞಾನದಿಂದ ಸಾಧ್ಯ ಎಂದರೆ ಕೆಲವರು ಕರ್ಮ ಹಾಗೂ ಇನ್ನು ಕೆಲವರು ಭಕ್ತಿಯಿಂದ ಅಂತಾರ. ಸತ್ಯಕ್ಕೆ ಹಲವು ಮುಖ. ಅವುಗಳನ್ನು ಯಾರೂ ಸಂಪೂರ್ಣವಾಗಿ ತಿಳಿಸಲು ಸಾಧ್ಯ ಇಲ್ಲ. ಆದ್ದರಿಂದ ಅವೆಲ್ಲವೂ ಖರೆ.”

“ಇದು ಸತ್ಯ ಅಂತ ಎಲ್ಲರಿಗೂ ಗೊತ್ತು. ಎಲ್ಲರೂ ಅದನ್ನು ಅರ್ಥಮಾಡಿಕೊಂಡಾರ. ಆದ್ದರಿಂದನ ಎಲ್ಲಾರಿಗೂ ಹಿಂದೂ ಧರ್ಮದ ಯಾವುದೇ ಮುಖ ಅಪರಿಚಿತ ಅನ್ನಿಸೋದಿಲ್ಲ. ಯಾರು ಯಾವ ಅಭಿಪ್ರಾಯ ಮಂಡಿಸಿದರೂ ಅದನ್ನು ಒಪ್ಪುವುದು ಸಹಜ. ನಂದ ಖರೇ ಅಂತ ಯಾರಾದರೂ ವಾದಾ ಮಾಡಿದರ ಇರಲೆಪ್ಪ, ನನಗ ನಂದ ಖರೇ ನಿನಗ ನಿಂದ ಖರೇ, ಅಂತ ಹೇಳಿ ಸುಮ್ಮನೇ ಆಗತಾರ. ಸತ್ಯದ ಕಡೆ ಹೋಗೋ ದಾರಿ ಪ್ರತಿಯೊಬ್ಬರದೂ ಬ್ಯಾರೆ ಇರಬಹುದು. ಆದರ ಈ ದಾರಿಯೊಳಗ ಬಂದವರಷ್ಟ ನಮ್ಮವರು, ಆ ದಾರಿಯೊಳಗ ಬಂದವರು ನಮ್ಮವರಲ್ಲಾ ಅಂತ ಹೇಳಲಿಕ್ಕೆ ಬರೋದಿಲ್ಲ. ಇದೇ ಸತ್ಯ. ಹಿಂದೂ ಧರ್ಮದ ಪರಂಪರೆಯೊಳಗ ಇರುವ ಅಗಣಿತ ತಾತ್ವಿಕ ಪರಂಪರೆಗಳು ಎಲ್ಲವೂ ಮಾನ್ಯ. ಯಾವುವೂ ತಿರಸ್ಕಾರಕ್ಕೆ ಯೋಗ್ಯ ಅಲ್ಲ.”

“ಯಾಕೆ ಇಷ್ಟೋಂದು ಪಂಥಗಳು ಆದವು ಅನ್ನೋದು ಸಹಿತ ಆಸಕ್ತಿಕರ ವಿಷಯ. ಅದು ಈ ಧಾರ್ಮಿಕ ಪರಂಪರೆಯೊಳಗಿನ ಸೃಜನಶೀಲ ಚಲನೆಯ ಕುರುಹು. ಸಂತರು, ದಾರ್ಶನಿಕರು, ಈ ಧರ್ಮ ಭ್ರಷ್ಟತೆಯನ್ನ, ಅಂಧ ವಿಶ್ವಾಸವನ್ನ ಎದುರಿಸಿದರು. ಪುರೋಹಿತಶಾಹಿಯ ವಿರುದ್ಧ, ವಿಚಾರಕ್ಕಿಂತ ಆಚರಣೆಯ ಹೆಚ್ಚು ಮಹತ್ವ ಪಡೆಯುವುದರ ವಿರುದ್ಧ, ಸಮರ ಸಾರಿದರು. ಇದರಿಂದಾಗಿಯೇ ನಮಗೆ ಬೇರೆ ಬೇರೆ ಪಂಥ ಅಂತ ಅನ್ನಿಸತಾವು. ಆದರ ಇವು ಎಲ್ಲವೂ ಸತ್ಯವನ್ನು ಕಂಡುಕೊಳ್ಳುವ ವಿವಿಧ ದಾರಿಗಳು ಅಷ್ಟ. ಮೇಲುನೋಟಕ್ಕ ಇವು ಬ್ಯಾರೆ ಅಂತ ಅನ್ನಿಸಿದರೂ ಇವು ಒಳಗೆಲ್ಲಾ ಒಂದೇ.”

“ಈ ಎಲ್ಲಾ ಸಂತರ ವಿಚಾರದ ಮೂಲ ನೋಡಿದಾಗ ಅವು ವೇದಗಳಿಂದ ಬಂದದ್ದವು ಅಂತ ಸ್ಪಷ್ಟವಾಗಿ ಗೊತ್ತಾಗತದ. ವೇದ ಎಂಬ ವೈಚಾರಿಕ ಜಲಾಶಯದಿಂದನ ಇವರಿಗೆಲ್ಲಾ ಸ್ಫೂರ್ತಿ ಸಿಕ್ಕದ. ಅವರ ವಿಚಾರದ ಮೂಲಗಳ ಆಕರ ವೇದ ಎಂಬ ಝರಿ. ಹಿಂದೂ ಧರ್ಮ ಅಪೌರುಶೇಯ. ಇದಕ್ಕೆ ಯಾರೋ ಒಬ್ಬ ಮೂಲ ಪುರುಷ, ಜನಕ ಅಥವಾ ಸ್ಥಾಪಕ ಅಂತ ಇಲ್ಲ. ಒಂದೇ ಸಿದ್ಧಾಂತ ಅಂತ ಇಲ್ಲ. ಹಿಂದೂಗಳು ಒಬ್ಬ ದೇವರನ್ನೇ ಪೂಜಿಸುತ್ತಾರೆ ಅಂತೇನೂ ಇಲ್ಲ. ಒಂದೇ ಕಟ್ಟುಪಾಡುಗಳು, ರೀತಿ ರಿವಾಜುಗಳು ಇಲ್ಲ. ಖರೇ ಹೇಳಬೇಕಂದರ ಧರ್ಮ ಅಂದರ ಹಿಂಗ ಇರಬೇಕು ಅಂತ ನಾವು ಯಾವುದಕ್ಕ ಹೇಳತೇವೋ ಅವು ಯಾವ ಗುಣಗಳೂ ಇದಕ್ಕೆ ಇಲ್ಲ. ಇದೊಂದು ಜೀವನ ಶೈಲಿ ಅಷ್ಟ”.
ನಂತರ ಅಪ್ಪಾ ಬಾಳು ಇಂಗಳೆ ಪ್ರಕರಣದಾಗ ಅಸ್ಪøಶ್ಯತೆ ಎನ್ನುವುದು ಹಿಂದೂ ಧರ್ಮವನ್ನು ನಾವು ಅಪಾರ್ಥ ಮಾಡಿಕೊಂಡಿದ್ದರಿಂದ ಬಂದ ಕೆಡುಕು. ಇದು ಹಿಂದು ಧರ್ಮದ ಭಾಗ ಅಂತ ವಾದ ಮಾಡೋರು ಹಿಂದೂ ಧರ್ಮ ಅರ್ಥಮಾಡಿಕೊಂಡೇ ಇಲ್ಲ ಅನ್ನೋ ಮಾತು ಬಂತು.

ಹಿಂದೂ ಧರ್ಮ ಅನ್ನೋದು ಇಷ್ಟು ಸರಳ ಅಂತಾದರ, ಹಿಂದೂ ವಿರೋಧಿ ಅನ್ನೋದು ಯಾಕ ನಮಗ ಅಷ್ಟ ಕಠಿಣ ಆಗೇದ? ತಿಳಿಯಲಾರದವರೇ ತಿಳಿ ಹೇಳಬೇಕು.

ಅಷ್ಟಕ್ಕೂ ಆಳುವವರು ಕಾವ್ಯ ವಿರೋಧಿಗಳಾಗಿರೋದು ಯಾಕ?
ಅದರ ಉತ್ತರ ಕವಿ ಹಬೀಬ್ ಜಾಲಿಬ್‍ರ ಶಾಯರಿಯೊಳಗ ಐತಿ.

“ಶೇರು ಶಾಯರಿಗಳಿಗೆ ಹೆದರತಾರೋ ಇವರು
ಇರುಳುಗಣ್ಣಿನವರು ಬೆಳಕಿಗೆ ಹೆದರತಾರೋ”…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...