Homeಕರ್ನಾಟಕಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಇದು ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ‘ದಿ ಫೈಲ್’ ಸಂಪಾದಕರು ಆರೋಪಿಸಿದ್ದಾರೆ

- Advertisement -
- Advertisement -

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಮಾಡಿದ್ದ ಕನ್ನಡದ ಖ್ಯಾತ ತನಿಖಾ ಪೋರ್ಟಲ್ ‘ದಿ ಫೈಲ್‌’ಗೆ ಸೈಬರ್‌ ಪೊಲೀಸ್ ಕೇಂದ್ರ ವಿಭಾಗವೂ ನೋಟಿಸ್ ನೀಡಿದ್ದು, ವರದಿಗಾಗಿ ಸರ್ಕಾರಿ ಕಚೇರಿಯ ಇ-ದಾಖಲೆಗಳನ್ನು ನೀಡಿರುವ ಮಾಹಿತಿದಾರರ ವಿವರಗಳನ್ನು ಒದಗಿಸುಂತೆ ಕೇಳಿಕೊಂಡಿದೆ. ಪೊಲೀಸರ ಈ ಕ್ರಮವನ್ನು ಖಂಡಿಸಿರುವ ‘ದಿ ಫೈಲ್’ ಸಂಸ್ಥಾಪಕ ಜಿ. ಮಹಾಂತೇಶ್‌, ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಸೇರಿದಂತೆ ಒಟ್ಟು ಮೂವರನ್ನು ಸೇವೆಗೆ ಪುನರ್‌ ಸ್ಥಾಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯ ಬಗ್ಗೆಗಿನ ವರದಿಯನ್ನು ದಾಖಲೆ ಸಹಿತ ‘ದಿ ಫೈಲ್’ ದಿನಾಂಕ 2022 ರ ನವೆಂಬರ್‌ 10 ರಂದು ಪ್ರಕಟಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೀಗಾಗಿ ಮಾಹಿತಿ ತಂತ್ರಜ್ಞಾನ ಕಾಯಿದೆ – 2000 ರ ಸೆಕ್ಷನ್ 66 ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ಇಲಾಖೆಯ ಇ-ಆಫೀಸ್ ಪೋರ್ಟಲ್‌ಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕೆ ಮತ್ತು ದಾಖಲೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಹೆಸರಿಸದ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದೆ.

ಅಲ್ಲದೆ, ಸೈಬರ್‌ ಪೊಲೀಸರು ‘ದಿ ಫೈಲ್‌’ಗೆ ನೋಟಿಸ್ ಜಾರಿ ಮಾಡಿದ್ದು, ‘ದಿ ಫೈಲ್‌’ಗೆ ಮಾಹಿತಿ ನೀಡಿದವರ ಹೆಸರು, ಫೋನ್‌ ನಂಬರ್‌, ಐ.ಡಿ. ಫ್ರೂಫ್‌ ಹಾಗೂ ವಿಳಾಸವನ್ನು ತನಿಖೆಗೆ ಒದಗಿಸಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಿದೆ.

ಸೈಬರ್‌‌‌ ಪೊಲೀಸರ ನೋಟಿಸ್‌ಗೆ ‘ದಿ ಫೈಲ್’ ಉತ್ತರಿಸಿದ್ದು, ಈ ವರೆಗೆ ಪೊಲೀಸರಿಂದ ಪ್ರತ್ಯುತ್ತರ ಬಂದಿಲ್ಲ ಎಂದು ‘ದಿ ಫೈಲ್’ ಸಂಪಾದಕ ಜಿ. ಮಹಾಂತೇಶ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಪೊಲೀಸರಿಗೆ ನೀಡಿದ ಉತ್ತರದಲ್ಲಿ,“ ‘ದಿ ಫೈಲ್’ ಸ್ವತಂತ್ರ ಮಾಧ್ಯಮವಾಗಿದ್ದು, ಅದು ತನ್ನ ಸುದ್ದಿಗಳನ್ನು ವೆಬ್‌ಸೈಟ್ ಮುಖಾಂತರ ವರದಿಯನ್ನು ಪ್ರಕಟಿಸುತ್ತದೆ. ಪೊಲೀಸರು ಉಲ್ಲೇಖಿಸಿದ ಪ್ರಕರಣದ ಮಾಹಿತಿಯು ಸರ್ಕಾರಿ ದಾಖಲೆಯ ವಿಷಯವಾಗಿದ್ದು, ಅದು ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಮಾಹಿತಿಯಾಗಿರುತ್ತದೆ. ಅದಲ್ಲದೇ ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿರುತ್ತದೆ” ಎಂದು ಹೇಳಿದೆ.

“ಮಾಧ್ಯಮ ಸಂಸ್ಥೆಯಾಗಿ ಸುದ್ದಿಯ ಮೂಲದ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಅದಲ್ಲದೇ ನೀವು ಕೇಳಿದ ಪ್ರಕರಣ ಮತ್ತುಅದರ ಮಾಹಿತಿಯು ಸರ್ಕಾರಿ ಗೌಪ್ಯತೆ ಕಾಯ್ದೆ 1923 ರ ಅಡಿಯಲ್ಲಿ ಬರುತ್ತದೆಯೋ ಎಂಬ ವಿಷಯವನ್ನು ತಿಳಿಸಿರುವುದಿಲ್ಲ. ಹೀಗಾಗಿ ಪ್ರಕರಣ ಸರ್ಕಾರಿ ಗೌಪ್ಯತಾ ಕಾಯ್ದೆ 1923ರ ಅಡಿಯಲ್ಲಿ ಬರುವ ವಿಷಯವಾಗಿದ್ದಲ್ಲಿ, ನಮಗೆ ತಿಳಿಸಿದಲ್ಲಿ, ನಾವು ತಾವು ಕೇಳಿದ ವಿವರಗಳನ್ನು ಕೊಡುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸರಿಗೆ ‘ದಿ ಫೈಲ್’ ಪ್ರತಿಕ್ರಿಯೆ ನೀಡಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಜಿ. ಮಹಾಂತೇಶ್‌, “ಮಾಹಿತಿದಾರರ ಮೂಲವನ್ನು ಕೇಳಿ ಮಾಧ್ಯಮ ಸಂಸ್ಥೆಗೆ ನೋಟಿಸ್ ಜಾರಿ ಮಾಡುತ್ತಿರುವುದು ಇದುವೆ ಮೊದಲ ಬಾರಿಯಾಗಿದೆ. ಪೊಲೀಸ್ ನೋಟಿಸ್‌ಗೆ ನಾವು ಪ್ರತಿಕ್ರಿಯೆ ನೀಡಿದ್ದು, ಈ ವೆರೆಗೆ ಪ್ರತ್ಯುತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...