Homeಕರ್ನಾಟಕಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಇದು ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ‘ದಿ ಫೈಲ್’ ಸಂಪಾದಕರು ಆರೋಪಿಸಿದ್ದಾರೆ

- Advertisement -
- Advertisement -

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಮಾಡಿದ್ದ ಕನ್ನಡದ ಖ್ಯಾತ ತನಿಖಾ ಪೋರ್ಟಲ್ ‘ದಿ ಫೈಲ್‌’ಗೆ ಸೈಬರ್‌ ಪೊಲೀಸ್ ಕೇಂದ್ರ ವಿಭಾಗವೂ ನೋಟಿಸ್ ನೀಡಿದ್ದು, ವರದಿಗಾಗಿ ಸರ್ಕಾರಿ ಕಚೇರಿಯ ಇ-ದಾಖಲೆಗಳನ್ನು ನೀಡಿರುವ ಮಾಹಿತಿದಾರರ ವಿವರಗಳನ್ನು ಒದಗಿಸುಂತೆ ಕೇಳಿಕೊಂಡಿದೆ. ಪೊಲೀಸರ ಈ ಕ್ರಮವನ್ನು ಖಂಡಿಸಿರುವ ‘ದಿ ಫೈಲ್’ ಸಂಸ್ಥಾಪಕ ಜಿ. ಮಹಾಂತೇಶ್‌, ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಸೇರಿದಂತೆ ಒಟ್ಟು ಮೂವರನ್ನು ಸೇವೆಗೆ ಪುನರ್‌ ಸ್ಥಾಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯ ಬಗ್ಗೆಗಿನ ವರದಿಯನ್ನು ದಾಖಲೆ ಸಹಿತ ‘ದಿ ಫೈಲ್’ ದಿನಾಂಕ 2022 ರ ನವೆಂಬರ್‌ 10 ರಂದು ಪ್ರಕಟಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೀಗಾಗಿ ಮಾಹಿತಿ ತಂತ್ರಜ್ಞಾನ ಕಾಯಿದೆ – 2000 ರ ಸೆಕ್ಷನ್ 66 ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ಇಲಾಖೆಯ ಇ-ಆಫೀಸ್ ಪೋರ್ಟಲ್‌ಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕೆ ಮತ್ತು ದಾಖಲೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಹೆಸರಿಸದ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದೆ.

ಅಲ್ಲದೆ, ಸೈಬರ್‌ ಪೊಲೀಸರು ‘ದಿ ಫೈಲ್‌’ಗೆ ನೋಟಿಸ್ ಜಾರಿ ಮಾಡಿದ್ದು, ‘ದಿ ಫೈಲ್‌’ಗೆ ಮಾಹಿತಿ ನೀಡಿದವರ ಹೆಸರು, ಫೋನ್‌ ನಂಬರ್‌, ಐ.ಡಿ. ಫ್ರೂಫ್‌ ಹಾಗೂ ವಿಳಾಸವನ್ನು ತನಿಖೆಗೆ ಒದಗಿಸಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಿದೆ.

ಸೈಬರ್‌‌‌ ಪೊಲೀಸರ ನೋಟಿಸ್‌ಗೆ ‘ದಿ ಫೈಲ್’ ಉತ್ತರಿಸಿದ್ದು, ಈ ವರೆಗೆ ಪೊಲೀಸರಿಂದ ಪ್ರತ್ಯುತ್ತರ ಬಂದಿಲ್ಲ ಎಂದು ‘ದಿ ಫೈಲ್’ ಸಂಪಾದಕ ಜಿ. ಮಹಾಂತೇಶ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಪೊಲೀಸರಿಗೆ ನೀಡಿದ ಉತ್ತರದಲ್ಲಿ,“ ‘ದಿ ಫೈಲ್’ ಸ್ವತಂತ್ರ ಮಾಧ್ಯಮವಾಗಿದ್ದು, ಅದು ತನ್ನ ಸುದ್ದಿಗಳನ್ನು ವೆಬ್‌ಸೈಟ್ ಮುಖಾಂತರ ವರದಿಯನ್ನು ಪ್ರಕಟಿಸುತ್ತದೆ. ಪೊಲೀಸರು ಉಲ್ಲೇಖಿಸಿದ ಪ್ರಕರಣದ ಮಾಹಿತಿಯು ಸರ್ಕಾರಿ ದಾಖಲೆಯ ವಿಷಯವಾಗಿದ್ದು, ಅದು ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಮಾಹಿತಿಯಾಗಿರುತ್ತದೆ. ಅದಲ್ಲದೇ ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿರುತ್ತದೆ” ಎಂದು ಹೇಳಿದೆ.

“ಮಾಧ್ಯಮ ಸಂಸ್ಥೆಯಾಗಿ ಸುದ್ದಿಯ ಮೂಲದ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಅದಲ್ಲದೇ ನೀವು ಕೇಳಿದ ಪ್ರಕರಣ ಮತ್ತುಅದರ ಮಾಹಿತಿಯು ಸರ್ಕಾರಿ ಗೌಪ್ಯತೆ ಕಾಯ್ದೆ 1923 ರ ಅಡಿಯಲ್ಲಿ ಬರುತ್ತದೆಯೋ ಎಂಬ ವಿಷಯವನ್ನು ತಿಳಿಸಿರುವುದಿಲ್ಲ. ಹೀಗಾಗಿ ಪ್ರಕರಣ ಸರ್ಕಾರಿ ಗೌಪ್ಯತಾ ಕಾಯ್ದೆ 1923ರ ಅಡಿಯಲ್ಲಿ ಬರುವ ವಿಷಯವಾಗಿದ್ದಲ್ಲಿ, ನಮಗೆ ತಿಳಿಸಿದಲ್ಲಿ, ನಾವು ತಾವು ಕೇಳಿದ ವಿವರಗಳನ್ನು ಕೊಡುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸರಿಗೆ ‘ದಿ ಫೈಲ್’ ಪ್ರತಿಕ್ರಿಯೆ ನೀಡಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಜಿ. ಮಹಾಂತೇಶ್‌, “ಮಾಹಿತಿದಾರರ ಮೂಲವನ್ನು ಕೇಳಿ ಮಾಧ್ಯಮ ಸಂಸ್ಥೆಗೆ ನೋಟಿಸ್ ಜಾರಿ ಮಾಡುತ್ತಿರುವುದು ಇದುವೆ ಮೊದಲ ಬಾರಿಯಾಗಿದೆ. ಪೊಲೀಸ್ ನೋಟಿಸ್‌ಗೆ ನಾವು ಪ್ರತಿಕ್ರಿಯೆ ನೀಡಿದ್ದು, ಈ ವೆರೆಗೆ ಪ್ರತ್ಯುತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...