Homeಕರ್ನಾಟಕಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಪ್ರಕಟಿಸಿದ ‘ದಿ ಫೈಲ್‌’ಗೆ ಪೊಲೀಸರಿಂದ ನೋಟಿಸ್

ಇದು ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ‘ದಿ ಫೈಲ್’ ಸಂಪಾದಕರು ಆರೋಪಿಸಿದ್ದಾರೆ

- Advertisement -
- Advertisement -

ಶಿಕ್ಷಣ ಇಲಾಖೆಯ ಅಕ್ರಮದ ಬಗ್ಗೆ ವರದಿ ಮಾಡಿದ್ದ ಕನ್ನಡದ ಖ್ಯಾತ ತನಿಖಾ ಪೋರ್ಟಲ್ ‘ದಿ ಫೈಲ್‌’ಗೆ ಸೈಬರ್‌ ಪೊಲೀಸ್ ಕೇಂದ್ರ ವಿಭಾಗವೂ ನೋಟಿಸ್ ನೀಡಿದ್ದು, ವರದಿಗಾಗಿ ಸರ್ಕಾರಿ ಕಚೇರಿಯ ಇ-ದಾಖಲೆಗಳನ್ನು ನೀಡಿರುವ ಮಾಹಿತಿದಾರರ ವಿವರಗಳನ್ನು ಒದಗಿಸುಂತೆ ಕೇಳಿಕೊಂಡಿದೆ. ಪೊಲೀಸರ ಈ ಕ್ರಮವನ್ನು ಖಂಡಿಸಿರುವ ‘ದಿ ಫೈಲ್’ ಸಂಸ್ಥಾಪಕ ಜಿ. ಮಹಾಂತೇಶ್‌, ತನಿಖಾ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಸೇರಿದಂತೆ ಒಟ್ಟು ಮೂವರನ್ನು ಸೇವೆಗೆ ಪುನರ್‌ ಸ್ಥಾಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯ ಬಗ್ಗೆಗಿನ ವರದಿಯನ್ನು ದಾಖಲೆ ಸಹಿತ ‘ದಿ ಫೈಲ್’ ದಿನಾಂಕ 2022 ರ ನವೆಂಬರ್‌ 10 ರಂದು ಪ್ರಕಟಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೀಗಾಗಿ ಮಾಹಿತಿ ತಂತ್ರಜ್ಞಾನ ಕಾಯಿದೆ – 2000 ರ ಸೆಕ್ಷನ್ 66 ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ಇಲಾಖೆಯ ಇ-ಆಫೀಸ್ ಪೋರ್ಟಲ್‌ಗೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕೆ ಮತ್ತು ದಾಖಲೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಹೆಸರಿಸದ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದೆ.

ಅಲ್ಲದೆ, ಸೈಬರ್‌ ಪೊಲೀಸರು ‘ದಿ ಫೈಲ್‌’ಗೆ ನೋಟಿಸ್ ಜಾರಿ ಮಾಡಿದ್ದು, ‘ದಿ ಫೈಲ್‌’ಗೆ ಮಾಹಿತಿ ನೀಡಿದವರ ಹೆಸರು, ಫೋನ್‌ ನಂಬರ್‌, ಐ.ಡಿ. ಫ್ರೂಫ್‌ ಹಾಗೂ ವಿಳಾಸವನ್ನು ತನಿಖೆಗೆ ಒದಗಿಸಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಿದೆ.

ಸೈಬರ್‌‌‌ ಪೊಲೀಸರ ನೋಟಿಸ್‌ಗೆ ‘ದಿ ಫೈಲ್’ ಉತ್ತರಿಸಿದ್ದು, ಈ ವರೆಗೆ ಪೊಲೀಸರಿಂದ ಪ್ರತ್ಯುತ್ತರ ಬಂದಿಲ್ಲ ಎಂದು ‘ದಿ ಫೈಲ್’ ಸಂಪಾದಕ ಜಿ. ಮಹಾಂತೇಶ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ಪೊಲೀಸರಿಗೆ ನೀಡಿದ ಉತ್ತರದಲ್ಲಿ,“ ‘ದಿ ಫೈಲ್’ ಸ್ವತಂತ್ರ ಮಾಧ್ಯಮವಾಗಿದ್ದು, ಅದು ತನ್ನ ಸುದ್ದಿಗಳನ್ನು ವೆಬ್‌ಸೈಟ್ ಮುಖಾಂತರ ವರದಿಯನ್ನು ಪ್ರಕಟಿಸುತ್ತದೆ. ಪೊಲೀಸರು ಉಲ್ಲೇಖಿಸಿದ ಪ್ರಕರಣದ ಮಾಹಿತಿಯು ಸರ್ಕಾರಿ ದಾಖಲೆಯ ವಿಷಯವಾಗಿದ್ದು, ಅದು ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಮಾಹಿತಿಯಾಗಿರುತ್ತದೆ. ಅದಲ್ಲದೇ ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿರುತ್ತದೆ” ಎಂದು ಹೇಳಿದೆ.

“ಮಾಧ್ಯಮ ಸಂಸ್ಥೆಯಾಗಿ ಸುದ್ದಿಯ ಮೂಲದ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಅದಲ್ಲದೇ ನೀವು ಕೇಳಿದ ಪ್ರಕರಣ ಮತ್ತುಅದರ ಮಾಹಿತಿಯು ಸರ್ಕಾರಿ ಗೌಪ್ಯತೆ ಕಾಯ್ದೆ 1923 ರ ಅಡಿಯಲ್ಲಿ ಬರುತ್ತದೆಯೋ ಎಂಬ ವಿಷಯವನ್ನು ತಿಳಿಸಿರುವುದಿಲ್ಲ. ಹೀಗಾಗಿ ಪ್ರಕರಣ ಸರ್ಕಾರಿ ಗೌಪ್ಯತಾ ಕಾಯ್ದೆ 1923ರ ಅಡಿಯಲ್ಲಿ ಬರುವ ವಿಷಯವಾಗಿದ್ದಲ್ಲಿ, ನಮಗೆ ತಿಳಿಸಿದಲ್ಲಿ, ನಾವು ತಾವು ಕೇಳಿದ ವಿವರಗಳನ್ನು ಕೊಡುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸರಿಗೆ ‘ದಿ ಫೈಲ್’ ಪ್ರತಿಕ್ರಿಯೆ ನೀಡಿದೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಜಿ. ಮಹಾಂತೇಶ್‌, “ಮಾಹಿತಿದಾರರ ಮೂಲವನ್ನು ಕೇಳಿ ಮಾಧ್ಯಮ ಸಂಸ್ಥೆಗೆ ನೋಟಿಸ್ ಜಾರಿ ಮಾಡುತ್ತಿರುವುದು ಇದುವೆ ಮೊದಲ ಬಾರಿಯಾಗಿದೆ. ಪೊಲೀಸ್ ನೋಟಿಸ್‌ಗೆ ನಾವು ಪ್ರತಿಕ್ರಿಯೆ ನೀಡಿದ್ದು, ಈ ವೆರೆಗೆ ಪ್ರತ್ಯುತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...